ಕಲಬುರಗಿ: ಪಿಎಸ್ಐ ಆಕ್ರಮದಲ್ಲಿ ಎಡಿಜಿಪಿ ಅರೆಸ್ಟ್ ಆಗಿರವ ಕುರಿತು ಮಾಜಿ ಸಚಿವ ಶಾಸಕ ಪ್ರಿಯಾಂಕ್ ಖರ್ಗೆ ಕಲಬುರಗಿಯಲ್ಲಿಂದ ಸುದ್ಧಿಗೋಷ್ಠಿಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.
PSI ಹಗರಣದ ಕುರಿತು ಮಾತನಾಡಿದ ಅವರು ಯಡಿಯೂರಪ್ಪ ಸಿಎಂ ಆಗಿದ್ದಾಗ ಔಟ್ ಲುಕ್ ಪತ್ರಿಕೆಯಲ್ಲಿ ಕರ್ನಾಟಕ ಅತ್ಯಂತ ಭ್ರಷ್ಟ ಸರಕಾರ ಎಂದುಸುದ್ದಿ ಬಂದಿತ್ತು ಮತ್ತೆ ಈಗ ಅದೇ ಸುದ್ದಿಯನ್ನೇ ಮರುಪ್ರಕಟ ಮಾಡಬೇಕಿದೆ. ಪಿಎಸ್ ಐ ಹಗರಣದ ಬಗ್ಗೆ ಸದನದಲ್ಲೇ ಶಾಸಕರಾದ ರವಿ ಅವರ ಪ್ರಶ್ಬೆಗೆ ಉತ್ತರಿಸಿ ಉನ್ನತ ತಂಡದ ಅಧಿಕಾರಿಗಳು ಕ್ಲೀನ್ ಚಿಟ್ ಕೊಟ್ಟಿರುವುದಾಗಿ ಗೃಹ ಸಚಿವರು ಉತ್ತರಿಸಿದ್ದರು.
ಈಗ ಎಡಿಜಿಪಿ ಅರೆಸ್ಟ್ ಆಗಿದ್ದಾರೆ, ಗೃಹ ಸಚಿವರು ನಮ್ಮ ಮೇಲೆ ಟೀಕೆ ಮಾಡುತ್ತಿದ್ದಾರೆ. ಅವರಿಗೆ ಕಾಮನ್ ಸೆನ್ಸ್ ಇಲ್ಲವಾ ? ಪಿಎಸ್ ಐ ನೇಮಕಾತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದೇ ಸಮರ್ಥಿಸಿದ್ದ ಗೃಹ ಸಚಿವರು ಈಗ ಎಡಿಜಿಪಿ ಸೇರಿದಂತೆ ಸುಮಾರು 60 ಜನ ಅಧಿಕಾರಿಗಳು ಹಾಗೂ ಇತರರು ಅರೆಸ್ಟ್ ಆಗಿದ್ದಾರೆ ಗೃಹ ಸಚಿವರು ಈಗೇನು ಹೇಳುತ್ತಾರೆ.