ಬಿಸಿ ಬಿಸಿ ಸುದ್ದಿ

ಸಮಾಜ ಬದಲಾವಣೆಯಲ್ಲಿ ಯುವಜನರ ಪಾತ್ರ

  • ಕಾಶಿಬಾಯಿ ಗುತ್ತೇದಾರ

ನಮ್ಮ  ಸಮಾಜ ಇಂದು ವಿಷದಿಂದ ಕೂಡಿದೆ.ಅನೇಕ ಸಾಮಾಜಿಕ ಕಾಯಿಲೆಗಳ ಸರಮಾಲೆ ಯಾಗಿದೆ. ಸ್ವಾತಂತ್ರ್ಯ ಸಿಕ್ಕು ವರ್ಷಗಳೇ ಆದರೂ ಬಡವರು ಬಡವರಾಗಿಯೇ ಉಳಿದಿದ್ದಾರೆ. ಶ್ರೀಮಂತರು ಮಾತ್ರ ಸಹಸ್ರಾರು ಕೋಟಿಗಳ ಒಡೆಯರಾಗುತ್ತಿದ್ದಾರೆ. ಪಕ್ಷ ರಾಜಕೀಯ ಅಂತು ಕೇಳಲೇ ಬಾರದು ಅದು ಅಂತು ಕೆಟ್ಟು ನಿಂತಿದೆ. ಇಂದು ವಿದ್ಯೆ ಎಂಬುದು ಮಾರಾಟದ ವಸ್ತುವಾಗಿದೆ.

ಶಾಸಕರು, ಮಂತ್ರಿಗಳಿಂದ ಹಿಡಿದು ಪಂಚಾಯ್ತಿ ಸದಸ್ಯರವರೆಗೆ ದುರ್ಲಾಭಕ್ಕೋಸ್ಕರ ವಿದ್ಯಾಸಂಸ್ಥೆಗಳನ್ನು ನಡೆಸುತ್ತಿದ್ದಾರೆ. ಇವರಷ್ಟೇ ಅಲ್ಲದೆ ಮಠಾಧಿಪತಿಗಳೂ ಈ ಸ್ಪರ್ಧೆಯಲ್ಲಿದ್ದಾರೆ. ವಿದ್ಯೆ ಪಡೆದವರು ಮೂಕ ಪ್ರೇಕ್ಷಕರಂತೆ ಇಂದಿನ ಯುವಕರು ನೋಡಿಕೊಂಡು ಸುಮ್ನೆ ಕುಳಿತಿದ್ದಾರೆ.ಒಂದು ಕಡೆ ಹೇಳುವರು ಅದೇನೆಂದರೆ ನಮ್ಮದು ಪ್ರಜಾರಾಜ್ಯ, ಪ್ರಜೆಗಳೇ ನಮ್ಮ ದೇಶದ ಪ್ರಭುಗಳು ಎಂದು ನಮ್ಮ ರಾಜ್ಯಾಂಗ ಹೇಳುತ್ತದೆ. ಆದರೆ ನಾವು ಮಾತ್ರ ಆಡಳಿತಕ್ಕೂ ನಮಗೂ ಯಾವುದೇ ಸಂಬಂಧವಿಲ್ಲವೇನೋ ಎಂಬಂತೆ ನಡೆದುಕೊಳ್ಳುತ್ತಿದ್ದೇವೆ. ಇಂಥಾ ಮನೋಭಾವ ಇಂದಿನ ಯುವಕರಿಗೆ ತರವಲ್ಲ ಎಂಬುದು ತಿಳಿದುಕೊಳ್ಳಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯ.

