ಕಸಾಪದಿಂದ ಸಾರ್ವಜನಿಕರಿಗೆ ಪರಿಸರ ಸಂರಕ್ಷಣೆ ಕರಪತ್ರ ವಿತರಣೆ

ಕಲಬುರಗಿ: ಇಂದು ಪ್ರಕೃತಿ ನಾಶದಿಂದ ಮನುಷ್ಯ ಸಹ ನಾಶ ಹೊಂದುವ ಹಂತಕ್ಕೆ ಅಡಿಯಿಡುತ್ತಿದ್ದಾನೆ. ಪರಿಸರ ಸಂರಕ್ಷಣೆ ಬಗ್ಗೆ ಜನಜಾಗೃತಿ ಮೂಡದಿದ್ದಲ್ಲಿ ಮುಂದೊಂದು ದಿನ ಭಾರೀ ಗಂಡಾಂತರ ಕಾದಿದೆ. ಪರಿಸರ ಸಕಲ ಜೀವಿಗಳಿಗೆ ಜೀವಪರವಾಗಿದೆ. ಮಾನವ ಪರಿಸರದ ಕೂಸಾಗಿರುವುದರಿಂದ ಪರಿಸರವಿಲ್ಲದೇ ನಮಗೆ ಬದುಕಿಲ್ಲ ಎಂಬ  ಪರಿಜ್ಞಾನದೊಂದಿಗೆ ಸಾಗಬೇಕಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಸರದಾರ ವಲ್ಲಭಬಾಯಿ ಪಟೇಲ್ ವೃತ್ತ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿಯ ಸಂದೇಶ ಹೊತ್ತ ಕರಪತ್ರಗಳ ಸಾರ್ವಜನಿಕರಿಗೆ ವಿತರಣೆ ಮಾಡುವ ವಿಶೇಷ ಅಭಿಯಾನದ ನೇತೃತ್ವ ವಹಿಸಿ ಮಾತನಾಡಿದ ಅವರು, ಹವಾಮಾನ ವೈಪರೀತ್ಯ, ಅತಿಯಾದ ಬಿಸಿಲು, ಮಳೆ ಕೊರತೆ, ಅಂತರ್ಜಲದ ಕೊರತೆ ಮುಂತಾದ ಸಮಸ್ಯೆಗಳಿಗೆ ಪರಿಸರ ಸಂರಕ್ಷಣೆಯೊಂದೇ ನಮ್ಮ ಮುಂದಿರುವ ಸೂಕ್ತ ದಾರಿಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ವಿಶ್ವವಿದ್ಯಾಲಯದ ಶೇಕಡಾ ೨೫ರಷ್ಟು ಆವರಣ ಹಸಿರುಮಯ: ಡಾ. ಬಿಡವೆ

ಪ್ರಾಧ್ಯಾಪಕ ಡಾ.ಬಾಬುರಾವ ಶೇರಿಕಾರ, ಮಾಜಿ ಮೇಯರ್ ಭೀಮರೆಡ್ಡಿ ಕುರಕುಂದಾ, ಉದ್ಯಮಿ ಕೃಷ್ಣಾಜೀ ಕುಲಕರ್ಣಿ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗೀರಥಿ ಗುನ್ನಾಪೂರ ಮಾತನಾಡಿ, ಶುದ್ಧವಾದ ಗಾಳಿ, ಆಹಾರ, ನೀರು ಇಂದು ನಾವು ಪಡೆಯುವುದಲ್ಲದೇ ಮುಂದಿನ ಪೀಳಿಗೆಗೂ ಉಳಿಸಿಕೊಳ್ಳುವುದು ಅತ್ಯಂತ ಅವಶ್ಯವಾಗಿದೆ. ಈಗಾಗಲೇ ಪರಿಸರದ ಮಾಲಿನ್ಯದಿಂದಾಗಿ  ಕ್ಯಾನ್ಸರ್, ಚರ್ಮರೋಗ, ಉಸಿರಾಟ ತೊಂದರೆ ಮುಂತಾದ ರೋಗಗಳಿಗೆ ಮಾನವ  ತುತ್ತಾಗುತ್ತಿದ್ದಾನೆ. ಹಾಗಾಗಿ ಪರಿಸರವನ್ನು ನಾವು ಕಾಪಾಡಿದರೆ ಪರಿಸರ ನಮ್ಮನ್ನು ಕಾಪಾಡುತ್ತದೆ. ವರ್ಷಕ್ಕೊಮ್ಮೆ ಪರಿಸರ ದಿನಾಚರಣೆ ಆಚರಿಸುವ ಜತೆಗೆ ಪ್ರತಿದಿನ ಪರಿಸರ ಕಾಳಜಿ ಮೆರೆಯಬೇಕಾಗಿದೆ ಎಂದ ಅವರು, ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯಿಕ, ಸಾಂಸ್ಕೃತಿಕ ಚಟುವಟಿಕೆಗಳು ಹಮ್ಮಿಕೊಳ್ಳುವ ಜತೆಗೆ ಸಮಾಜದಲ್ಲಿ ಸಾಮಾಜಿಕ ಪ್ರಜ್ಞೆ ಮೂಡಿಸುವ ಪ್ರಯತ್ನ ನಿಜಕ್ಕೂ ಎಲ್ಲರೂ ಮೆಚ್ಚುವಂತಹದ್ದು ಎಂದು ಮನದುಂಬಿ ಮಾತನಾಡಿದರು.

