ಶಹಾಬಾದ್‌: ತಲ್ವಾರ್‌ನಿಂದ ಇರಿದು ಕಾಂಗ್ರೆಸ್ ಮುಖಂಡನ ಹತ್ಯೆ

ಕಲಬುರಗಿ: ಜಿಲ್ಲೆಯ ಶಹಾಬಾದ್ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡ ಗಿರೀಶ ಕಂಬಾನೂರ (42) ಎಂಬುವವರನ್ನು ದುಷ್ಕರ್ಮಿಗಳು ತಲ್ವಾರ್‌ನಿಂದ ಇರಿದು ಸೋಮವಾರ ಮಧ್ಯಾಹ್ನ ಹತ್ಯೆ ಮಾಡಿದ್ದಾರೆ.

ಎರಡು ವರ್ಷಗಳ ಹಿಂದೆ ಅವರ ಸಣ್ಣ ಸತೀಶ ಕಂಬಾನೂರ ಅವರನ್ನು ಹತ್ಯೆ ಮಾಡಲಾಗಿತ್ತು. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಗಿರೀಶ ಅವರ ಪತ್ನಿ ಅಂಜಲಿ ಕಂಬಾನೂರ ಅವರು ಪ್ರಸ್ತುತ ಶಹಾಬಾದ್ ನಗರಸಭೆ ಅಧ್ಯಕ್ಷೆಯಾಗಿದ್ದಾರೆ.

ಶಹಾಬಾದ್ ರೈಲ್ವೆ ನಿಲ್ದಾಣದ ಬಳಿ ಕುಳಿತಿದ್ದ ಗಿರೀಶ ಅವರನ್ನು ಹುಡುಕಿಕೊಂಡು ಬಂದ ದುಷ್ಕರ್ಮಿಗಳು ತಕ್ಷಣವೇ ತಲ್ವಾರ್‌ನಿಂದ ಹತ್ತಾರು ಕಡೆ ಇರಿದು ಪರಾರಿಯಾದರು. ಘಟನೆಗೆ ಬಳಸಿದ ಎರಡು ತಲ್ವಾರ್‌ಗಳ ಪೈಕಿ ಒಂದು ಹೊಟ್ಟೆಯಲ್ಲೇ ಸಿಲುಕಿಕೊಂಡಿತ್ತು.

ತಕ್ಷಣ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತು. ಆದರೆ, ಅದಾಗಲೇ ಕೊನೆಯುಸಿರೆಳೆದಿದ್ದರು.

ಜೀವ ಉಳಿಸದ ಪಿಸ್ತೂಲ್: ಗಿರೀಶ ಅವರಿಗೆ ಜೀವ ಬೆದರಿಕೆ ಇರುವುದು ಗೊತ್ತಿತ್ತು. ಹೀಗಾಗಿ, ಇತ್ತೀಚಿನವರೆಗೂ ಇಬ್ಬರು ಖಾಸಗಿ ಗನ್‌ಮ್ಯಾನ್‌ಗಳನ್ನು ಇಟ್ಟುಕೊಂಡಿದ್ದರು. ಇತ್ತೀಚೆಗೆ ಪಿಸ್ತೂಲ್ ಇಟ್ಟುಕೊಳ್ಳಲು ಪರವಾನಗಿ ಸಿಕ್ಕಿದ್ದರಿಂದ ಗನ್‌ಮ್ಯಾನ್‌ಗಳನ್ನು ಕೆಲಸದಿಂದ ಬಿಡಿಸಿದ್ದರು. ಪಿಸ್ತೂಲ್ ತಮ್ಮ ಬಳಿ ಇರಿಸಿಕೊಳ್ಳುತ್ತಿದ್ದರು. ತಲ್ವಾರ್ ಹಿಡಿದು ಬಂದ ದುಷ್ಕರ್ಮಿಗಳು ಪಿಸ್ತೂಲ್ ತೆಗೆಯಲೂ ಅವಕಾಶ ಕೊಡದೇ ಹಲ್ಲೆ ಮಾಡಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420