ಬಿಸಿ ಬಿಸಿ ಸುದ್ದಿ

ಉಪಯೋಗಕ್ಕೆ ಬಾರದ ಸಾರ್ವಜನಿಕ ಶೌಚಾಲಯ

ಶಹಾಬಾದ: ನಗರದ ವಾರ್ಡ ನಂ. ೧೬ ರ ಅಶೋಕ ನಗರದಲ್ಲಿ ಬರುವ ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಿದ ಸಾರ್ವಜನಿಕ ಶೌಚಾಲಯ ಜಾಲಿ ಕಂಟಿ ಗಿಡಗಳು ಬೆಳೆದು ಶೌಚಾಲಯ ಕಾಣದಂತಾಗಿದೆ.ಇದರಿಂದ ಇಲ್ಲಿನ ಜನರ ಉಪಯೋಗಕ್ಕೆ ಬಾರದಂತಾಗಿ ಸ್ಥಳೀಯ ತೊಂದರೆಯಾಗುತ್ತಿದೆ.

ಇದನ್ನೂ ಓದಿ: ಒಟ್ಟಾಗಿ ಸೇರಿ ಪತ್ರಕರ್ತರ ಸಂಘವನ್ನು ಮುನ್ನಡೆಸಿಕೊಂಡು ಹೋಗಿ: ಯಡ್ರಾಮಿ

ನಗರಸಭೆಯ ಎಸ್‌ಎಫ್‌ಸಿ ಅನುದಾನ(ಮುಕ್ತನಿಧಿ) ೨೦೦೭-೦೮ ರಲ್ಲಿ ನಿರ್ಮಾಣ ಮಾಡಿದ ಸಾರ್ವಜನಿಕ ಶೌಚಾಲಯದ ಸುತ್ತಲೂ ಕಟ್ಟಡದೆತ್ತರಕ್ಕೆ ಜಾಲಿಗಿಡಗಳು ಬೆಳೆದಿದೆ.ಇದರಿಂದ ಶೌಚಾಲಯದ ಒಳಗಡೆ ಹೋಗಲಾರದ ಪರಿಸ್ಥಿತಿ ಮೂಡಿದೆ. ಶೌಚಾಲಯದ ಗೋಡೆಗಳು ಬಿರುಕು ಬಿಟ್ಟಿವೆ.ಹಲವು ವರ್ಷಗಳಿಂದ ಅಧಿಕಾರಿಗಳಿಗೆ ತಿಳಿಸಿದರೂ ಕ್ಯಾರೆ ಎನ್ನುತ್ತಿಲ್ಲ ಎಂಬುವುದು ಸ್ಥಳೀಯ ಜನರ ಗೋಳಾಗಿದೆ.ಶೌಚಾಲಯ ಸಂಪೂರ್ಣ ಹಾಳಾಗಿ ಹಾಳು ಕೊಂಪೆಯಾಗಿ ಮಾರ್ಪಟ್ಟಿದೆ.ಹಂದಿಗಳ ವಾಸಸ್ಥಾನವಾಗಿದೆ.

ಇದನ್ನೂ ಓದಿ: ಊಟ ಬೇಡಿದ ತಪ್ಪಿಗೆ ಮಗಳ ಬೆರಳಿಗೆ ಬರೆಯಿಟ್ಟಳು ಮಲತಾಯಿ!

