ಮೂಲ ಸೌಕರ್ಯ ಒದಗಿಸಲು ಒತ್ತಾಯಿಸಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರಗೆ ಮನವಿ

ಕಲಬುರಗಿ : ತಾಲೂಕಿನ ಪಾಣೇಗಾಂವ ಗ್ರಾಮಕ್ಕೆ ಚರಂಡಿ, ಒಳಚರಂಡಿ ಮತ್ತು ಸಾರ್ವಜನಿಕ ಗ್ರಂಥಾಲಯ, ಜಿಮ್ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಅವರಿಗೆ ಈಚೆಗೆ ಗ್ರಾಮಸ್ಥರು ಮನವಿ ಪತ್ರ ಸಲ್ಲಿಸಿದರು.

ಖಣದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಪಾಣೇಗಾಂವ ಗ್ರಾಮ, ಶಿವಾಜಿ ತಾಂಡಾ, ಬಸವನ ತಾಂಡಾವು ಸಹ ಹಲವಾರು ಮೂಲಭೂತ ಸಮಸ್ಯೆಗಳಿಂದ ಕೂಡಿದೆ. ಅದರಲ್ಲೂ ಸಾರ್ವಜನಿಕ ಶೌಚಾಲಯ ಇಲ್ಲದೆ ಗ್ರಾಮಸ್ಥರು ಬಯಲು ಶೌಚಾಲಯ ಮೊರೆ ಹೋಗಿದ್ದಾರೆ.ಇದರಿಂದ ಜನರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ.ಜೊತೆಗೆ ಚರಂಡಿ ಒಳಚರಂಡಿಯಿಲ್ಲದೆ ಗ್ರಾಮವು ಕೆಸರುಗದ್ದೆ ಯಾಗಿ ಓಡಾಡಲು ತುಂಬಾ ಕಷ್ಟಕರವಾಗುತ್ತಿದೆ. ಗ್ರಾಮದಲ್ಲಿ ವಿದ್ಯಾರ್ಥಿಗಳಿಗಾಗಿ ಗ್ರಂಥಾಲಯ ಸ್ಥಾಪಿಸಬೇಕು ಮತ್ತು ಯುವಕರಿಗಾಗಿ ದೈಹಿಕ ಸದೃಢರಾಗಲು ಜಿಮ್ಮ್ ವ್ಯವಸ್ಥೆ ಮಾಡಬೇಕು ಹಾಗೂ ಪ್ರಾಥಮಿಕ ಆರೋಗ್ಯ ಉಪ ಕೇಂದ್ರಕ್ಕೆ ಸೂಕ್ತ ಸೌಲಭ್ಯ ಕಲ್ಪಿಸಿ ಕೂಡಲೇ ಆರಂಭಿಸಬೇಕೆಂದು ಮನವಿ ಪತ್ರದ ಮೂಲಕ ಶಾಸಕರಿಗೆ ಗ್ರಾಮಸ್ಥರು ಒತ್ತಾಯಿಸಿದರು.

ಇದನ್ನೂ ಓದಿ: ಅಹಲ್ಯಬಾಯಿ ಹೋಲ್ಕರ್ ಎಂಬುವರು ಅಚ್ಚಳಿದು ಒಂದು ನಕ್ಷತ್ರ

ಮನವಿಗೆ ಸ್ಪಂದಿಸಿದ ಶಾಸಕರು, ಕೂಡಲೇ ಗ್ರಾಮದ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಈ ನಿಯೋಗದ ನೇತೃತ್ವವನ್ನು ಕಮಾಂಡೋ ಸಂಜೀವ ಪವಾರ ಹಾಗೂ ಸಂತ ಸೇವಾಲಾಲ್ ಕಮಿಟಿ ಅಧ್ಯಕ್ಷ ಜೇತಾಲಾಲ ರಾಠೋಡ, ಲಖನ್ ಪವಾರ್ ವಹಿಸಿದ್ದರು.

ಈ ನಿಯೋಗದಲ್ಲಿ ಗ್ರಾಮದ ಪ್ರಮುಖರಾದ ಕಾಂತು ಚವಾಣ, ಕಿಶನ್ ರಾಠೋಡ್ , ಅನಿಲ್ ರಾಠೋಡ್, ಹಾಮಣ್ಣ ಪವಾರ, ರಮೇಶ್ ರಾಠೋಡ್, ರಾಜು ಮಚಖೇಡ್, ಸೇರಿದಂತೆ ಗ್ರಾಮದ ಹಿರಿಯರು ಯುವಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದನ್ನೂ ಓದಿ: ಕಸಾಪದಿಂದ ಸಾರ್ವಜನಿಕರಿಗೆ ಪರಿಸರ ಸಂರಕ್ಷಣೆ ಕರಪತ್ರ ವಿತರಣೆ

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

13 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

13 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

13 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

13 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

13 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420