ಶಹಾಬಾದ: ಉತ್ತಮ ಸಮಾಜ ನಿರ್ಮಾಣದ ಹೊಣೆ ಹೊತ್ತ ಶಿಕ್ಷಕರು ದೈಹಿಕ, ಮಾನಸಿಕವಾಗಿ ಸದೃಢವಾಗಿದ್ದರೆ ಮಾತ್ರ ದೇಶದ ಶೈಕ್ಷಣಿಕ ಪ್ರಗತಿ ಹಾಗೂ ಸಂಸ್ಕಾರಯುತ ಬಲಿ? ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ದಂತ ವೈಧ್ಯರಾದ ಡಾ.ಸಂಧ್ಯಾ ಕಾನೇಕರ್ ಹೇಳಿದರು.
ಅವರು ನಗರದ ಎಸ್.ಜಿ. ವರ್ಮ ಹಿಂದಿ ಪ್ರೌಢಶಾಲೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಎನ್.ಸಿ.ಡಿ ಘಟಕದ ವತಿಯಿಂದ ವಿವಿಧ ಶಾಲೆಯ ಶಿಕ್ಷಕರಿಗೆ ಆಯೋಜಿಸಲಾದ ಅಸಾಂಕ್ರಾಮಿಕ ರೋಗಗಳ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಒಂದು ರಾ?ದ ಮಾನವ ಸಂಪನ್ಮೂಲವನ್ನು ರಾ?ಪ್ರೇಮ ಕೌಶಲ್ಯವನ್ನೇ ಶಿಕ್ಷಕರು ಹತ್ತಿದ್ದಾರೆ ಅವರ ಆರೋಗ್ಯ ರಕ್ಷಣೆ ಅ? ಮುಖ್ಯವಾಗಿದೆ.ಆದ್ದರಿಂದ ಅಸಾಂಕ್ರಾಮಿಕ ರೋಗಗಳ ತಪಾಸಣೆ ನಡೆಯುತ್ತಿದೆ. ಕಾಲಕಾಲಕ್ಕೆ ತಪಾಸಣೆಗೆ ಒಳಗಾಗುವುದರಿಂದ ಯಾವುದೇ ಆರೋಗ್ಯ ಸಮಸ್ಯೆಯನ್ನು ಪ್ರಾರಂಭದಲ್ಲಿ ಪತ್ತೆಹಚ್ಚಿ ಚಿಕಿತ್ಸೆ ಪಡೆಯುವುದರಿಂದ ಅಮೂಲ್ಯ ಜೀವರಕ್ಷಣೆಗೆ ಆರೋಗ್ಯ ರಕ್ಷಣೆ ಪಡೆದಂತಾಗುತ್ತದೆ.ಅಲ್ಲದೇ ಶಿಕ್ಷಕರು ಈ ಶಿಬಿರದ ಪ್ರಯೋಜನ ಪಡೆಯಲು ಮನವಿ ಮಾಡಿದರು.
ಡಾ.ಚಂದ್ರಿಕಾ ಕೋಡ್ಲಾ ಮಾತನಾಡಿ, ಇತ್ತೀಚಿನ ಆಧುನಿಕ ಆಹಾರ ಪದ್ಧತಿಯಿಂದಾಗಿ ರಕ್ತದೊತ್ತಡ,ಮಧುಮೇಹ ರೋಗ ಸಾಮಾನ್ಯವಾಗಿದೆ. ಇದರ ಜೊತೆಗೆ ಮತ್ತ? ಅನಾರೋಗ್ಯ ಸಂಬಂಧಿ ಸಮಸ್ಯೆಗಳಿಗೆ ಒಳಗಾಗದಂತೆ ಎಚ್ಚರವಹಿಸಲು ಈ ತಪಾಸಣೆ ಸಹಕಾರಿಯಾಗಲಿದೆ ಎಂದು ತಿಳಿಸಿದರಲ್ಲದೇ, ಹಸಿರು ತರಕಾರಿ ಸೊಪ್ಪು ಹಣ್ಣು ಸೇರಿದಂತೆ ಉತ್ತಮ ಆಹಾರ ಸೇವನೆ ನಿಯಮಿತ ವ್ಯಾಯಾಮ ಮಾಡಬೇಕು.ಜೀವನಪದ್ಧತಿ ಬದಲಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಸಾಧ್ಯ ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಬಸಯ್ಯಾ ಹಿರೇಮಠ, ಸುನೀತಾ, ಶರಣಮ್ಮ, ಸುಜಾತಾ ಸೇರಿದಂತೆ ಆಶಾ ಕಾರ್ಯಕರ್ತರು ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…