ದೇವಿಕೇರಿ: ಎಸ್‌ಡಿಎಂಸಿ ಅಧ್ಯಕ್ಷರಾಗಿ ಮಹಾದೇವ ಗಡದರ ನೇಮಕ

0
7

ಸುರಪುರ: ತಾಲೂಕಿನ ದೇವಿಕೇರಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ೨೦೨೨-೨೩ನೇ ಸಾಲಿನಿಂದ ಮೂರು ವರ್ಷಗಳ ಅವಧಿಗೆ ಶಾಲಾ ಮೇಲುಸ್ತುವಾರಿ ಹಾಗೂ ಅಭಿವೃದ್ಧಿ ಸಮಿತಿ(ಎಸ್‌ಡಿಎಂಸಿ) ನೂತನಪದಾಧಿಕಾರಿಗಳ ಆಯ್ಕೆಗಾಗಿ ಪಾಲಕರ ಹಾಗೂ ಪೋಷಕರ ಸಭೆ ನಡೆಯಿತು.

ಸಭೆಯಲ್ಲಿ ಉಪಸ್ಥಿತರಿದ್ದ ಕ್ಷೇತ್ರ ಸಮನ್ವಯಾಧಿಕಾರಿ ಪಂಡಿತ್ ನಿಂಬೂರ ಮಾತನಾಡಿ ಶಾಲೆಯ ಶೈಕ್ಷಣಿಕ ಬೆಳವಣಿಗೆಯಲ್ಲಿ ಎಸ್‌ಡಿಎಂಸಿ ಸಹಕಾರ ತುಂಬಾ ಮುಖ್ಯವಾಗಿದ್ದು ಸರಕಾರ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದು ಇವುಗಳ ಸದುಪಯೋಗಪಡೆದುಕೊಂಡು ನೂತನ ಸಮಿತಿಯ ಪದಾಧಿಕಾರಿಗಳು ತಮ್ಮ ಗ್ರಾಮದ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಗಮನಹರಿಸಬೇಕು ಎಂದು ಹೇಳಿದರು.

Contact Your\'s Advertisement; 9902492681

ಸಭೆಯಲ್ಲಿ ಸಮಿತಿಗೆ ೯ಜನ ಸದಸ್ಯರನ್ನು ಸರ್ವಾನುಮತದಿಂದ ಆಯ್ಕೆಗೊಳಿಸಲಾಯಿತು,ನಂತರ ಎಸ್‌ಡಿಎಂಸಿ ನೂತನ ಅಧ್ಯಕ್ಷರಾಗಿ ಮಹದೇವ ಗಡದರ, ಹಣಮಂತ ಬಿಲ್ಲವ್(ಉಪಾಧ್ಯಕ್ಷ) ಹಾಗೂ ಸದಸ್ಯರಾಗಿ ಶಂಕರಗೌಡ ಮಾಲಿಪಾಟೀಲ, ದ್ಯಾವಪ್ಪ ಯಾಳವಾರ, ಜರೀನಾ ದೊಡ್ಡಮನಿ, ಮರೆಮ್ಮ ಬೇವಿನಗಿಡ, ವೆಂಕೋಬ ಗೆಜ್ಜೆಲಿ, ಮಾನಪ್ಪಗೌಡ ಮಾಲಿಪಾಟೀಲ ಮತ್ತು ಲಕ್ಷ್ಮೀ ಭಂಡಾರಿ ಅವರನ್ನು ಆಯ್ಕೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಆರ್.ಕೆ.ಕೋಡಿಹಾಳ ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here