ಸವಿಧಾನದ ರಕ್ಷಣೆ ಸೌಹಾರ್ದ ಸಮಾಜಕ್ಕಾಗಿ ಭೀಮಾ ಅರ್ಮಿ ಪ್ರತಿಭಟನೆ

ಜೇವರ್ಗಿ: ಇತ್ತೀಚಿನ ದಿನಗಳಲ್ಲಿ ನಮ್ಮ ಭಾರತ ದೇಶದಲ್ಲಿ ಮೂಲಭೂತವಾದಿ ಹಾಗೂ ಕೋಮುವಾದಿ ಶಕ್ತಿಗಳು ದೊಡ್ಡ ಪ್ರಮಾಣದಲ್ಲಿ ತಲೆಯೆತ್ತುವ ಮೂಲಕ ರಾಷ್ಟ್ರದ ಐಕ್ಯತೆಗೆ ಭಂಗ ತಂದಿವೆ ಎಂದು ತಾಲೂಕ ಭೀಮ ಅರ್ಮಿ ಆರೋಪಿಸಿದೆ.

ಜನರ ಮಧ್ಯೆ ಮನೆಗಳು ಹಾಗೂ ಮನಸ್ಸುಗಳ ಮಧ್ಯೆ ದ್ವೇಷ, ಹಿಂಸೆ, ಅಸೂಯೆ, ಅಪನಂಬಿಕೆಗಳನ್ನು ಹುಟ್ಟುಹಾಕಿ ಈ ಮೂಲಕ ರಾಜಕಾರಣ, ಆಡಳಿತ ,ಶಿಕ್ಷಣ ,ಸಿನಿಮಾ, ಸಂಗೀತ ,ಪೊಲೀಸ್ ಇಲಾಖೆ ಸೇರಿದಂತೆ ಪವಿತ್ರವಾದ ಶಿಕ್ಷಣದಲ್ಲಿಯೂ ಪಟ್ಟಭದ್ರ ಹಿತಾಸಕ್ತಿಗಳು ಪ್ರವೇಶ ಮಾಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಡಳಿತ ನಡೆಸುತ್ತಿರುವ ಸರಕಾರವು ಸಂವಿಧಾನದ ಆಶಯಗಳನ್ನು ಗಾಳಿಗೆ ತೋರಿದೆ, ಧರ್ಮನಿರಪೇಕ್ಷತೆ ಭಾವನೆಯನ್ನು ಹುಟ್ಟುಹಾಕದೆ ಧರ್ಮಾಂಧತೆಯನ್ನು ಬೆಳೆಸುತ್ತಿವೆ. ಸಂವಿಧಾನದ ಮೂಲ ಆಶಯಕ್ಕೆ ಕೊಡಲಿ ಪೆಟ್ಟು ಬೀಳುತ್ತದೆ. ಇದನ್ನು ಖಂಡಿಸುವುದು ಪ್ರಜ್ಞಾವಂತ ನಾಗರಿಕರ ಕರ್ತವ್ಯವಾಗಿದೆ ಇದು ಅತ್ಯಂತ ಅಗತ್ಯ ಹಾಗೂ ಅನಿವಾರ್ಯ ವಾಗಿದೆ.

ಜೇವರ್ಗಿ ಪಟ್ಟಣದಲ್ಲಿ ಇದೇ ಜೂನ್ 7ರಂದು ಬೆಳಗ್ಗೆ 11 ಗಂಟೆಗೆ ಇಲ್ಲಿನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಭವನದಿಂದ ಮಿನಿವಿಧಾನಸೌಧದ ವರೆಗೂ ಭೀಮಾರ್ಮಿ ಜೇವರ್ಗಿ ತಾಲೂಕ ಸಂಘಟನೆಯಿಂದ ಸೌಹಾರ್ದ ಸಮಾಜಕ್ಕಾಗಿ ಸಂವಿಧಾನದ ರಕ್ಷಣೆಗಾಗಿ ನಮ್ಮ ನಡೆ ಎನ್ನುವ ಘೋಷಣೆಯೊಂದಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ತಾಲೂಕು ಅಂಬೇಡ್ಕರ್ ಅಭಿಮಾನಿಗಳು ಹಾಗೂ ಸಮಸ್ತ ತಾಲೂಕಿನ ಪ್ರಗತಿಪರ ಚಿಂತಕರು ವಿವಿಧ ಸಂಘಟನೆ ಮುಖಂಡರು ಪ್ರಜ್ಞಾವಂತ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಭೀಮಾರ್ಮಿ ತಾಲೂಕ ಸಮಿತಿ ಕೋರಿದೆ.

ರಾಷ್ಟ್ರೀಯ ಸಂಘಟನೆಯ ಸಚಿವರಾದ ಯಶ್ಪಾಲ್ ಬೋರೆ, ರಾಜ್ಯ ಅಧ್ಯಕ್ಷರಾದ ಮತಿನ್ ಕುಮಾರ್ ಸೇರಿದಂತೆ ಜಿಲ್ಲಾಧ್ಯಕ್ಷರಾದ ಸೂರ್ಯಕಾಂತ್ ಜಿಡಗಾ, ಜಿಲ್ಲಾ ಉಪಾಧ್ಯಕ್ಷರಾದ ಮಹಮ್ಮದ್ ಹನೀಫ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಬಂಗರಗಿ ಸೇರಿದಂತೆ ಸಂಘಟನಾ ಕಾರ್ಯದರ್ಶಿ ಗುಂಡಪ್ಪ ಮಾಳಗೆ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

ಎಂದು ಪತ್ರಿಕಾ ಪ್ರಕಟಣೆ ಮೂಲಕ ಭೀಮ ಅರ್ಮಿ ತಾಲೂಕು ಸಮಿತಿ ಜೇವರ್ಗಿ ಅಧ್ಯಕ್ಷರಾದ ಸುಭಾಷ್ ಎಸ್,ಆಲೂರು. ಗೌರವಾಧ್ಯಕ್ಷರಾದ ಅಬ್ದುಲ್ ಗನಿ. ಉಪಾಧ್ಯಕ್ಷರಾದ ವಿಶ್ವರಾಧ್ಯ ಗೋಪಾಲಕರ, ಪ್ರಧಾನ ಕಾರ್ಯದರ್ಶಿ ಕಿರಣ ಗುಡೂರ್, ಸಂಘಟನಾ ಕಾರ್ಯದರ್ಶಿ ಶಿವಲಿಂಗ ಬಣಮಿ, ಖಜಾಂಚಿ ಗಳಾದ ಬಾಬು ನಾಟಿಕಾರ್ ,ಮುಖಂಡರಾದ ಧರ್ಮಣ್ಣ ಎನ್ ಖರ್ಗೆ, ಅಂದೋಲನ ವಲಯ ಅಧ್ಯಕ್ಷರಾದ ಭೀಮು ಕಟ್ಟಿಮನಿ ಚನ್ನೂರು ಗ್ರಾಮ ಘಟಕದ ಅಧ್ಯಕ್ಷರಾದ ರಾಜು ಗುತ್ತೇದಾರ್ ತಿಳಿಸಿದ್ದಾರೆ.

emedialine

Recent Posts

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

8 mins ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

11 mins ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

16 mins ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

21 mins ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

26 mins ago

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420