ಬಿಸಿ ಬಿಸಿ ಸುದ್ದಿ

ಸರ್ಕಾರಿ ಕಾಲೇಜಿನ ನೂತನ ಕಟ್ಟಗಳಿಗೆ ಶಾಸಕ ಪ್ರಿಯಾಂಕ್ ಖರ್ಗೆ ಲೋಕಾರ್ಪಣೆ

ಕಲಬುರಗಿ: ಚಿತ್ತಾಪುರ ತಾಲ್ಲೂಕಿನ ಹೊಸ ಹೆಬ್ಬಾಳ ಗ್ರಾಮದಲ್ಲಿ ರೂ 96 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 6 ಕೋಣೆಗಳ ಹಾಗೂ ಶೌಚಾಲಯ ನಿರ್ಮಾಣ, ರೂ 34 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸರ್ಕಾರಿ ಪ್ರೌಢಶಾಲೆಗೆ 2 ಕೋಣೆಗಳ ಹಾಗೂ ರೂ 24 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸರ್ಕಾರಿ ಪ್ರಾಥಮಿಕ ಶಾಲೆಗೆ 2 ಕೋಣೆಗಳ (ಒಟ್ಟು 1.54 ಕೋಟಿ ವೆಚ್ಚ) ನೂತನ ಕಟ್ಟಡಗಳಿಗೆ ಶಾಸಕ ಪ್ರಿಯಾಂಕ್ ಖರ್ಗೆ ಉದ್ಘಾಟನೆ ಮಾಡಿದರು.

ಇದೆ ಸಂದರ್ಭದಲ್ಲಿ ವಾಲಿಬಾಲ್, ಥ್ರೋ ಬಾಲ್, ಬಾಡ್ಮಿಂಟನ್, ಕ್ರಿಕೆಟ್ ಆಡಲು ವ್ಯವಸ್ಥೆ ಮಾಡುವಂತೆ ವಿದ್ಯಾರ್ಥಿ‌, ವಿದ್ಯಾರ್ಥಿನಿಯರು ಬೇಡಿಕೆ ಇಟ್ಟಿದ್ದು, ಇನ್ನೆರಡು ದಿನಗಳಲ್ಲಿ ಎಲ್ಲ‌ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ವಿದ್ಯಾರ್ಥಿಗಳಿಗೆ ಸರಿಯಾಗಿ ಮಧ್ಯಾಹ್ನ ಊಟದ ವ್ಯವಸ್ಥೆ ಸರಿಯಾಗಿ ಆಗುತ್ತಿದೆಯಾ? ಪಠ್ಯ ಪುಸ್ತಕ ಸರಬರಾಜು ಆಗಿಲ್ಲ ಅದಕ್ಕೆ ಏನು ಮಾಡುತ್ತಿದ್ದೀರಾ? ಎಂದು ಪರಿಶೀಲಿಸಲಾಯಿತು. ಇದಕ್ಕೆ ಉತ್ತರಿಸಿದ ಶಿಕ್ಷಕರು ಈ ಹಿಂದಿನ ಪಠ್ಯಗಳನ್ನೇ ಕಲಿಸಲಾಗುತ್ತಿದೆ. ಕೆಲವರಿಗೆ ಶೈಕ್ಷಣಿಕ ಚಟುವಟಿಕೆ ಜೊತೆಗೆ ಆಟ ಚಟುವಟಿಕೆಗಳಲ್ಲಿ ತೊಡಗಿಸಲಾಗುತ್ತಿದೆ. ತೊಂಚಿ, ಕಮಕನೂರು, ಸಾವಂತಖೇಡ ಹಾಗೂ ಜೀವನ ಮಾರಡಗಿ ಗ್ರಾಮಗಳಿಂದ ಶಾಲೆಯ ಸಮಯದಲ್ಲಿ ಬಸ್ ಸೌಲಭ್ಯವಿಲ್ಲದ್ದರಿಂದ ಮಕ್ಕಳು ನಡೆದುಕೊಂಡು ಬರುತ್ತಿದ್ದಾರೆ. ಆದಷ್ಟು ಬೇಗ ಬಸ್ ಸೌಲಭ್ಯ ಒದಗಿಸಲಾಗುವುದು. ಈ ಕುರಿತು ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯ ಎಂ.ಡಿ. ಅವರೊಂದಿಗೆ ಮಾತನಾಡಿ ಬಸ್ ಸೌಲಭ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದೆನು.

ಇದನ್ನೂ ಓದ: ಹೊನಗುಂಟಾ ಗ್ರಾಮದಲ್ಲಿ ಜನಮನ ಸೆಳೆದ ಗ್ರಾಮೀಣ ಕ್ರೀಡಾಕೂಟ

ಈ ವೇಳೆ ಶಾಸಕ ಪ್ರಿಯಾಂಕ್ ಖರ್ಗೆ ಶಿಷ್ಠಾಚಾರವನ್ನು ಬದಿಗೊತ್ತಿ ಮಕ್ಕಳೊಂದಿಗೆ ಬೆರೆತು ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ತಿಪ್ಪಣ್ಣಪ್ಪ ಕಮಕನೂರು, ಭೀಮಣ್ಣ ಸಾಲಿ, ಬಸವರಾಜ ಹೇರೂರು,‌ ಶಿವಾನಂದ ಪಾಟೀಲ, ರಮೇಶ ಮರಗೋಳ, ಮಾಪಣ್ಣ ಗಂಜಿಗೇರಿ, ಸುನೀಲ ದೊಡ್ಡಮನಿ, ಮಲ್ಲಪ್ಪ ಹೊಸಮನಿ ಸೇರಿದಂತೆ ಉಪಸ್ಥಿತರಿದ್ದರು.

ಇದನ್ನೂ ಓದಿ:ವೃತಿ ಶಿಕ್ಷಣ ಇಲಾಖೇಯ ಸಿಬ್ಬಂದಿ ಬೇಡಿಕೆ ಈಡೇರಿಸುವಂತೆ ಜಿಲ್ಲಾಧಿಕಾರಿ ಮುಖಾಂತರ ಸಿಎಂಗೆ ಮನವಿ

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

7 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

7 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

9 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

9 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

9 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

10 hours ago