ಕಲಬುರಗಿ: ಕಲ್ಯಾಣ ಕರ್ನಾಟಕ ಮಾ.ಸಂ.ಕೃ.ಸಾಂ.ಸಂಘದ ಅಧ್ಯಕ್ಷರಾದ ಡಾ. ಬಸವರಾಜ ಪಾಟೀಲ್ ಸೇಡಂ ಅವರಿಗೆ ಉಪರಾಷ್ಟ್ರಪತಿ ಹುದ್ದೆ ನೀಡಿ ಗೌರವಿಸಬೇಕೆಂದು ಅಭಿಮನಿಗಳು ಕೇಂದ್ರ ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಮಾಜಿ ರಾಜ್ಯಸಭಾ ಲೋಕಸಭಾ ಸದಸ್ಯರಾಗಿರುವ ವೇಳೆ ನಿಸ್ವಾರ್ಥ ಸೇವೆ ನೀಡಿದ ಬಸವರಾಜ್ ಪಾಟೀಲ್ ಸೇಡಂ ಅವರು ಕಲ್ಯಾಣ ಕರ್ನಾಟಕದ ಸಮಾಜ ಸೇವಕರಾಗಿದದ, ಅಲ್ಲದೇ ಕಲ್ಯಾಣ ಕರ್ನಾಟಕದ ಹರಿಕಾರರಾಗಿ ಈ ಭಾಗದ ಎಳೀಗೆ ಮತ್ತು ದೇಶವನ್ನೆ ತೀರುಗಿ ನೋಡುವಂತೆ ಸಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅಭಿಮಾನಿಗಳ ಬಳಗ ಪ್ರಕಟಣೆಯಲ್ಲಿ ತಿಳಿಸಿದೆ.
ಡಾ. ಬಸವರಾಜ ಪಾಟೀಲ ಸೇಡಂ ಅವರನ್ನು ಉಪರಾಷ್ಟ್ರಪತಿ ಹುದ್ದೆಗೆ ಆಯ್ಕೆ ಮಾಡಿದರೆ ಭಾರತದ ಕೀರ್ತಿ ಉತ್ತರೋತ್ತರಕ್ಕೆ ಹೋಗುತ್ತದೆ. ಈ ಹುದ್ದೆಗೆ ಸೂಕ್ತ ವ್ಯಕ್ತಿ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.