ಕಾರಜೋಳಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ: ಬಸವರಾಜ ಹಂಗರಗಿ ಆಗ್ರಹ

0
183

ಜೇವರ್ಗಿ: ಶಾಸಕ ಗೋವಿಂದ ಕಾರಜೋಳ ಅವರು ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಸಾಕಷ್ಟು ಶ್ರಮವಹಿಸಿದ್ದು ಅವರನ್ನು ಉಪಮುಖ್ಯಮಂತ್ರಿಯಾಗಿ ಮಾಡಬೇಕು ಎಂದು ಮಾದಿಗ ಸಮಾಜದ ಯುವ ಮುಖಂಡ ಬಸವರಾಜ ಹೊಸ್ಮನಿ ಹಂಗರಗಿ ಒತ್ತಾಯಿಸಿದ್ದಾರೆ.

ಗೋವಿಂದ ಕಾರಜೋಳ  ಮಾದಿಗ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಮಾದಿಗ ಸಮುದಾಯಕ್ಕೆ ಬಿಜೆಪಿ ಇದುವರೆಗೂ ಪ್ರಮುಖ ಸ್ಥಾನ ನೀಡಿಲ್ಲ. ಸಮುದಾಯದ ಅಭಿವೃದ್ಧಿಗಾಗಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ರಾಜ್ಶದ ಬಹುತೇಕ ಸಂದರ್ಭದಲ್ಲಿ ಸಮುದಾಯ ಮುಖ್ಶಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆಗೆ ನಿಂತಿದೆ. ಅಲ್ಲದೆ ಶಾಸಕ ಗೋವಿಂದ ಕಾರಜೋಳ ಅವರು ಬಿಜೆಪಿ ಪಕ್ಷದ ಶಿಸ್ತಿನ ಶಿಪಾಯಿಯಾಗಿದ್ದಾರೆ.

Contact Your\'s Advertisement; 9902492681

ಸಮುದಾಯದ ಅಭಿವ್ರದ್ಧಿ ದ್ರಷ್ಠಿಯಿಂದ ಗೋವಿಂದ ಕಾರಜೋಳ ಅವರಿಗೆ ಉಪಮುಖ್ಶಮಂತ್ರಿ ಕೊಡುವುದು ಅವಶ್ಶವಾಗಿದೆ. ಗೋವಿಂದ ಕಾರಜೋಳ ಅವರಿಗೆ ಉಪಮುಖ್ಶಮಂತ್ರಿ ಮಾಡುವಂತೆ ನೂತನ  ಮುಖ್ಶಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ರಾಷ್ಟ್ರೀಯ ಅಧ್ಯಕ್ಷ ಅಮಿತ ಶಾ ಅವರಿಗೆ ಮನವಿ ಮಾಡಲಾಗುವುದು’ ಎಂದು ಅವರು ಹೇಳಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here