ಬಿಸಿ ಬಿಸಿ ಸುದ್ದಿ

ದೆಹಲಿ-ಪಂಜಾಬದಂತೆ ರಾಜ್ಯದಲ್ಲಿ ಮಹಿಳೆಯರಿಗೆ ಸವಲತ್ತುಗಳು ಒದಗಿಸಲು ಬದ್ಧ: ಸಿದ್ದು ಪಾಟೀಲ

  • ಆಮ್ ಆದ್ಮಿ ಪಕ್ಷದತ್ತ ಯುವಕರ ಲಗ್ಗೆ

ಕಲಬುರಗಿ, ಜು. ೦೪- ದೆಹಲಿ ರಾಜ್ಯದಲ್ಲಿ ೧೮ ವರ್ಷಗಳು ಮೇಲ್ಪಟ್ಟ ಯುವತಿಯರಿಗೆ ಹಾಗೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಾಗೂ ಪ್ರತಿ ತಿಂಗಳು ಸಾವಿರ ರೂಪಾಯಿ ಭತ್ಯೆ ನೀಡಲಾಗುತ್ತಿದೆ. ದೆಹಲಿ ಹಾಗೂ ಪಂಜಾಬ ರಾಜ್ಯದ ಮಾಡೆಲ್‌ನಂತೆ ರಾಜ್ಯದಲ್ಲಿ ನಾವು ಕೆಲಸ ಮಾಡಲು ಬದ್ಧರಾಗಿದ್ದಿವೆ ಎಂದು ಕಲಬುರಗಿ ದಕ್ಷಿಣ ಮತಕ್ಷೇತ್ರದ ಮುಖಂಡ ಸಿದ್ದು ಪಾಟೀಲ ತೆಗನೂರ ಅವರು ಅಭಿಪ್ರಾಯ ಪಟ್ಟರು.

ನಗರದ ರೈಲು ನಿಲ್ದಾಣದ ಹತ್ತಿರದ ಅಂಬಿಕಾ ನಗರದ ಸಭಾಂಗಣದಲ್ಲಿ ನಡೆದ ಆಮ್ ಆದ್ಮಿ ಪಕ್ಷಕ್ಕೆ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ರಾಜ್ಯದಲ್ಲಿ ಎಲ್ಲಾ ಪಕ್ಷದ ಆಡಳಿತವನ್ನು ನಾವು ಕಂಡಿದ್ದೇವೆ. ಭ್ರಷ್ಟರಿಂದ ಕೂಡಿದ ಪಕ್ಷಗಳಿಗೆ ನೀವು ಮತಹಾಕಿ ರಾಜ್ಯದ ಜನತೆ ಪಶ್ಚಾತಾಪ ಪಡುವಂತಾಗಿದೆ. ಮುಂದಿನ ದಿನಗಳ ಆಮ್ ಆದ್ಮಿ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿಯೊಂದು ಮನೆಗೆ ೩೦೦ ವ್ಯಾಟ್ ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಾಗೂ ಪ್ರತಿ ತಿಂಗಳು ಅವರ ಖಾತೆಗೆ ನೇರವಾಗಿ ಸಾವಿರ ರೂಪಾಯಿ ಭತ್ಯೆ ನೀಡಲು ಬದ್ಧವಾಗಿದೆ ಎಂದು ಸಿದ್ದು ಪಾಟೀಲ ತೇಗನೂರ ಅವರು ಹೇಳಿದರು.

ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷದ ಅಲೆ ಎದ್ದಿದೆ. ಜಿಲ್ಲೆಯಲ್ಲಿ ಪಕ್ಷಕ್ಕೆ ಸಾವಿರಾರು ಯುವಕ- ಯುವತಿಯರು ಸೇರ್ಪಡೆಗೊಳ್ಳುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಪಕ್ಷದಿಂದ ಪ್ರತಿ ವಾರ್ಡ್ ಮತ್ತು ವಿಧಾನ ಸಭಾ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಹಾಗೂ ನೀಡಲು ನಾವು ದುಡಿಯುತ್ತೇವೆ ಎಂದು ಆಮ್ ಆದ್ಮಿ ಪಕ್ಷದ ನಗರಾಧ್ಯಕ್ಷ ಸಜ್ಜಾದ ಅಲಿ ಇನಾಮದಾರ ಅವರು ಹೇಳಿದರು.

ಮುಖಂಡರಾದ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸುಲೇಮಾನ್ ಅಲಿ. ಸಿದ್ದು ಪಾಟೀಲ ತೇಗನೂರ, ಸಜ್ಜಾದ ಅಲಿ ಇನಾಮ್ದಾರ ಅವರಿಂದ ಆಮ್ ಆದ್ಮಿ ಪಕ್ಷಕ್ಕೆ ಸಾವಿರಾರು ಯುವಕ-ಯುವತಿಯರು ಹಾಗೂ ಹಿರಿಯರು ಮಹಿಳೆಯರನ್ನು ಬರಮಾಡಿಕೊಳ್ಳಲಾಯಿತು. ಮೌಸಿನ್,ಅಫ್ರೋಜ್,ಸಚಿನ್ ಕೋಗನೂರ, ಕಿರಣ, ಮಹೆಬೂಬ ಅಲಿ, ಸಂಧ್ಯಾರಾಜ್, ಇಮ್ರಾನ್ ವೇದಮೊಹನ, ಪ್ರದೀಪ ಸೇರಿದಂತೆ ಅನೇಕರು ಭಾಗವಹಿಸಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

4 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

4 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

5 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

5 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

6 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

6 hours ago