ಶಹಾಪುರ: ನಗರದ ಪ್ರತಿಷ್ಠಿತ ಪ್ರಾರ್ಥನ ಪಿ.ಯು.ಕಾಲೇಜಿನ ಕಲಾ ವಿಭಾಗದ ದ್ವೀತಿಯ ಪಿ.ಯು.ಸಿ ಯಲ್ಲಿ ಕುಮಾರ ಭಾಗಪ್ಪ ತಂದೆ ಗೋವಿಂದಪ್ಪ 90.33 % ಅಂಕ ಪಡೆಯುವ ಮೂಲಕ ಕಾಲೇಜಿನ ಕೀರ್ತಿ ತಂದ ಪ್ರಯುಕ್ತ ಕಾಲೇಜು ಆಡಳಿತ ಮಂಡಳಿ,ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರಿಂದ ಶುಭಕೋರಿ ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು,ಓದಿನ ಜೊತೆಯಲ್ಲಿ ಸಂಸ್ಕಾರ ಕೂಡ ಅವಶ್ಯವಿದೆ, ಓದು ಜ್ಞಾನಕ್ಕಾಗಿ ಇರಲಿ ಅಂಕಗಳಿಗಾಗಿ ಬೇಡ ಎಂದು ಉಪನ್ಯಾಸಕರಾದ ಡಿ.ಪಿ.ಸಜ್ಜನ ಹೇಳಿದರು. ವಿದ್ಯಾರ್ಥಿಗಳೇ ಕಾಲೇಜಿನ ಆಸ್ತಿ,ಅವರ ಸಾಧನೆಯ ನಮಗೆ ಅಂತಸ್ತು ಎಂದು ಕಾಲೇಜಿನ ಪ್ರಾಂಶುಪಾಲರಾದ ಶಿವಪ್ಪ ಮಾತನೂರ ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷರಾದ ಡಾ.ಬಸವರಾಜ ಸ್ಯಾದಪುರ,ದೇವೀಂದ್ರಪ್ಪ ಬಡಿಗೇರ,ಉಪನ್ಯಾಸಕಾದ ನಾಗಪ್ಪ ಹಡಪದ,ಧನರಾಜ ದೊಡ್ಮನಿ,ಅಣ್ಣಾರಾವ,ರವಿಕುಮಾರ ಹೊಸಮನಿ,ಸದಾನಂದ ಪೀರಗೋಳ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…