ಸರಕಾರಿ ಕಾಲೇಜುಗಳಲ್ಲಿ ಪದವಿ ಪಡೆಯುವುದೇ ಹೆಮ್ಮೆಯ ಸಂಗತಿ: ಡಾ. ಉಮೇಶ್ ಜಾಧವ

ಕಲಬುರಗಿಯಲ್ಲೇ ಮೊದಲ ಸ್ನಾತಕೋತ್ತರ ಪದವಿ ಆರಂಭ! 

ವೈದ್ಯಕೀಯ ಪದವಿ ಪ್ರದಾನದ ಸಮಾರಂಭದಲ್ಲಿ ರೈತನ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಪದವಿ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ. ವೈದ್ಯರಾಗಿ ಹೊರಹೊಮ್ಮಿದವರು ಉತ್ತಮ ಸೇವೆಯ ಸಂಕಲ್ಪ ತೊಡಬೇಕು. – ದತ್ತಾತ್ರೇಯ ಪಾಟೀಲ್ ರೇವೂರ,
ಅಧ್ಯಕ್ಷ ಕೆಕೆಆರ್ ಡಿಬಿ.
ವೈದ್ಯಕೀಯ ಪದವಿ ಪಡೆದು ಶಿಕ್ಷಣ ಕ್ಷೇತ್ರದಿಂದ ಸೇವಾ ಕ್ಷೇತ್ರಕ್ಕೆ ಹೋಗುತ್ತಿರುವ ವಿದ್ಯಾರ್ಥಿಗಳು ತಂದೆ-ತಾಯಿ ಹಾಗೂ ಗುರುಗಳನ್ನು ದೇವರಂತೆ ಪೂಜಿಸಬೇಕು. ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ತಂದೆ ತಾಯಿಯರನ್ನು ಸದಾ ನೆನೆಯಬೇಕು. ಸತ್ಯ, ಧರ್ಮ ಹಾಗೂ ನಿಷ್ಠೆಯಿಂದ ಕರ್ತವ್ಯ ನಿಭಾಯಿಸಬೇಕು ಎಂದು ತೈತೆರಿಯ ಉಪನಿಷತ್ ಸಂದೇಶವಾಗಿದೆ. ನಿಮ್ಮ ಉಜ್ವಲ ಭವಿಷ್ಯಕ್ಕಾಗಿ ಆ ಎಲ್ಲಾ ಸಂದೇಶಗಳನ್ನು ಪಾಲಿಸಿ, ಸೇವಾಮನೋಭಾವ ರೂಡಿಸಿಕೊಳ್ಳಿ. – ಪ್ರೊ. ದಯಾನಂದ ಅಗಸರ, ಗುಲಬರ್ಗಾ ವಿವಿ ಕುಲಪತಿ.

ಕಲಬುರಗಿ – ವಿದ್ಯಾರ್ಥಿಗಳು ಸರಕಾರಿ ಕಾಲೇಜುಗಳಲ್ಲಿ ಪದವಿ ಪಡೆಯುವುದೇ ಹೆಮ್ಮೆಯ ಸಂಗತಿಯಾಗಿದ್ದು, ಸರಕಾರಿ ಕಾಲೇಜುಗಳು ವೃತ್ತಿಯಲ್ಲಿ ಉತ್ತಮ ಅವಕಾಶ ಒದಗಿಸಿಕೊಡುತ್ತವೆ. ಕಠಿಣ ಪರಿಸ್ಥಿತಿಯಲ್ಲೂ ಅತ್ಯುತ್ತಮ ಸೇವೆ ಮಾಡಲು ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ನೀಡುತ್ತದೆ ಎಂದು ಸಂಸದ ಡಾ. ಉಮೇಶ್ ಜಾಧವ ಅಭಿಮತಪಟ್ಟರು.

ಇದನ್ನೂ ಓದಿ: ಕಲಬುರಗಿ: ಕಾಂಗ್ರೆಸ್ ಮುಖಂಡರ ಸಭೆ

ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಡಾ. ಬಿ. ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ನಡೆದ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ 2ನೇ ಅಗಸ್ತ್ಯ ಘಟಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದರು.