ಗಾಢನಿದ್ರೆಯಲ್ಲಿರುವ ಯುವಕರು ಜಾಗೃತರಾಗಿ ದೇಶದ ಸಮಸ್ಯೆಗಳನ್ನೆಲ್ಲ ಒಂದೊಂದಾಗಿ ಬಗೆಹರಿಸಲು ಮುಂದಾಗಬೇಕು.ಅದನ್ನು ಮಾಡುವ ಮೊದಲು ನಾವುಗಳು ಅಂದ್ರೆ ಯುವಜನತೆ ದೇಶದ ಇಂದಿನ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು. ಸಮಸ್ಯೆಗೆ ಪರಿಹಾರ ಕಂಡುಕೊಂಡು ಬದಲಾವಣೆಗೆ ಸಂಘಟಿತರಾಗಿ ಹೋರಾಡಬೇಕು. ಯುವಕರು ನಮ್ಮ ಆಶಾಕಿರಣ ಎಂಬ ಮಾತು ನಾವೆಲ್ಲರೂ ಸೇರಿ ನಿಜಮಾತನ್ನಾಗಿಸೋಣ.

ಪ್ರಸ್ತುತ ದಿನಗಳಲ್ಲಿ ನಮ್ಮ ಮುಂದೆ ಇರುವ ಪ್ರಮುಖ ಸಮಸ್ಯೆಗಳಿವು :-

  1. ಪ್ರಜಾಪ್ರಭುತ್ವಕ್ಕೆ ಕುತ್ತು ಬರುತ್ತಿದೆ.
  2. ನಮ್ಮೆಲ್ಲರ ಮೂಲಭೂತ ಸಮಸ್ಯೆಗಳಾದ ಬಡತನ, ನಿರುದ್ಯೋಗ, ಭ್ರಷ್ಟಾಚಾರ, ಆಡಳಿತದ ದುರ್ಬಳಕೆ ಇವುಗಳಿಗೆ ಪರಿಹಾರ ಕಂಡುಹಿಡಿದುಕೊಳ್ಳಬೇಕಿದೆ.
  3. ಪ್ರಸ್ತುತ ಆಡಳಿತದಲ್ಲಿರುವ ಸರಕಾರ ಜನರ ಸಮಸ್ಯೆಗಳನ್ನು ಚರ್ಚಿಸಿ ಬಗೆಹರಿಸುವುದುದನ್ನು ಬಿಟ್ಟು ಜಗಳ, ಗದ್ದಲ, ಗಲಾಟೆ ಇವುಗಳಲ್ಲೇ ಕಾಲ ಕಳೆಯುತ್ತಿದ್ದಾರೆ. ಅದು ಅಲ್ಲದೆ ಚರ್ಚೆಯಿಲ್ಲದೆ ಮಸೂದೆಗಳು ಪಾಸಾಗುತ್ತಿವೆ.
  4. ಹಣ, ಜಾತಿ, ಧರ್ಮ, ತೋಳ್ಬಲ ಇರುವವರು ಮಾತ್ರ ನಮ್ಮನ್ನು ಅಳುವ ಪ್ರತಿನಿಧಿಗಳಾಗಿ ಆಯ್ಕೆಯಾಗುತ್ತಿದ್ದಾರೆ.
  5. ಪ್ರಸ್ತುತ ಯುವಜನತೆ ತಾವು ಓದಿದ ವಿದ್ಯೆಯನ್ನು ದುಡ್ಡಿರುವವರು ದುಡ್ಡಿಗೆ ಮಾರಾಟ ಮಾಡಿಕೊಂಡು ಅದೆ ದುಡ್ಡಿಗೆ ದುಡಿಯುತ್ತಿದ್ದಾರೆ.

ಇದರ ಪರಿಣಾಮವಾಗಿ ದುಡ್ಡಿನ ಸಮಸ್ಯೆ ಎದುರಿಸುವವರು, ಶ್ರಮ ಪಟ್ಟು ಓದುವವರು ಬೇಸತ್ತು ನಿರಾಶೆಯಾಗುತ್ತಿದ್ದಾರೆ. ಇಂತಹ ಹತ್ತು ಹಲವು ಸಮಸ್ಯೆಗಳು ಪ್ರಾಮಾಣಿಕವಾಗಿ, ಶ್ರದ್ದೆ ಯಿಂದ ಓದುವ ವಿದ್ಯಾರ್ಥಿಗಳಲ್ಲಿ ಓದುವ ಆಶೆಯನ್ನು ನಿರಾಸೆಗೊಳಿಸುವಂತೆ ಮಾಡುತ್ತಿವೆ. ಮೊದಲು ಈ ಸಮಸ್ಯೆಗಳನ್ನು ಬಗೆ ಹರಿಸಲು ಯುವಕರು ತೊಡಗಬೇಕು.

