ಅಸಮರ್ಥ ಗೃಹ ಸಚಿವರಿಂದಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಶಾಸಕ ಪ್ರಿಯಾಂಕ್ ಖರ್ಗೆ

ಕಲಬುರಗಿ: ಅಸಮರ್ಥ ಗೃಹ ಸಚಿವರಿಂದಾಗಿ ಜಿಲ್ಲೆಯಲ್ಲಿ ಹಾಗೂ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ. ಹಾಗಾಗಿ, ಜಿಲ್ಲೆಯಿಂದ ಮಹಿಳೆಯರ ನಾಪತ್ತೆ ಪ್ರಕರಣಗಳು‌ ಬೆಳಕಿಗೆ ಬರುತ್ತಿವೆ ಎಂದು ಮಾಜಿ ಸಚಿವರಾದ ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಟೀಕಿಸಿದರು.

ಕಲಬುರಗಿಯ ಜಗತ್ ಸರ್ಕಲ್ ಬಳಿಯ ಬಸವೇಶ್ವರ ಪ್ರತಿಮೆಯ ಹತ್ತಿರ ನಡೆಯುತ್ತಿರುವ 24 ಗಂಟೆಗಳ ಅಹೋರಾತ್ರಿ ಧರಣಿಯ ಸ್ಥಳದಲ್ಲಿ ಮಾಧ್ಯಮದವದರೊಂದಿಗೆ ಮಾತನಾಡುತ್ತಿದ್ದರು.

ಪಠ್ಯಪುಸ್ತಕಗಳಲ್ಲಿ ಕೇಸರಿಕರಣ ಹಾಗೂ‌ ಪರಿಷ್ಕೃತ ಪಠ್ಯಪುಸ್ತಕ ದಲ್ಲಿ ಮಹನೀಯರಿಗೆ ಅವಹೇಳನ ಮಾಡಲಾಗಿದೆ ಎಂದು ಸರ್ಕಾರದ ನಿರ್ಧಾರವನ್ನು‌ ವಿರೋಧಿಸಿ 24 ಗಂಟೆಗಳ ಅಹೋರಾತ್ರಿ‌ ಧರಣಿ ನಡೆಸುತ್ತಿದ್ದು ಖರ್ಗೆ ಅವರು ನಿನ್ನೆ ಬೆಳಿಗ್ಗೆಯಿಂದಲೇ ಭಾಗವಹಿಸಿದ್ದಾರೆ.

ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲಿ‌40 ಕ್ಕೂ ಅಧಿಕ ಚಿಕ್ಕ‌ವಯಸ್ಸಿನ ಮಕ್ಕಳೂ ಸೇರಿದಂತೆ ಮಹಿಳೆಯರು ನಾಪತ್ತೆಯಾಗಿರುವ ಕುರಿತು ಪೊಲೀಸ್ ಠಾಣೆ ಗಳಲ್ಲಿ ದೂರು ದಾಖಲಾಗಿವೆ. ಇದು ಜಿಲ್ಲೆಯಲ್ಲಿ ಕಾನೂನು ಸುವವ್ಯಸ್ಥೆಗೆ ಹಿಡಿದ‌ ಕನ್ನಡಿಯಾಗಿದೆ. ಇದಕ್ಕೆ ಯಾರು ಉತ್ತರ ಕೊಡಬೇಕು ? ಸ್ವತಃ ಗೃಹ ಸಚಿವರಿಗೆ ತಮ್ಮ ಇಲಾಖೆಯ ಬಗ್ಗೆ ಗೌರವವಿಲ್ಲ. ತಮ್ಮ ಸಿಬ್ಬಂದಿಗಳನ್ನೇ ‘ಎಂಜಲು ಕಾಸಿಗೆ ಕಾಯುವ ನಾಯಿಗಳು’ ಎಂದು ಜರಿಯುತ್ತಾರೆ. ಹೀಗಿರುವಾಗ ಇಲಾಖೆಯ ಮೇಲೆ ಹಿಡಿತ ಹೇಗೆ ಸಾಧ್ಯ ? ಕಾನೂನು ಸುವವ್ಯಸ್ಥೆ ಬಿಗಿಯಾಗಿರಲು‌ ಸಾಧ್ಯ ? ಎಂದು ಪ್ರಶ್ನಿಸಿದರು.

