ಕಲಬುರಗಿ: ಪ್ರತಿಯೊಬ್ಬರು ತಮ್ಮ ಮಕ್ಕಳಂತೆ ಗಿಡ-ಮರವೂ ಬೆಳೆಸಿದರೆ ಪರಿಸರ ಸಂರಕ್ಷಣೆಯೊಂದಿಗೆ ಉಸಿರಾಟಕ್ಕೆ ಉತ್ತಮ ಆಮ್ಲಜನಕ ಪಡೆಯಲು ಸಾಧ್ಯ ಎಂದು ಅಫಜಲಪುರ ಕ್ಷೇತ್ರದ ಕಾಂಗ್ರೆಸ್ ಮುಖಂಡ ಹಾಗೂ ಹೆಚ್ಕೆಇ ಸೊಸೈಟಿ ಆಡಳಿತ ಮಂಡಳಿ ಸದಸ್ಯರಾದ ಅರುಣಕುಮಾರ ಎಂ.ವೈ. ಪಾಟೀಲ್ ಹೇಳಿದರು.
ತಾಲೂಕಿನ ಫಿರೋಜಾಬಾದ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜನಕಲ್ಯಾಣ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ, ಪರಿಸರ ದಿನಾಚರಣೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.
ಸರ್ಕಾರಿ ಕನ್ನಡ ಪ್ರೌಢಶಾಲೆಗೆ ನಿವೇಶನಕ್ಕೆ ತಾಂತ್ರಿಕ ತೊಂದರೆಗಳು ಎದುರಾಗಿದ್ದು, ಶೀಘ್ರದಲ್ಲಿ ಅದನ್ನು ಬಗೆಹರಿಸಿ, ಪೀಠೋಪಕರಣಗಳು ಒದಗಿಸಿಕೊಡುವುದಾಗಿ ಭರವಸೆ ನೀಡಿದರು.
ಹೆಚ್ಕೆಸಿಸಿಐ ಗೌರವ ಕಾರ್ಯದರ್ಶಿ ಶರಣು ಪಪ್ಪಾ, ಶರಣಬಸವೇಶ್ವರ ಪದವಿ ಕಾಲೇಜಿನ ಉಪನ್ಯಾಸಕ ನಾನಾಸಾಹೇಬ್ ಹಚ್ಚಡದ ಮಾತನಾಡಿದರು. ಇದೇ ವೇಳೆಗೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಟ್ರಸ್ಟ್ನಿಂದ ಮೆಡಲ್ ನೀಡಿ ಸತ್ಕರಿಸಲಾಯಿತು.
ವೇದಿಕೆ ಮೇಲೆ ಫರಹತಾಬಾದ್ ಜಿಪಂ ಮಾಜಿ ಸದಸ್ಯ ದಿಲೀಪ ಆರ್. ಪಾಟೀಲ್, ಪತ್ರಕರ್ತ ಭೀಮಾಶಂಕರ ಫಿರೋಜಾಬಾದ್, ಸ್ಥಳೀಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ತಿಬ್ಬಶೆಟ್ಟಿ, ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷ ಖಾಜಾ ಪಟೇಲ್, ಯೂಥ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣು ಹಾಗರಗುಂಡಗಿ, ಅರಣ್ಯ ಇಲಾಖೆಯ ಅನ್ಸಾರ್ ಪಟೇಲ್, ಮುಖ್ಯಗುರು ಅಲ್ಲಾವುದ್ದಿನ್ ಮತ್ತಿತರರಿದ್ದರು.
ಟ್ರಸ್ಟ್ ಅಧ್ಯಕ್ಷ ವಿಶ್ವನಾಥ ಹಿರೇಮಠ ಅಧ್ಯಕ್ಷತೆವಹಿಸಿ ಮಾತನಾಡಿದರು. ಟ್ರಸ್ಟ್ ಉಪಾಧ್ಯಕ್ಷ ಯುನೂಸ್ ಪಟೇಲ್ ಸ್ವಾಗತಿಸಿದರು. ಶಶಿಕಲಾ ಕಟ್ಟಿ ನಿರೂಪಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ಬಸವಲಿಂಗ ಹಾಲು, ಸಚಿನ್ ಮಾಮನಿ, ನಿವೃತ್ತ ಶಿಕ್ಷಕ ನಾಗಣ್ಣ ಧೂಳಬಾ, ಇಜಾಜ್ ಪಟೇಲ್, ಬಾಬು ಪವಾಡಿ, ಶಶಿಕಾಂತ ಕೊಡಚಿ, ಉಮೇಶ ಮಾಮನಿ, ರೇವಣಸಿದ್ದಪ್ಪ ಶ್ರೀಗಿರಿ, ಮಹಾದೇವಪ್ಪ ಭರ್ಮಾ, ಬಸವರಾಜ್ ಭಜಂತ್ರಿ ಸೇರಿದಂತೆ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಭಾಗವಹಿಸಿದ್ದರು
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…