ಬಿಸಿ ಬಿಸಿ ಸುದ್ದಿ

ಪೌರಕಾರ್ಮಿಕರನ್ನು ಮೂಲಸ್ಥಾನಕ್ಕೆ ವರ್ಗಾಯಿಸಲು ಕೆಡಿಎಸ್‌ಎಸ್ ಪ್ರತಿಭಟನೆ

ಸುರಪುರ: ನಗರಸಭೆಯಲ್ಲಿ ಕಳೆದ ಅನೇಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಮೂಲಸ್ಥಾನಕ್ಕೆ ವರ್ಗಾಯಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ಸದಸ್ಯರು ನಗರದ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಘಟನೆಯ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ, ನಗರಸಭೆಯಲ್ಲಿ ಕಳೆದ ಹತ್ತು ವರ್ಷಕ್ಕಿಂತಲೂ ಹೆಚ್ಚು ವರ್ಷಗಳಿಂದ ವಿವಿಧ ಇಲಾಖೆಗೆಳಲ್ಲಿ ಒಂದೇ ಸ್ಥಳದಲ್ಲಿ ಹಲವು ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಪೌರಕಾರ್ಮಿಕರು ಸರಕಾರಿ ನೌಕರರೆಂದು ಪರಿಗಣಿಸಲ್ಪಟ್ಟ ತಕ್ಷಣವೇ ಸುರಪುರದಿಂದ ಕಕ್ಕೇರಾ, ಕೆಂಭಾವಿ, ಹುಣಸಗಿ, ಶಹಾಪುರಕ್ಕೆ ವರ್ಗಾವಣೆ ಮಾಡಿ ದಲಿತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಪೌರಕಾರ್ಮಿಕರು ಸುರಪುರ ದಿಂದ ತಾವು ಮಾಡುವ ಪ್ರದೇಶಗಳಿಗೆ ಮುಂಜಾನೆ ತಲುಪುವ ಉದ್ದೇಶದಿಂದ ಆಟೋ ಮಾಡಿಕೊಂಡು ಹೋಗಿ ಬರುವ ಸಂಬಳ ಅಲ್ಲಿಗೆ ಆಗುವಂತಾಗಿದೆ. ಕೂಡಲೇ ಜಿಲ್ಲಾಡಳಿತ ಸುರಪುರ ನಗರಸಭೆಯಿಂದ ಬೇರೆಡೆಗೆ ವರ್ಗಾವಣೆ ಮಾಡಿದವರನ್ನು ಮೂಲಸ್ಥಾನಕ್ಕೆ ನೇಮಿಸಿ ಕುಟುಂಬಗಳು ನೆಮ್ಮದಿ ಜೀವನ ನಡೆಸಲು ಅನುಕೂಲ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.

ನಂತರ ತಹಸೀಲ್ದಾರರಿಗೆ ಬರೆದ ಮನವಿಯನ್ನು ಗ್ರೇಡ-೨ ತಹಸೀಲ್ದಾರ್ ಮಲ್ಲಯ್ಯ ದಂಡು ಮೂಲಕ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾನಪ್ಪ ಬಿಜಾಸಪುರ, ಜೆಟ್ಟಪ್ಪ ನಾಗರಾಳ, ಮೂರ್ತಿ ಬೊಮ್ಮನಳ್ಳಿ, ಮುತ್ತುರಾಜ ಹುಲಿಕೇರಿ, ಖಾಜಾ ಹುಸೇನ್, ಹುಲಗಪ್ಪ ಜಾಂಗೀರ, ರಾಮಣ್ಣ ಬಬಲಾದ, ಹಣಮಂತ ನರಸಿಂಗಪೇಟ, ಮಲ್ಲಪ್ಪ ಬಡಗೇರ, ಭೀಮಣ್ಣ ಮಾಲಗತ್ತಿ ಸೇರಿದಂತೆ ಇತರರಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

1 hour ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

4 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

7 hours ago