ಸಮಾಜದಲ್ಲಿ ಮೌಲ್ಯಗಳ ಪತನವೇ ಇಂದಿನ ನಮ್ಮ ಈ ಅಧೋಗತಿಗೆ ಕಾರಣವಾಗಿದೆ.ಮಾನವೀಯ ಮೌಲ್ಯಗಳಾದ ಸೋದರತ್ವ, ನಾವು ನಮ್ಮವರು ಎಂಬ ಭಾವನೆ,ಸಮಾನತೆಗಳ ಆಧಾರದ ಮೇಲೆ ನಮ್ಮ ಸಮಾಜ ರೂಪಿತವಾಗಬೇಕು. ಜಾತಿ, ಧರ್ಮಗಳನ್ನು ರಾಜಕೀಯಕ್ಕೆ ಬೆರೆಸಬಾರದು. ಭಾವೈಕ್ಯತೆಯಿಂದ ಕೂಡಿ ಬಾಳಬೇಕು. ಪ್ರಸ್ತುತ ದಿನಗಳಲ್ಲಿ ಸಮಾಜ ಎಂಬುದು ಪೂರ್ತಿ ಕೆಟ್ಟುಹೋಗಿದೆ.ಸರ್ಕಾರ ನಡೆಸುವವರು ಭ್ರಷ್ಟರಾಗಿದ್ದಾರೆ, ಸರ್ಕಾರಿ ಅಧಿಕಾರಿಗಳು ಲಂಚಕೋರರು. ಇವುಗಳನೆಲ್ಲ ನೋಡಿಕೊಂಡು ಮೂಕಪ್ರೇಕ್ಷರಂತೆ ಕುಳಿತಿದ್ದಾರೆ ಯುವಜನತೆ.

ಸಮಾಜದಲ್ಲಿ ತಾಂಡವವಾಡುತ್ತಿರುವ ಬಡತನ, ಭ್ರಷ್ಟಾಚಾರ, ಭಯೋತ್ಪಾದನೆ, ಅನಾಚಾರ, ಅಸಮಾನತೆ, ನಿರುದ್ಯೋಗ, ದೌರ್ಜನ್ಯ, ದಬ್ಬಾಳಿಕೆಗಳನ್ನು ನಿಯಂತ್ರಿಸಬೇಕಾಗಿದೆ. ನಶಿಸಿ ಹೋಗುತ್ತಿರುವ ಮಾನವೀಯ ಮೌಲ್ಯಗಳನ್ನು ಉಳಿಸಬೇಕಾಗಿರುವ ಜವಾಬ್ದಾರಿ ನಮ್ನೆಲ್ಲರದಾಗಿದೆ. ಇಂದಿನ ಸಮಾಜದ ಸ್ಥಿತಿಯೇ ಮುಂದುವರೆದರೆ ಮುಂದಿನ ಮಕ್ಕಳು ತಮ್ಮ ಸುಂದರ ಭವಿಷ್ಯವನ್ನು ಕಳೆದುಕೊಳ್ಳಬೇಕಾಗುತ್ತದೆ. ನಮ್ಮ ಹಿರಿಯರು ಹಾಕಿಕೊಟ್ಟಿರುವ ಅಡಿಪಾಯವನ್ನು ನಾವು ಮುಂದಿನ ಜನಾಂಗಕ್ಕೆ ಉಳಿಸಿಕೊಡಬೇಕಿದೆ. ಆದ್ದರಿಂದ ಸಮಾಜವನ್ನು ತಿದ್ದಲು ಯುವಕರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

6 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

6 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

6 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

6 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

6 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

7 hours ago