ವಿದ್ಯಾರ್ಥಿಗಳಿಗೆ ಶಿಕ್ಷಕರ ಕೊಡುಗೆ ಅಪಾರ: ದೇಶಮುಖ

2
17

ಕಲಬುರಗಿ: ಕಿರಣ ಗ್ರಾಮೀಣ ಅಭಿವೃದ್ಧಿ ಸೇವಾ ಸಂಘ (ರಿ) ಕಲಬುರಗಿ ವತಿಯಿಂದ ಇಂದು ಉತ್ತರ ವಲಯದ ಶಹಬಜಾರ ಸರಕಾರಿ ಪ್ರೌಢ ಶಾಲೆಯಲ್ಲಿ ” ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಮಾಸ್ತಿ ವೆಂಕಟೇಶ ಅಯ್ಯಂಗಾರ ಜನ್ಮದಿನದ ಪ್ರಯುಕ್ತ ಎಸ್,ಎಸ್,ಎಲ್,ಸಿ ಪರೀಕ್ಷೆಯ ಕನ್ನಡ ವಿಷಯಲ್ಲಿ ೧೨೫ಕ್ಕೆ ೧೨೫ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಕನ್ನಡ ಭೋದನಾ ಶಿಕ್ಷಕರಿಗೆ ಅಭಿನಂದನಾ ಸತ್ಕಾರ ನಡೆಯಿತು.

ಇದನ್ನೂ ಓದಿ: ಇದನ್ನೂ ಓದಿ: ಉಪಯೋಗಕ್ಕೆ ಬಾರದ ಸಾರ್ವಜನಿಕ ಶೌಚಾಲಯ

Contact Your\'s Advertisement; 9902492681

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಅಫಜಲಪುರ ಕ್ಷೇತ್ರ ಶಿಕ್ಷಣಧಿಕಾರಿ ಎಚ್.ಎಸ್.ದೇಶಮುಖ ರವರು ಮಾತನಾಡಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಗೌರವ ಸತ್ಕಾರ ಮಾಡಿದ್ದು ತುಂಬಾ ಸಂತೋಷವಾಗಿದೆ. ವಿದ್ಯಾರ್ಥಿಗಳಿಗೆ ಶಿಕ್ಷಕರ ಕೊಡುಗೆ ತುಂಬಾ ಅಪಾರವಾಗಿದೆ, ಯುವಕರು ವಿದ್ಯಾಭ್ಯಾಸ ಬಗ್ಗೆ ಒತ್ತು ನೀಡಬೇಕು ಎಂದು ಹೇಳಿದರು.

ಇದನ್ನೂ ಓದಿ: ಒಟ್ಟಾಗಿ ಸೇರಿ ಪತ್ರಕರ್ತರ ಸಂಘವನ್ನು ಮುನ್ನಡೆಸಿಕೊಂಡು ಹೋಗಿ: ಯಡ್ರಾಮಿ

ಈ ಸಂದರ್ಭದಲ್ಲಿ ಸರಕಾರಿ ಪ್ರೌಢ ಶಾಲೆಯ ಮುಖ್ಯಗುರುಗಳಾದ ಶ್ರೀ ಸುಧಾಕರ ನಾಯಕ,ಚಲನಚಿತ್ರ ನಟ ಗಂಗಾಧರ ಬಡಿಗೇರ, ಬಿ,ಎಸ್,ಪಿ ಪಕ್ಷದ ಜಿಲ್ಲಾಧ್ಯಕ್ಷರಾದ ಶರಣಬಸಪ್ಪ ಸೂಗುರ,ಕಿರಣ ಗ್ರಾಮೀಣ ಅಭಿವೃದ್ಧಿ ಸೇವಾ ಸಂಘದ ಅಧ್ಯಕ್ಷರಾದ ಮಂಜುನಾಥ ಶ,ನಾಲವಾರಕರ್, ಧೂಳಪ್ಪ ದ್ಯಾಮನಕರ್,ಸೇರಿದಂತೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು,

ಇದನ್ನೂ ಓದಿ: ಶ್ರೀ ವಿನಯ ಗುರೂಜಿಗೆ ರಾಜಕೀಯ ಮುಖಂಡರ ಭೇಟಿ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here