ಬಿಸಿ ಬಿಸಿ ಸುದ್ದಿ

ದೇವಿಕೇರಿ: ಎಸ್‌ಡಿಎಂಸಿ ಅಧ್ಯಕ್ಷರಾಗಿ ಮಹಾದೇವ ಗಡದರ ನೇಮಕ

ಸುರಪುರ: ತಾಲೂಕಿನ ದೇವಿಕೇರಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ೨೦೨೨-೨೩ನೇ ಸಾಲಿನಿಂದ ಮೂರು ವರ್ಷಗಳ ಅವಧಿಗೆ ಶಾಲಾ ಮೇಲುಸ್ತುವಾರಿ ಹಾಗೂ ಅಭಿವೃದ್ಧಿ ಸಮಿತಿ(ಎಸ್‌ಡಿಎಂಸಿ) ನೂತನಪದಾಧಿಕಾರಿಗಳ ಆಯ್ಕೆಗಾಗಿ ಪಾಲಕರ ಹಾಗೂ ಪೋಷಕರ ಸಭೆ ನಡೆಯಿತು.

ಸಭೆಯಲ್ಲಿ ಉಪಸ್ಥಿತರಿದ್ದ ಕ್ಷೇತ್ರ ಸಮನ್ವಯಾಧಿಕಾರಿ ಪಂಡಿತ್ ನಿಂಬೂರ ಮಾತನಾಡಿ ಶಾಲೆಯ ಶೈಕ್ಷಣಿಕ ಬೆಳವಣಿಗೆಯಲ್ಲಿ ಎಸ್‌ಡಿಎಂಸಿ ಸಹಕಾರ ತುಂಬಾ ಮುಖ್ಯವಾಗಿದ್ದು ಸರಕಾರ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದು ಇವುಗಳ ಸದುಪಯೋಗಪಡೆದುಕೊಂಡು ನೂತನ ಸಮಿತಿಯ ಪದಾಧಿಕಾರಿಗಳು ತಮ್ಮ ಗ್ರಾಮದ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಗಮನಹರಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಸಮಿತಿಗೆ ೯ಜನ ಸದಸ್ಯರನ್ನು ಸರ್ವಾನುಮತದಿಂದ ಆಯ್ಕೆಗೊಳಿಸಲಾಯಿತು,ನಂತರ ಎಸ್‌ಡಿಎಂಸಿ ನೂತನ ಅಧ್ಯಕ್ಷರಾಗಿ ಮಹದೇವ ಗಡದರ, ಹಣಮಂತ ಬಿಲ್ಲವ್(ಉಪಾಧ್ಯಕ್ಷ) ಹಾಗೂ ಸದಸ್ಯರಾಗಿ ಶಂಕರಗೌಡ ಮಾಲಿಪಾಟೀಲ, ದ್ಯಾವಪ್ಪ ಯಾಳವಾರ, ಜರೀನಾ ದೊಡ್ಡಮನಿ, ಮರೆಮ್ಮ ಬೇವಿನಗಿಡ, ವೆಂಕೋಬ ಗೆಜ್ಜೆಲಿ, ಮಾನಪ್ಪಗೌಡ ಮಾಲಿಪಾಟೀಲ ಮತ್ತು ಲಕ್ಷ್ಮೀ ಭಂಡಾರಿ ಅವರನ್ನು ಆಯ್ಕೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಆರ್.ಕೆ.ಕೋಡಿಹಾಳ ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

5 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

18 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

19 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

20 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

20 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

20 hours ago