ನಗರದ ಲಾಡ್ಜ್ ಗಳು ಪೊಲೀಸರ ಸೆಟಲ್ ಮೆಂಟ್ ಕೇಂದ್ರಗಳಾಗಿವೆ ಎಂದು ಆರೋಪಿಸಿದ ಅವರು, ಅನೈತಿಕ ಚಟುವಟಿಕೆಗಳು ಎಗ್ಗಿಲ್ಲದೇ ನಡೆಯುತ್ತಿವೆ. ಗಾಂಜಾ, ಮಟ್ಕಾ, ಬೆಟ್ಟಿಂಗ್ ದಂದೆಗಳು ಅವ್ಯಾಹತವಾಗಿ ಸಾಗಿವೆ.‌ ಇಲಾಖೆ ಬಗ್ಗೆ ಹೆದರಿಕೆ ಯಾರಿಗೂ ಇಲ್ಲದಂತಾಗಿದೆ. ಇಂತಹ ಸಂದರ್ಭಲ್ಲಿ ಮಹಿಳೆಯರ ರಕ್ಷಣೆ ಯಾರು ಮಾಡಬೇಕು? ಕೇಂದ್ರ ಸರ್ಕಾರದ “ಬೇಟಿ ಬಜಾವೋ; ಬೇಟಿ ಪಡಾವೋ” ಯೋಜನೆ ಕೇವಲ ನಾಮಕಾವಾಸ್ಥೆಯಂತಾಗಿದ್ದು, ಈ ಯೋಜನೆ ಕೇವಲ ಪ್ರಚಾರ ಮಾತ್ರ ಪಡೆದುಕೊಂಡಿದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಕಳೆದ ಎರಡುವರೆ ವರ್ಷದಿಂದ ಒಟ್ಟು 180 ಮಹಿಳೆಯರು ನಾಪತ್ತೆಯಾಗಿದ್ದಾರೆ. ಮಿಸ್ಸಿಂಗ್ ಕೇಸ್ ನಲ್ಲಿ ಹೆಚ್ಚಾಗಿ ಯುವತಿಯರು ಹಾಗೂ ಮಹಿಳೆಯರಲ್ಲಿ ಅವರು ಎಲ್ಲಿದ್ದಾರೆ ಎನ್ನುವ ಸುಳಿವೇ ಇಲ್ಲ. ಎರಡೂವರೆ ವರ್ಷದಲ್ಲಿ 180 ಮಿಸ್ಸಿಂಗ್ ಕೇಸ್ ನಡೆದಿವೆ 34 ಜನ ಯುವತಿಯರು ಮಹಿಳೆಯರ ಸುಳಿವೆ ಇಲ್ಲ ಎಂದು ಕಳವಳ‌ ವ್ಯಕ್ತಪಡಿಸಿದ ಅವರು ಮಹಿಳೆಯರು ನಾಪತ್ತೆಯಾದ ಪ್ರಕರಣಗಳಲ್ಲಿ ಅವರನ್ನ ಬಲವಂತದಿಂದಲೂ ಕರೆದುಕೊಂಡು ಹೋಗಿರಬಹುದು. ಪೊಲೀಸರು ಮಹಿಳೆಯರು ನಾಪತ್ತೆ ವಿಷಯ ಬಂದಾಗ ಮೊದಲು ದೂರು ದಾಖಲಿಸಿಕೊಂಡು ತಕ್ಷಣ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಖರ್ಗೆ ಅವರು ಆಗ್ರಹಿಸಿದರು.

ಮಹಿಳೆಯ ಜೀವನ ನಿರ್ವಹಣೆಗೆ ಹಾಗೂ ಅವರು ಗೌರವಯುತವಾಗಿ ಬದುಕುವಂತಾಗಲು ಸರ್ಕಾರ ಸಮಗ್ರ ಯೋಜನೆಗಳನ್ನು ಕಟ್ಟುನಿಟ್ಟಾಗಿ‌ ಜಾರಿಗೆ ತರುವಂತೆ ಇದೇ ಸಂದರ್ಭದಲ್ಲಿ ಅವರು ಒತ್ತಾಯಿಸಿದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

1 hour ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

1 hour ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

1 hour ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

2 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

2 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420