ಸಮಾಜದಲ್ಲಿ ಪ್ರಬುದ್ದತೆಯ ಕೊರತೆ ಇದೆ: ಶಾಸಕ ಪ್ರಿಯಾಂಕ್ ಖರ್ಗೆ

ಕಲಬುರಗಿ: ಡಾ ಬಾಬಾಸಾಹೇಬ ಆಶಯದಂತೆ ನಮ್ಮ ಸಮಾಜದಲ್ಲಿ ಪ್ರಬುದ್ದತೆ ಹಾಗೂ ಪ್ರಜ್ಞೆ ಇನ್ನೂ ಬಂದಿಲ್ಲ ಎಂದು ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ವಿಷಾದಿಸಿದರು.

ಅಫಜಲ್ಪುರ ತಾಲೂಕಿನ ಹೆರೂರು ( ಬಿ) ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಡಾ ಬಾಬಾಸಾಹೇಬ ಅಂಬೇಡ್ಕರ ಅವರ 131 ಜಯಂತ್ಯೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ವ್ಯಕ್ತಿ ಪೂಜೆ ಯನ್ನು ಬಾಬಾಸಾಹೇಬರು ವಿರೋಧಿಸಿದ್ದರು. ದುರಂತ ಎಂದರೆ ರಾಜಕಾರಣಿಗಳಿಗೆ ದೊಡ್ಡ ದೊಡ್ಡ ಹಾರ ಹಾಕಿ ಸನ್ಮಾನ ಮಾಡುತ್ತೀರಿ. ಇದು ಬಾಬಾಸಾಹೇಬರ ತತ್ವಕ್ಕೆ ವಿರುದ್ದವಾದದರು ಎಂದರು.

ನಿಮ್ಮ ಸೇವೆ ಮಾಡುವುದಕ್ಕೆ ನನಗೆ ನೀವು ವಿಧಾನಸೌಧಕ್ಕೆ ಕಳಿಸಿದ್ದೀರಿ. ಶಾಲೆ, ಕಾಲೇಜು, ರಸ್ತೆ, ಚರಂಡಿ ನಿರ್ಮಾಣ ಮಾಡುವುದು ನನ್ನ ಕರ್ತವ್ಯ ನಾನು ಕೆಲಸ ಮಾಡಿದರೆ ನೀವು ಯಾಕೆ ಹಾರ ತುರಾಯಿ ಹಾಕಿ ಅಭಿಮಾನ ಮೆರೆಯುತ್ತೀರಿ ?ಎಂದು ಪ್ರಶ್ನಿಸಿದರು.

ಅಂಬೇಡ್ಕರ ಅವರನ್ನ ಒಂದು ಜಾತಿಗೆ ಸೀಮಿತಿಗೊಳಿಸುವ ಯತ್ವವನ್ನು ವಿರೋಧಿಸಿದ ಖರ್ಗೆ ಅವರು ಬೇರೆಯವರು ಅಂಬೇಡ್ಕರ ಅವರನ್ನು ಓದಲು ತಯಾರಿಲ್ಲ ಅಥವ ನಾವು ಅವರನ್ನ ಬಿಟ್ಟಿಕೊಡುತ್ತಿಲ್ಲ. ಈ ದೇಶದ ನಾಗರಿಕರು ಸ್ವಾಭಿಮಾನದಿಂದ ತಲೆ ಎತ್ತಿ ಜೀವನ ನಡೆಸಲು ಸಂವಿಧಾನ ರಚಿಸಿದ ಮಹಾಪುರಷನನ್ನ ಒಂದೇ ಜಾತಿಗೆ ಸೀಮಿತಿಗೊಳಿಸಿದ್ದು ಸರಿಯಲ್ಲ ಎಂದರು.

ಲಂಡನ್ ಸ್ಕೂಲ ಆಫ್ ಎಕಾನಮಿಕ್ಸ್ ಮಾದರಿಯ ವಿಶ್ವವಿದ್ಯಾಲಯ ಸ್ಥಾಪನೆಯ ಹಿಂದೆ ಕಾಂಗ್ರೆಸ್ ಶ್ರಮವಿದೆ. ಆದರೆ ಇಂದು ಮೋದಿ ಅದನ್ನು ಉದ್ಘಾಟಿಸಲು ಬೆಂಗಳೂರಿಗೆ ಬಂದಿದ್ದಾರೆ. ” ನಮ್ಮ ಕೂಸಿಗೆ ಅವರು ಹೆಸರಿಡಲು ಬಂದಿದ್ದಾರೆ ” ಎಂದು ವ್ಯಂಗ್ಯವಾಡಿದರು.
ತಿಪ್ಪಣ್ಣಪ್ಪ ಕಮಕನೂರು ಮಾತನಾಡಿ ಮುಂಬರುವ ದಿನಗಳಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ರಾಜಕೀಯದಲ್ಲಿ ಉನ್ನತ ಸ್ಥಾನಗಳಿಸಲಿದ್ದಾರೆ ಎಂದರು. ಡಾ ಬಾಬಾಸಾಹೇಬರ ಕನಸನ್ನು ನನಸು ಮಾಡುವ ಏಕೈಕ ವ್ಯಕ್ತಿ ಪ್ರಿಯಾಂಕ್, ಅವರು ಬಸವಣ್ಣನ ರೀತಿ ಕ್ರಾಂತಿಕಾರಿಯಾಗಿ ಬಂದಿದ್ದಾರೆ ಎಂದು ಗುಣಗಾನ ಮಾಡಿದರು.

ವೇದಿಕೆಯ ಮೇಲೆ ಶಾಸಕರಾದ ಎಂ.ವೈ.ಪಾಟೀಲ್, ಮಾಜಿ ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು, ಶಿವಾನಂದ ಪಾಟೀಲ, ಜೆ.ಎ.ಕೊರಬು,ಸಿದ್ಧಾರ್ಥ, ಶಿವಾನಂದ ಪ್ಯಾಟಿ, ಸುನೀಲ ದೊಡ್ಡಮನಿ ಸೇರಿದಂತೆ ಮತ್ತಿತರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420