ಇಂದಿಲ್ಲಿ ಪದವಿ ಪಡೆದು ಹೊರಹೋಗುತ್ತಿರುವ ವೈದ್ಯರು ಗ್ರಾಮೀಣ ಪ್ರದೇಶದಲ್ಲಿನ ಬಡ ರೋಗಿಗಳಿಗೆ ಚಿಕಿತ್ಸೆ ನೀಡುವುದರಿಂದ ಉತ್ತಮ ಅವಕಾಶ ಲಭಿಸುತ್ತದೆ. ವೈದ್ಯರಿಗೆ ಶ್ರದ್ದೆ ಹಾಗೂ ಜವಾಬ್ದಾರಿ ಮುಖ್ಯವಾಗಿದ್ದು, ಅದನ್ನು ಎಲ್ಲರೂ ಮೈಗುಡಿಸಿಕೊಳ್ಳಬೇಕು. ವೈದ್ಯರು ತಮ್ಮ ವೃತ್ತಿ ಬದುನಲ್ಲಿ ಘನತೆ, ಗೌರವ, ಕರ್ತವ್ಯಗಳನ್ನು ಯಾವತ್ತೂ ಮರೆಯಬಾರದು ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಇದನ್ನೂ ಓದಿ: ಮದರ್ ತೆರೆಸಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕೋವಿಡ್ ನಂತಹ ದುಸ್ತರ ಪರಿಸ್ಥಿತಿಯಲ್ಲಿ ತಮ್ಮ ಜೀವದ ಹಂಗು ತೊರೆದು ಸೇವೆ ಸಲ್ಲಿಸಿದ ವೈದ್ಯರನ್ನು ಪ್ರಧಾನಿ ಮೋದಿ ಅವರು ಕರೋನಾ ವಾರಿಯರ್ಸ್ ಎಂದು ಕರೆದಿದ್ದಾರೆ. ಹಿಂತಹ ವೈದ್ಯರು ದೇಶಕ್ಕೆ ಹೆಚ್ಚು ಹೆಚ್ಚು ಬರುವಂತಾಗಲಿ. ಅಲ್ಲದೇ, ಸೈನಿಕರು ಹಾಗೂ ರೈತರ ಮಕ್ಕಳು ವೈದ್ಯರಾಗಿ ಹೊರಹೊಮ್ಮುತ್ತಿರುವ ಸಂತಸದ ವಿಷಯವಾಗಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ಮಾತನಾಡಿ, ರಾಜ್ಯದಲ್ಲಿ ಹೊಸದಾಗಿ ಪ್ರಾರಂಭಗೊಂಡ ವೈದ್ಯಕೀಯ ಕಾಲೇಜುಗಳಲ್ಲಿ‌ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಜೀಮ್ಸ್ ) ಮಾತ್ರ ಸ್ನಾತಕೋತ್ತರ ವೈದ್ಯ ಪದವಿ (ಪಿ.ಜಿ) ಆರಂಭವಾಗಿದೆ ಎಂದರು.

ಇದನ್ನೂ ಓದಿ: ಕೃಷ್ಣಾರೆಡ್ಡಿ ಹೇಳಿಕೆಗೆ ಸಿನ್ನೂರ್ ಖಂಡನೆ

ಕೊವಿಡ್ ಹಿನ್ನೆಲೆಯಲ್ಲಿ ಪಿಜಿ ಕೋರ್ಸುಗಳ ಸೂಕ್ತ ಅನುದಾನ ಕೊರತೆ ಕಾರಣದಿಂದ ಹೊಸ ವೈದ್ಯಕೀಯ ಕಾಲೇಜುಗಳಲ್ಲಿ ಪಿಜಿ ಕೋರ್ಸ ಆರಂಭವಾಗಲಿಲ್ಲ. ಆದರೆ, ಕಲಬುರಗಿ ಜೀಮ್ಸ್ ನಲ್ಲಿ ಪಿಜಿ ಕೋರ್ಸುಗಳ ಆರಂಭಕ್ಕೆ ಅಗತ್ಯ ಅನುದಾನ ಕೆಕೆಆರ್ ಡಿಬಿಯಿಂದ ನೀಡಿದ್ದರಿಂದ ರಾಜ್ಯದಲ್ಲೇ ಮೊದಲನೇಯದಾಗಿ ಸ್ನಾತಕೋತ್ತರ ಕೋರ್ಸುಗಳನ್ನು ಪ್ರಾರಂಭಿಸಲು ಅನುಕೂಲವಾಗಿದೆ ಎಂದರು.

