ಬೇಡ ಜಂಗಮ ಸಮಾಜದ ಮುಖಂಡರ ಬಂಧನ ಸಂವಿಧಾನ ವಿರೋಧಿಯಾಗಿದೆ: ಕಂಬಳೇಶ್ವರ ಶ್ರೀ

ಚಿತ್ತಾಪುರ: ಬೆಂಗಳೂರನ ಪ್ರಿಡಂ ಪಾರ್ಕನಲ್ಲಿ ಹಮ್ಮಿಕೊಂಡ ಬೇಡ ಜಂಗಮ ಸಮಾಜ ಬೃಹತ್ ಪ್ರತಿಭಟನೆಯಲ್ಲಿ ಬಾಗವಹಿಸಲು ಆಗಮಿಸುತ್ತಿರುವ ಜಂಗಮ ಸಮಾಜದ ಮುಖಂಡರನ್ನು ತಡೆದು ಬಂಧಿಸಿರುವದು ಸಂವಿಧಾನ ವಿರೋಧಿಯಾಗಿದೆ ಎಂದು ಕಂಬಳೇಶ್ವರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯರು ತ್ರಿವವಾಗಿ ಖಂಡಿಸಿದರು.

ಇಲ್ಲಿಯ ತಹಸೀಲ್ದಾರ ಕಚೇರಿಯಲ್ಲಿ ತಾಲೂಕ ಹೈದ್ರಾಬಾಕ ಕರ್ನಾಟಕ ಬೇಡ ಜಂಗಮ ಸಮಾಜ ಸಂಸ್ಥೆ ವತಿಯಿಂದ ಹಮ್ಮಿಕೊಂಡ ಮನವಿ ಪತ್ರಸಲ್ಲಿಸುವ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿ ರಾಜ್ಯದಲ್ಲಿ ಬೇಡ ಜಂಗಮ ಸಮಾಜದವರು ಆರ್ಥಿಕವಾಗಿ ಬಡವರಾಗಿದ್ದಾರೆ. ಸಂವಿಧಾನ ಬದ್ದ ಹಕ್ಕಿಗಾಗಿ ಬಹುದಿನಗಳಿಂದ ಹೋರಾಟ ಮಾಡಲಾಗುತ್ತದೆ. ಆದರೆ ಶಾಂತಿಯುತವಾಗಿ ಹೋರಾಟ ಮೂಲಕ ಸಿ.ಎಂ.ಬಸವರಾಜ ಬೋಮ್ಮಾಯಿಗೆ ಮನವಿ ಪತ್ರಸಲ್ಲಿಸುವ ಹೊರಾಟದ ಹಮ್ಮಿಕೊಳ್ಳಲಾಗಿತ್ತು.

ಹೊರಾಟದಲ್ಲಿ ಭಾಗವಹಿಸಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಬರುತ್ತಿದುವ ಮುಖಂಡರನ್ನು ಬಂಧಿಸಿರುವದು ಕಾನೂನು ವಿರೋದಿಯಾಗಿದೆ ಎಂದು ಖಂಡಿಸಿದ ಅವರು ಸರಕಾರ ಕೂಡಲೆ ವಿಳಂಬ ನೀತಿ ಅನುಸರಿಸದೆ ಸಂಬಂದ ಪಟ್ಟ ಇಲಾಖೆ ಮೂಲಕ ಬೇಡ ಜಂಗಮ ಸಮಾಜಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಆದೇಶಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯಧ್ಯಕ್ಷ ಬಿ.ಡಿ. ಹಿರೇಮಠ ಅವರು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲು ಅವಕಾಶ ಕೊಡೆದೆ ಬೇಗನೆ ಆದೇಶ ಮಾಡಬೇಕು ಎಂದು ಆಗ್ರಹಿಸಿದರು. ಮನವಿ ಪತ್ರವನ್ನು ತೋಟಯ್ಯ ಓದಿದರು ತಾಲೂಕ ಅಧ್ಯಕ್ಷ ವೀರುಪಾಕ್ಷಿಯ್ಯ ಮಠಪತಿ ತಹಸೀಲದ್ದಾರರಿಗೆ ಮನವಿ ಪತ್ರ ಸಲ್ಲಿಸಿಸಿದರು.

ಈ ಸಂರ್ಭದಲ್ಲಿ ಹಲಕರ್ಟಿಸಿದ್ದಶ್ರೀ ಧಾನ್ಯಾಶ್ರಮಾದ ರಾಜಶೇಖರ ಸ್ವಾಮಿಗಳು, ಶಿವಪುತ್ರಯ್ಯ ಸ್ವಾಮಿ ನಾಲವಾರ, ಬಸಯ್ಯ ಸ್ವಾಮಿ ಹಿರೇಮಠ, ವೀರಭದ್ರಯ್ಯ ಸ್ವಾಮಿ, ತೋಟ್ಟಯ್ಯ ಹಂಪಯ್ಯ, ರಾಜಶೇಖರ ಸ್ವಾಮಿ ಕೊಲ್ಲೂರ, ಬಸಯ್ಯ ಸ್ವಾಮಿ ನಂದಿಕೋಲ ಮಠ ರಾವೂರ, ಕರಬಸ್ಸಯ್ಯಶಾಸ್ತ್ರಿ, ಮಂಜುನಾಥ ಶಾಸ್ತ್ರೀಗಳು, ವಿರೂಪಾಕ್ಷಿ ಸ್ವಾಮಿ ದಿಗ್ಗಾಂವ ಸೇರಿದಂತೆ ನೂರಾರು ಜನರು ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

10 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

12 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

13 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

13 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

13 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420