ಬಿಸಿ ಬಿಸಿ ಸುದ್ದಿ

ಕಟ್ಟಡ ಕಾರ್ಮಿಕರಿಗೆ ಆರೋಗ್ಯ ಸಂಚಾರಿ ಕ್ಲಿನಿಕ್‌ ಗೆ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಚಾಲನೆ

ಕಲಬುರಗಿ: ನೋಂದಾಯಿತ ಕಟ್ಟಡ ಕಾರ್ಮಿಕ ಮತ್ತು ಅವರ ಅವಲಂಬಿತರ ಆರೋಗ್ಯ ಸೇವೆಗಾಗಿ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಬೆಂಗಳೂರು ಆರಂಭಿಸಿರುವ ಸಂಚಾರಿ ಆರೋಗ್ಯ ಕ್ಲಿನಿಕ್‌ನ ಸೌಲಭ್ಯಗಳನ್ನು ಬಳಸಿಕೊಳ್ಳಬೇಕೆಂದು  ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಹೇಳಿದರು.

ನಗರದ ಕಲ್ಯಾಣ ಕರ್ನಾಟಕ ಪ್ರದೇಶಿಕ ಅಭಿವೃದ್ಧಿ ಮಂಡಳಿ ಆವರಣದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿ ಬೆಂಗಳೂರಿನಿಂದ ಬಂದಿರುವ ಶ್ರಮಿಕ ಸಂಜೀವಿನಿ ಸಂಚಾರಿ ಆರೋಗ್ಯ ಕ್ಲಿನಿಕ್ ಸೇವಾ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಟ್ಟಡ ಕಾರ್ಮಿಕರ ಜೀವನ ಸುಧಾರಣೆಗಾಗಿ ಕಾರ್ಮಿಕ ಇಲಾಖೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಕಟ್ಟಡ ಕಾರ್ಮಿಕರು ಕೆಲಸದಲ್ಲಿರುವ ಹಾಗೂ ಅವರು ವಾಸಿಸುವ ಸ್ಥಳಗಳಿಗೆ ಚಿಕಿತ್ಸಾಲಯದೊಂದಿಗೆ ತೆರಳಿ ಉಚಿತ ಸೇವೆ ನೀಡಲಿದೆಯೆಂದು, ಕಟ್ಟಡ ಕಾರ್ಮಿಕರು ಇದರ ಸೇವೆ ಪಡೆದುಕೊಳ್ಳಬೇಕು ಎಂದರು.

ಸಂಚಾರಿ ಆರೋಗ್ಯ ಕ್ಲಿನಿಕ್‌ನ ಡಾ. ರವಿ ಸಿರಸಗಿ ಮಾತನಾಡಿ ಸೋಮವಾರದಿಂದ ಶನಿವಾರದ ವರೆಗೆ ಕಲಬುರಗಿ ನಗರದ ಕಟ್ಟಡ ಕಾರ್ಮಿಕರು ಹೆಚ್ಚಾಗಿ ವಾಸಿಸುವ ಸ್ಥಳಗಳಲ್ಲಿ ಸಂಚಾರಿ ಕ್ಲಿನಿಕ್ ವಾಹನವು ತೆರಳಲಿದ್ದು, ಬಿ.ಪಿ, ಶುಗರ್ ಮೊದಲಾದ ಟೆಸ್ಟ್‌ಗಳು ಹಾಗೂ ಇ.ಸಿ.ಜಿ ಪರೀಕ್ಷೆಯನ್ನು ಕೂಡಾ ನಡೆಸಲಾಗುತ್ತದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಬೇರೆ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದರು.

ಸೋಮವಾರ ರಾಮಜಿನಗರ ಮತ್ತು ತಾರಫೈಲ್ (ಮಧ್ಯಾಹ್ನ), ಮಂಗಳವಾರ ಬ್ರಹ್ಮಪೂರ ಮತ್ತು ಬಸವನಗರ ( ಮಧ್ಯಾಹ್ನ ), ಬುಧುವಾರ ಗಂಗಾನಗರ ಮತ್ತು ರಾಜಾಪೂರ ( ಮಧ್ಯಾಹ್ನ), ಗುರುವಾರ ಶರಣಸಿರಸಗಿ, ಜಂಬಗಿ ಮತ್ತು ಅಷ್ಟಗಿ (ಮಧ್ಯಾಹ್ನ), ಶುಕ್ರವಾರ ಊದನೂರ ಮತ್ತು ಹಿರಾಪೂರ (ಮಧ್ಯಾಹ್ನ), ಶನಿವಾರ ಆದರ್ಶನಗರ ಮತ್ತು ಸಿ.ಬಿ.ಐ ಕಾಲೋನಿಗಳಲ್ಲಿ (ಮಧ್ಯಾಹ್ನ) ವಾಹನವು ಸಂಚರಿಸಿ ಆರೋಗ್ಯ ತಪಾಸಣೆ ಮಾಡಲಾಗುತ್ತದೆ ಎಂದರು.

ಶಾಸಕರು ಸ್ಥಳದಲ್ಲಿಯೇ ಬಿ.ಪಿ ಚೆಕ್ ಮಾಡಿಸಿಕೊಂಡರು. ವಿವಿಧ ಕಟ್ಟಡ ಕಾರ್ಮಿಕರು ಸಹ ತಮ್ಮ ಆರೋಗ್ಯ ತಪಾಸಣೆ ಮಾಡಿಕೊಂಡರು. ಈ ಸಂದರ್ಭದಲ್ಲಿ ಪ್ರಾದೇಶಿಕ ಉಪಕಾರ್ಮಿಕ ಆಯುಕ್ತ ಡಿ.ಜಿ ನಾಗೇಶ,  ಹಾಯಕ ಕಾರ್ಮಿಕ ಆಯುಕ್ತ ಡಾ. ಅವಿನಾಶ ನಾಯ್ಕ, ಕಾರ್ಮಿಕ ಅಧಿಕಾರಿ ರಮೇಶ ಎಸ್. ಸುಂಬಡ್ ಹಿರಿಯ ಕಾರ್ಮಿಕ ನಿರೀಕ್ಷಕರು ಹಾಗೂ ಕಟ್ಟಡ ಕಾರ್ಮಿಕರು ಇದ್ದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

6 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

6 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

6 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

6 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

6 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

6 hours ago