ಬಿಜೆಪಿ ಸರಕಾರ ರಾಹುಲ್ ಗಾಂಧಿಯವರಿಗೆ ಕಿರುಕುಳ: ಕಾಂಗ್ರೆಸ್ ಪ್ರತಿಭಟನೆ

ಶಹಾಬಾದ: ಕೇಂದ್ರದ ಬಿಜೆಪಿ ಸರಕಾರ ದ್ವೇಷ ರಾಜಕಾರಣ, ತನಿಖಾ ಸಂಸ್ಥೆಗಳ ದುರುಪಯೋಗ ಹಾಗೂ ತನಿಖೆ ನೆಪದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಮಂಗಳವಾರ ನಗರದ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಗೂ ಮುನ್ನ ಕಾಂಗ್ರೆಸ್ ಮುಖಂಡ ವಿಜಯಕುಮಾರ ರಾಮಕೃಷ್ಣ ನೇತೃತ್ವದಲ್ಲಿ ನಗರದ ನೆಹರು ವೃತ್ತದಿಂದ ತಹಸೀಲ್ದಾರ ಕಚೇರಿಯವರೆಗೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ಧ ಘೋಷಣೆ ಕೂಗಿದರು.

ನಂತರ ಕಾಂಗ್ರೆಸ್ ಮುಖಂಡ ವಿಜಯಕುಮಾರ ರಾಮಕೃಷ್ಣ ಮಾತನಾಡಿ, ಕೇಂದ್ರದ ಬಿಜೆಪಿ ಸರಕಾರ ರಾಜಕೀಯ ಪ್ರೇರಿತ ಸೇಡು ಮತ್ತು ದ್ವೇಷದಿಂದ ತನಿಖಾ ಸಂಸ್ಥೆಗಳ ದುರ್ಬಳಿಕೆ ಮಾಡಿಕೊಂಡು ಗಾಂಧಿ ಕುಟುಂಬವನ್ನು ಕಿರುಕುಳ ನೀಡುತ್ತಿದ್ದಾರೆ. ರಾಜಕೀಯ ವರ್ಚಸ್ಸು ಕುಗ್ಗಿಸಲು, ಕಾಂಗ್ರೆಸ್ ನಾಯಕರ ತೇಜೋವಧೆಗೆ ತನಿಖಾ ಸಂಸ್ಥೆಗಳಾದ ಇ.ಡಿ, ಸಿಬಿಐ, ಐಟಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಗಾಂಧಿ ಕುಟುಂಬದ ವಿರುದ್ಧ ಬಿಜೆಪಿ ಕೀಳು ಮಟ್ಟದ ದ್ವೇಷ ರಾಜಕಾರಣ ಮಾಡುತ್ತಿರುವುದು ಖಂಡನೀಯ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದವರು ಗಾಂಧಿ ಕುಟುಂಬ. ಇದನ್ನು ಅರಿಯದ ಬಿಜೆಪಿ ಸರಕಾರ ಅತ್ಯಂತ ಕೀಳು ಮಟ್ಟದ ಕೆಲಸ ಮಾಡುತ್ತಿದೆ.ಇದನ್ನು ಕೈಬಿಡದಿದ್ದರೇ ಹೋರಾಟ ಮುಂದುವರೆಯುತ್ತದೆ ಎಂದು ಎಚ್ಚರಿಕೆ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ ಮರ್ಚಂಟ್ ಮಾತನಾಡಿ,ರಾಜಕೀಯ ಯಾವಾಗಲೂ ಸೌಹಾರ್ದಯುತವಾಗಿರಬೇಕೆ ವಿನಃ ದ್ವೇಷದಿಂದ ಕೂಡಿರಬಾರದು. ಅಧಿಕಾರಿ ಯಾರಿಗೂ ಶಾಶ್ವತವಲ್ಲ.ಇವತ್ತು ಬಿಜೆಪಿ ಅಧಿಕಾರದಲ್ಲಿದೆ.ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂಬುದು ಮರೆಯಬಾರದು.ಗಾಂಧಿ ಕುಟುಂಬದ ಇಂದಿರಾಗಾಂಧಿ, ರಾಜೀವಗಾಂಧಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ.ಅಂತಹ ಕುಟುಂಬದ ಮೇಲೆ ಇಲ್ಲಸಲ್ಲದ ಆರೋಪಗಳುಮಾಡುವುದು, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಕಿರುಕುಳ ನೀಡುವುದು ಸರಿಯಲ್ಲ.ಅಭಿವೃದ್ಧಿಗಾಗಿ ರಾಜಕೀಯ ಮಾಡುವುದು ಬಿಟ್ಟು ಸೇಡಿನ ರಾಜಕಾರಣ ಮಾಡುವುದನ್ನು ತೀವ್ರವಾಗಿ ಖಂಡಿಸುತ್ತೆವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಂತರ ಗ್ರೇಡ್-೨ ತಹಸೀಲ್ದಾರ ಗುರು ಸಂಗಾವಿಕ ಅವರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಮುಖಂಡರಾದ ಮೃತ್ಯಂಜಯ್ ಹಿರೇಮಠ, ಕಿರಣ ಚವ್ಹಾಣ, ಕುಮಾರ ಚವ್ಹಾಣ,ಇನಾಯತಖಾನ ಜಮಾದಾರ, ಗಿರೀಶ ಕಂಬಾನೂರ,ಶರಣಗೌಡ ಪಾಟೀಲ,ವಿಶ್ವರಾಧ್ಯ ಬಿರಾಳ,ಡಾ.ಅಹ್ಮದ್ ಪಟೇಲ್,ದಿಲೀಪ್ ನಾಯಕ,ಮ.ರಫಿಕ್ ಕಾರೋಬಾರಿ,ಕೃಷ್ಣಪ್ಪ ಕರಣಿಕ್, ಮುನ್ನಾ ಪಟೇಲ್,ಮರಲಿಂಗ ಕಮರಡಗಿ,ಅವಿನಾಶ ಕಂಬಾನೂರ,ನಾಗೇಂದ್ರ ನಾಟೇಕಾರ, ಮೀರಾಜ ಸಾಹೇಬ, ಸಾಜಿದ್ ಗುತ್ತೆದಾರ, ಮೆಹಬೂಬ, ಶಿವಕುಮಾರ ನಾಟೇಕಾರ, ಮಲ್ಲಿಕಾರ್ಜುನ ವಾಲಿ,ಹಾಷಮ್ ಖಾನ,ಫಜಲ್ ಪಟೇಲ್,ಜಾವೀದ್,ರಾಜು ಮೇಸ್ತ್ರಿ, ವೆಂಕಟೇಶ ಕುಸಾಳೆ, ವೆಂಕಟೇಶ ಪವಾರ,ಇಮ್ರಾನ್ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

10 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

12 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

13 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

13 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

13 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420