ಇದನ್ನೂ ಓದಿ: ಸರಕಾರಿ ಕಾಲೇಜುಗಳಲ್ಲಿ ಪದವಿ ಪಡೆಯುವುದೇ ಹೆಮ್ಮೆಯ ಸಂಗತಿ: ಡಾ. ಉಮೇಶ್ ಜಾಧವ

ಜಿಲ್ಲಾ ಕಸಾಪ ಪದಾಧಿಕಾರಿಗಳಾದ ಶಿವರಾಜ ಅಂಡಗಿ, ಯಶವಂತರಾಯ ಅಷ್ಠಗಿ, ಶರಣರಾಜ್ ಛಪ್ಪರಬಂದಿ, ರಾಜೇಂದ್ರ ಮಾಡಬೂಳ,  ಸಾಹಿತಿ ಡಾ.ಶರಣಪ್ಪ ಮಾಳಗೆ, ಪ್ರಮುಖರಾದ ಸೋಮಶೇಖರ ಹಿರೇಮಠ, ಬಿ.ಎಲ್.ಚವ್ಹಾಣ, ಸಂತೋಷ ಕುಡಳ್ಳಿ,  ಶಿವಕುಮಾರ ಸಿ.ಎಚ್., ವಿಶ್ವನಾಥ ತೊಟ್ನಳ್ಳಿ, ತ್ರೀವೇಣಿ ಜಾಧವ, ಶಿವಲೀಲಾ ತೆಗನೂರ, ಕವಿತಾ ದೇಗಾಂವ, ವಾಣಿಶ್ರೀ ಸಗರಕರ್, ಮಾಲಾ ದಣ್ಣೂರ, ಮಾಲಾ ಕಣ್ಣಿ, ಮಲ್ಲಿಕಾರ್ಜುನ ಇಬ್ರಾಹಿಂಪೂರ, ಎಂ.ಎಸ್.ಪಾಟೀಲ ನರಿಬೋಳ, ಮಂಜುನಾಥ ಕಂಬಾಳಿಮಠ, ರೇಣುಕಾ, ಶಿವಶರಣಪ್ಪ ಹಡಪದ, ಅಭಯಪ್ರಕಾಶ, ಎಸ್.ಎಂ.ಪಟ್ಟಣಕರ್, ಸಿದ್ಧಾರಾಮ ಹಂಚನಾಳ, ವಿಜಯಕುಮಾರ ಹಾಬನೂರ, ಶಿವಶರಣ ಪರಪ್ಪಗೋಳ, ಬಸವರಾಜ ಹೆಳವರ, ಮಲ್ಲಿಕಾರ್ಜುನ ಸಂಗಶೆಟ್ಟಿ ಸೇರಿದಂತೆ ವಿವಿಧ ಕ್ಷೇತ್ರದ ಅನೇಕ ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ಭೀಮಳ್ಳಿ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ

emedialine

Recent Posts

ಸದ್ಗುಣ ಮೈಗೂಡಿಸಿ ಪ್ರಗತಿಪರ ಬದುಕು ಕಟ್ಟೋಣ : ಬಸವರಾಜ್ ಪಾಟೀಲ್ ಸೇಡಂ

ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…

1 hour ago

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

15 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

15 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

15 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

15 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420