ಜೀಮ್ಸ್ ನಲ್ಲಿ ಪಿಜಿ ಕೋರ್ಸ್ ಪ್ರಾರಂಭವಾಗಲು ಮುಖ್ಯಮಂತ್ರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಬೆಂಬಲ ಸಾಕಷ್ಟಿದೆ. ಕಳೆದ ವರ್ಷದ ಮೊದಲ ಘಟಿಕೋತ್ಸವದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಸಂದರ್ಭದಲ್ಲಿ ವರ್ಷದೊಳಗೆ ಪಿಜಿ ಕೋರ್ಸ್ಗಳನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು. ಇದೀಗ ಸ್ನಾತಕೋತ್ತರ ಕೋರ್ಸ್ಗಳನ್ನು ಆರಂಭಿಸುವ ಮೂಲಕ ಸರಕಾರ ನುಡಿದಂತೆ ನಡೆದಿದೆ ಎಂದು ರೇವೂರ ಅವರು ತಿಳಿಸಿದರು.

ಇದನ್ನೂ ಓದಿ: ಸವಿಧಾನದ ರಕ್ಷಣೆ ಸೌಹಾರ್ದ ಸಮಾಜಕ್ಕಾಗಿ ಭೀಮಾ ಅರ್ಮಿ ಪ್ರತಿಭಟನೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಮಾತನಾಡಿ, ಇಂದಿಲ್ಲಿ ಪದವಿ ಪಡೆದಿರುವ ಎಲ್ಲಾ ವಿದ್ಯಾರ್ಥಿಗಳು ಬಹಳ ಕಠಿಣ ಪರಿಶ್ರಮದಿಂದ ವೈದ್ಯಕೀಯ ಪದವಿ ಮುಗಿಸಿದ್ದೀರಿ. ಇದರಲ್ಲಿ ನಿಮ್ಮ ತಂದೆ ತಾಯಿ ಅವರ ಶ್ರಮ ಬಹಳಷ್ಟಿದೆ. ಅಲ್ಲದೇ ಹೆಣ್ಣುಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯಕೀಯ ಪದವಿ ಪಡೆಯುತ್ತಿರುವುದು ಹೆಮ್ಮೆ ಉಂಟು ಮಾಡಿದೆ ಎಂದರು.

2ನೇ ಅಗಸ್ತ್ಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ 149 ವಿದ್ಯಾರ್ಥಿಗಳು ಪದವಿ ಪಡೆದುಕೊಂಡರು. ಡಾ. ಆದರ್ಶ್ ಪಾಟೀಲ್  ಹಾಗೂ ಸುಮೈಯ್ಯ ನೌಶೀನ್ ಅವರ ಅತಿ ಹೆಚ್ಚು ಅಂಕ ಪಡೆದು ಟ್ರೋಫಿ ಪಡೆದುಕೊಂಡರು. ಸಂಸ್ಥೆಯ ನಿರ್ದೇಶಕಿ ಡಾ. ಕವಿತಾ ಪಾಟೀಲ್ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿದ್ದರು.

ಇದನ್ನೂ ಓದಿ: ಪಠ್ಯ ಪುಸ್ತಕ ಪರಿಷ್ಕರಣ ಸಮಿತಿ ವಿರುದ್ಧ ಕಲಬುರಗಿಯಲ್ಲಿ ಪ್ರತಿಭಟನೆ ನಾಳೆ

ಈ ಸಂದರ್ಭದಲ್ಲಿ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯಕೀಯ ಅಧೀಕ್ಷಕ ಡಾ. ಮಹಮ್ಮದ್ ಶಫಿಯುದ್ದಿನ್, ಪ್ರಾಂಶುಪಾಲ ಡಾ. ಉಮೇಶ್ ಎಸ್. ಆರ್., ಮುಖ್ಯ ಆಡಳಿತಾಧಿಕಾರಿ ಪಾರ್ವತಿ, ಎಲ್ಲಾ ವಿಭಾಗದ ಡೀನ್ ರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.

ಇದನ್ನೂ ಓದಿ: ಪರಿಷ್ಕೃತ ಪಠ್ಯ ಪುಸ್ತಕ ರದ್ದತಿಗೆ ಝಿಶಾನ್ ಆಗ್ರಹ

emedialine

Recent Posts

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

2 mins ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

5 mins ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

10 mins ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ್ಲ –ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

15 mins ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

20 mins ago

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420