ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಮಕೇ ವಾಸ್ತೆ ದುರಸ್ತಿ ಕಾರ್ಯ

ಶಹಾಬಾದ: ನಗರದಿಂದ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-೧೫೦ ರಲ್ಲಿ ಹೆದ್ದಾರಿಯಲ್ಲಿ ನೆಲ ಕೆಳಗಿಳಿದ ಪರಿಣಾಮ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿರುವುದನ್ನು ಗಮನಿಸಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ವತಿಯಿಂದ ರಸ್ತೆ ದುರಸ್ತಿ ಕಾರ್ಯ ನಾಮಕೇ ವಾಸ್ತೆ ನಡೆಯಿತು.

ನಗರದ ಜಿಇ ಕಾಲೋನಿಯ ಮುಭಾಗದ ರಸ್ತೆಯ ಡಿವೈಡರ್ ಎರಡು ಕಡೆಗಳಲ್ಲಿ ನೆಲ ಕೆಳಗಿಳಿದ ಪರಿಣಾಮ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿತ್ತು.ವಾಹನಗಳ ಸಂಚರಿಸುವಾಗ ಜಂಪ್ ಆಗುತ್ತಿರುವುದನ್ನು ಗಮನಿಸಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ರಸ್ತೆ ಸಮತಟ್ಟು ಮಾಡಲು ತಗ್ಗಾದ ಪ್ರದೇಶವನ್ನು ಪರಿಶೀಲಿಸಿ ಡಾಂಬರೀಕರಣಗೊಳಿಸಿದರು.

ಇದನ್ನೂ ಓದಿ: ದೈಹಿಕ, ಮಾನಸಿಕವಾಗಿ ಸದೃಢವಾಗಿದ್ದರೆ ದೇಶದ ಶೈಕ್ಷಣಿಕ ಪ್ರಗತಿ ಸಾಧ್ಯ

ಆದರೆ ಸರಿಯಾಗಿ ಸಮತಟ್ಟು ಆಗದ ಕಾರಣ ಇನ್ನೂ ವಾಹನ ಸಂಚಾರಕ್ಕೆ ತೊಡಕಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.ಈಗಾಗಲೇ ಹಲವಾರು ಬಾರಿ ರಸ್ತೆಯ ಬದಿಯಲ್ಲಿ ಮಣ್ಣು ಸಂಗ್ರಹಣೆಗೊಂಡಿದೆ.ಇದರಿಂದ ವಾಹನ ಸವಾರರು ಜಾರಿ ಬೀಳುತ್ತಿದ್ದಾರೆ.ಡಿವೈಡರ್ ಮಧ್ಯೆ ಮತ್ತು ಫೂಟ್ ಪಾತ್ ಮೇಲೆ ಮುಳ್ಳಿನ ಗಿಡಗಳು ಬೆಳೆದು ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ.

ಅದನ್ನು ತೆರವುಗೊಳಿಸಿ ಎಂದು ತಿಳಿಸಿದರೂ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಸ್ಥಳದಲ್ಲಿದ್ದ ಜೆಇ ಅವರಿಗೆ ದೂರಿದರು. ವರ್ಷಕೊಮ್ಮೆ ಮಾತ್ರ ಅನುದಾನ ಬರುತ್ತದೆ.ಇದರಿಂದ ಏನು ಮಾಡಲು ಆಗುತ್ತಿಲ್ಲ.ಅಲ್ಲದೇ ಜಾಲಿಗಿಡಗಳು ಹಾಗೂ ಮುಳ್ಳಿನ ಗಿಡಗಳನ್ನು ತೆರವುಗೊಳಿಸಲು ಕಾರ್ಮಿಕರು ಸಿಗುತ್ತಿಲ್ಲ.ಆದ್ದರಿಂದ ನಿವೇ ಏನಾದರೂ ಕಾರ್ಮಿಕರ ವ್ಯವಸ್ಥೆ ಮಾಡಿ ಕೊಟ್ಟರೇ ಅನುಕೂಲವಾಗುತ್ತದೆ ಎಂದು ಅಧಿಕಾರಿಯೊಬ್ಬರೂ ಮಾಧ್ಯಮದವರ ಎದುರೇ ಬೇಜವಾಬ್ದಾರಿಯಾಗಿ ಮಾತನಾಡುತ್ತಿರುವುದು ಕಂಡು ಬಂದಿತು.

ಇದನ್ನೂ ಓದಿ: ವೈದ್ಯರ ಸಲಹೆ ಮೇರೆಗೆ ವಾರದ ಕಾಲ ಹೆಚ್ಡಿಕೆ ವಿಶ್ರಾಂತಿ: ಸಾರ್ವಜನಿಕ ಭೇಟಿ ಇಲ್ಲ

ರಾಷ್ಟ್ರೀಯ ಹೆದ್ದಾರಿ ಎಂದರೆ ಒಳ್ಳೆಯ ಗುಣಮಟ್ಟದ ಸುವ್ಯವಸ್ಥಿತ ರಸ್ತೆ ಇರುತ್ತದೆ.ಆದರೆ ಸರಿಯಾದ ನಿರ್ವಹಣೆ ಕೊರತೆಯಿಂದ ಎಲ್ಲಾ ಹಾಳಾಗುತ್ತಿದೆ.ಅಲ್ಲದೇ ಸರಿಯಾದ ಸಮಯಕ್ಕೆ ರಸ್ತೆ ದುರಸ್ತಿ ಮಾಡುತ್ತಿಲ್ಲ.ಅಲ್ಲದೇ ನಾಮಕೇ ಬಾಸ್ತೆ ಮಾಡುತ್ತಿರುವುದರಿಂದ ಅಪಘಾತಗಳು ಹೆಚ್ಚುತ್ತಿವೆ. ಇದನ್ನು ಮೊದಲು ಸರಿಪಡಿಸಿ ಎಂದು ಸಾರ್ವಜನಿಕರು ಕೇಳಿದರೆ ಇನ್ನೊರ್ವ ಜೆಇ ರಸ್ತೆ ಮೇಲೆಅಪಘಾತಗಳು ಆಗುತ್ತಿದ್ದರೇ ನಾವೇನು ಮಾಡುವುದು ಎಂದು ಹಾರಿಕೆ ಉತ್ತರ ನೀಡಿದ್ದಾರೆ.ಕೂಡಲೇ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಸಂಬಂಧಪಟ್ಟ ಜೆಇಗಳ ವಿರುದ್ಧ ಕ್ರಮಕೈಗೊಳ್ಳಬೇಕು. ರಸ್ತೆ ಮಧ್ಯ ಹಾಗೂ ರಸ್ತೆಯ ಪಕ್ಕದಲ್ಲಿ ಬೆಳೆದಿರುವ ಮುಳ್ಳಿನ ಗಿಡಗಳು, ಜಾಲಿ ಗಿಡಗಳು ಹಾಗೂ ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹಣೆಗೊಂಡ ಕಸ,ಮಣ್ಣನ್ನು ತೆರವುಗೊಳಿಸಬೇಕು.ಇಲ್ಲದಿದ್ದರೇ ಹೋರಾಟ ಅನಿವಾರ್ಯವಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಕಿರಣ ಚವ್ಹಾಣ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಣ್ಣು ಪರೀಕ್ಷೆ ಪ್ರಯೋಗಾಲಯ ಮತ್ತು ಕಿಸಾನ ಸುವಿಧಾ ಕೇಂದ್ರದ ಉದ್ಘಾಟನೆ

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420