ಬಿಸಿ ಬಿಸಿ ಸುದ್ದಿ

ಮಾದಿಗರು ಬಿಜೆಪಿಗೆ ಸೀಮಿತರಲ್ಲ: ಸೈದಾಪೂರ

ವಾಡಿ: ಮಾದಿಗರು ಕೇವಲ ಬಿಜೆಪಿ ಪಕ್ಷಕ್ಕೆ ಸೀಮಿತವಾಗಿಲ್ಲ. ಜಾತ್ಯಾತೀತ ತತ್ವಗಳಲ್ಲಿ ನಂಬಿಕೆಯಿಟ್ಟಿರುವ ಕಾಂಗ್ರೆಸ್ ಪಕ್ಷದಲ್ಲೂ ಅಸಂಖ್ಯಾತ ಮಾದಿಗರಿದ್ದಾರೆ. ಆದರೆ ನಾಲವಾರದಲ್ಲಿ ರವಿವಾರ ನಡೆಯುತ್ತಿರುವ ಮಾದಿಗರ ಸಮಾವೇಶ ಕೇವಲ ಬಿಜೆಪಿ ಮಾದಿಗರ ಸಮಾವೇಶವಾಗಿ ನಡೆಯುತ್ತಿದೆ ಎಂದು ವಾಡಿ ಬ್ಲಾಕ್ ಕಾಂಗ್ರೆಸ್ ಎಸ್ ಸಿ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಸೈದಾಪೂರ ಆರೋಪಿಸಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ನೂಪುರ ಸರ್ಮಾ ಬಂಧನಕ್ಕೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ನಾಲವಾರದಲ್ಲಿ ಆಯೋಜಿಸಿರುವ ಮಾದಿಗರ ತಾಲೂಕು ಮಟ್ಟದ ಸಮಾವೇಶವನ್ನು ಖಂಡಿಸಿದ್ದಾರೆ. ಮಾದಿಗರು ಎಂದರೆ ಅವರೆಲ್ಲರೂ ಒಂದೆ ಸಮುದಾಯ ಎಂದು ಗುರುತಿಸಬೇಕು. ಅವರನ್ನು ಬಿಜೆಪಿ-ಕಾಂಗ್ರೆಸ್ ಎಂದು ಒಡೆದು ರಾಜಕಾರಣ ಮಾಡುವುದು ನೀಚ ರಾಜಕೀಯ ಎನ್ನಿಸಿಕೊಳ್ಳುತ್ತದೆ. ನಾಲವಾರದಲ್ಲಿ ಏರ್ಪಡಿಸಲಾಗಿರುವ ಮಾದಿಗರ ಸಮಾವೇಶಕ್ಕೆ ಕೇವಲ ಬಿಜೆಪಿಯ ನಾಯಕರುಗಳು, ಶಾಸಕರು, ಸಚಿವರು ಅತಿಥಿಗಳಾಗಿದ್ದಾರೆ. ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಸೌಜನ್ಯಕ್ಕಾದರೂ ಆಹ್ವಾನಿಸಿಲ್ಲ. ಕಾಂಗ್ರೆಸ್ ಪಕ್ಷದಲ್ಲಿರುವ ಮಾದಿಗ ಮುಖಂಡರನ್ನೂ ಕಡೆಗಣಿಸಿರುವುದು ನೋಡಿದರೆ ಇದು ಸ್ವಾಭಿಮಾನಿ ಮಾದಿಗರ ಸಮಾವೇಶವಲ್ಲ. ಬಿಜೆಪಿಯ ಮಾದಿಗರ ಸಮಾವೇಶ ಎಂಬುದು ಗೊತ್ತಾಗುತ್ತದೆ. ಅಲ್ಲದೆ ಈ ಸಮಾವೇಶ ದ್ವೇಷ ರಾಜಕಾರಣದ ಪ್ರತೀಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪ್ರೊಫೆಸರ್ ಕೃಷ್ಣಪ್ಪ ಅವರ ಜನ್ಮದಿನೋತ್ಸವ ಆಚರಣೆ