ಈಗಾಗಲೇ ಹಲವು ಬಾರಿ ಅಧಿಕಾರಿಗಳಿಗೆ ತಿಳಿಸಿದರೂ ಇಲ್ಲಿನ ಅಧಿಕಾರಿಗಳು ಮಾತ್ರ ತಮಗೆ ಸಂಬಂಧವಿಲ್ಲಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಅಲ್ಲದೇ ಸಾರ್ವಜನಿಕ ಶೌಚಾಲಯ ನಿರ್ಮಿಸಿ ನೀರಿನ ವ್ಯವಸ್ಥೆಯೂ ಮಾಡಿಲ್ಲ.ಕೂಡಲೇ ಅಧಿಕಾರಿಗಳು ಶೌಚಾಲಯವನ್ನು ಸ್ವಚ್ಛಗೊಳಿಸಬೇಕು.ನೀರಿನ ವ್ಯವಸ್ಥೆ ಮಾಡಬೇಕು.ಬಿರುಕು ಬಿಟ್ಟಿರುವ ಗೋಡೆಗಳನ್ನು ಸರಿಪಡಿಸಬೇಕು.ಅಲ್ಲದೇ ಸಂಪೂರ್ಣ ನವೀಕರಣಗೊಳಿಸಿ ಇಲ್ಲಿನ ಜನರಿಗೆ ಉಪಯೋಗವಾಗುವಂತೆ ಅನುಕೂಲಮಾಡಿಕೊಡಬೇಕೆಂದು ನಗರಸಭೆಯ ಸದಸ್ಯ ಅವಿನಾಶ ಕಂಬಾನೂರ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸರ್ಕಾರದ ವಜಾಕ್ಕೆ ಬಿಎಸ್‌ಪಿ ಆಗ್ರಹ

emedialine

Recent Posts

ಡೆಂಗ್ಯೂ ,ಝಿಕಾ, ಚಿಕನ್ ಗುನ್ಯಾ ತಡೆಗಟ್ಟಲು ಸರಕಾರಕ್ಕೆ ವೆಲ್ಫೇರ್ ಪಾರ್ಟಿ ಆಗ್ರಹ

  ಕಲಬುರಗಿ : "ಜಿಲ್ಲೆಯಲ್ಲಿ ಡೆಂಗಿ ಜ್ವರ ಹಾವಳಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಝಿಕಾ ವೈರಾಣು ಸೋಂಕು, ಚಿಕನ್ ಗುನ್ಯಾ…

21 mins ago

ರಾಮ್ ರಾವ್ ಮಹಾರಾಜರ ಆದರ್ಶ ಮೈಗೂಡಿಸಿಕೊಳ್ಳಿ

ಚಿತ್ತಾಪುರ: ವಿಶ್ವ ರತ್ನ ನಡೆದಾಡುವ ಭಗವಂತ ಬಂಜಾರ ಸಮಾಜದ ಧರ್ಮಗುರುಗಳಾದ ಡಾ,ರಾಮ್ ರಾವ್ ಮಹಾರಾಜರು ಒಬ್ಬ ಮಹಾನ್ ಸರಳ ಸಜ್ಜನಿಕೆಯ…

25 mins ago

ಕಲಾವಿದ ಕಲ್ಪನೆಗಳ ಅಭಿವ್ಯಕ್ತಿಯೇ ಚಿತ್ರಕಲೆ: ಸಂತೋಷ್ ಹೆಗಡೆ

ಬೆಂಗಳೂರು:ಕಲಾವಿದನ ಕಲ್ಪನೆ ಮತ್ತು ಭಾವನೆಗಳ ಅಭಿವ್ಯಕ್ತಿಯೆ ಚಿತ್ರಕಲೆ,ಹಾಗೂ ಸಾಮಾನ್ಯವಾಗಿ ಒಬ್ಬ ಕಲಾವಿದ ಕಲೆಯಲ್ಲಿ ತೊಡಗಿಕೊಳ್ಳುವುದರಿಂದ ಅವರ ಯೋಚನೆ ಮತ್ತು ಭಾವನೆಗಳು…

2 hours ago

ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹಿಸುವುದು ಶ್ಲಾಘನೀಯ

ಕಲಬುರಗಿ: ನಗರದ ಕಲಾಮಂಡಳದಲ್ಲಿ ಜಾÐನದೀಪ ನೃತ್ಯ ಕಲಾಸಂಸ್ಥೆ ರಿ ವತಿಯಿಂದ ಸಾಂಸ್ಕ್ರತಿಕ ಕಲಾಮಹೋತ್ಸ ಮತ್ತು ಎಸ್.ಎಸ್.ಎಲ್.ಸಿ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ…

4 hours ago

ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷರಾಗಿ ನಾಗರಾಜ ಭಂಕಲಗಿ ಅವಿರೋಧ ಆಯ್ಕೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಶರಣ ಬಸವೇಶ್ವರರ ದೇವಸ್ಥಾನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಚಿತ್ತಾಪುರ ತಾಲೂಕು ಘಟಕದ…

5 hours ago

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

19 hours ago