ಸಮಾವೇಶದ ಹೆಸರಿನಲ್ಲಿ ಮಾದಿಗರ ಒಗ್ಗಟ್ಟು ಒಡೆಯಲು ಪ್ರಯತ್ನಿಸುತ್ತಿರುವ ಬಿಜೆಪಿಗರ ಕುತಂತ್ರಕ್ಕೆ ಎಚ್ಚೆತ್ತ ಮಾದಿಗ ಸಮುದಾಯ ಬಲಿಯಾಗುವುದಿಲ್ಲ. ಮತ್ತು ನಾಲವಾರದಲ್ಲಿ ನಡೆಯುತ್ತಿರುವ ಮಾದಿಗರ ಸಮಾವೇಶ ರಾಜಕೀಯ ಪ್ರೇರಿತವಾಗಿದ್ದು, ಅಭಿವೃದ್ಧಿ ಪರ ಚಿಂತಕ ಶಾಸಕ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಎತ್ತಿಕಟ್ಟುವ ದುರಾಲೋಚನೆಯಿಂದ ಕೂಡಿದೆ. ಇಂಥಹ ಒಡೆದಾಳುವ ಕಾರ್ಯಮಗಳಲ್ಲಿ ಮಾದಿಗರು ಯಾರೂ ಭಾಗವಹಿಸಬಾರದು ಎಂದು ಮಲ್ಲಿಕಾರ್ಜುನ ಸೈದಾಪೂರ ಕೋರಿದ್ದಾರೆ.

ಇದನ್ನೂ ಓದಿ: ಯು,ಡಿ,ಐ,ಡಿ ಸ್ಮಾರ್ಟ್ ಕಾರ್ಡ್ ಕುರಿತು ಜಾಗೃತಿ ಕಾರ್ಯಕ್ರಮ

emedialine

Recent Posts

ಭಕ್ತರು ಹೆಚ್ಚಿನ ಸಹಾಯ ಸಹಕಾರ ಮನೋಭಾವನೆ ಹೊಂದಲು ಕರೆ

ಕಲಬುರಗಿ; ಮೈಂದರಗಿಯ ಪೂಜ್ಯ ಶ್ರೀ. ಮೃತುಂಜ್ಯಯ ಸ್ವಾಮಿಗಳು (ವಿರಕ್ತ ಮಠ), (ಆಕಾಶ ಮುತ್ಯಾವರು) ಸದ್ಗುರು ಶ್ರೀ ದಾಸಿಮಯ್ಯ ಕಾನೂನು ಸೇವಾ…

4 hours ago

ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಹಕರಿಸಲು ಶಾಸಕ ಅಲ್ಲಪ್ರಭು ಪಾಟೀಲ ಸಲಹೆ

ಕಲಬುರಗಿ: ಇತ್ತಿಚಿನ ದಿನಗಲ್ಲಿ ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಹಾಗೂ ಅಧಿಕಾರಿಗಳಿಗೆ ದಕ್ಷಿಣ ಮತಕ್ಷೇತ್ರದ…

4 hours ago

ಕಲಬುರಗಿ; ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ; ಕಲಬುರಗಿ ಜಿಲ್ಲೆಯ ಒಂಭತ್ತು ಶಿಶು ಅಭಿವೃದ್ಧಿ ಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 238 ಅಂಗನವಾಡಿ…

5 hours ago

ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರ ತೆಗೆದುಕೊಳ್ಳಿ; ಮಲ್ಲಿಕಾರ್ಜುನ ಸತ್ಯಂಪೇಟೆ

ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…

5 hours ago

ಅಖಿಲ ಭಾರತ ವೀ.ಲಿಂ ಮಹಾಸಭಾ ನೂತನ ಅಧ್ಯಕ್ಷ ನಿದೇರ್ಶಕರ ನೇಮಕ

ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…

5 hours ago

ಡೆಂಘೀ ವಿರೋಧಿ ಮಾಸಾಚರಣೆ | ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದರೆ ಯಾವ ಕಾಯಿಲೆ ಬರದು

ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…

5 hours ago