ಬಿಸಿ ಬಿಸಿ ಸುದ್ದಿ

ಮನುಷ್ಯ ಬೌದ್ಧಿಕವಾಗಿ ವಿಕಾಸವಾಗಿದ್ದಾನೆಯೇ ಹೊರತು ಮಾನಸಿಕವಾಗಿ ಆಗಿಲ್ಲ

ಕಲಬುರಗಿ: ಇಂದಿನ ವೈಜ್ಞಾನಿಕ ಯುಗದಲ್ಲಿ ಮನುಷ್ಯ ಬೌದ್ಧಿಕವಾಗಿ ವಿಕಾಸವಾಗಿದ್ದಾನೆಯೇ ಹೊರತು ಮಾನಸಿಕವಾಗಿ ಆಗಿಲ್ಲ. ವಿಜ್ಞಾನದಿಂದ ಅನೇಕ ಪ್ರಯೋಜನಗಳಾಗಿದ್ದರೂ ಸಹ ಮನುಷ್ಯ ಮಾತ್ರ ತನ್ನ ತನದಿಂದ ಹೊರಬಂದಿಲ್ಲ. ಹಾಗಾಗಿ, ಮಾನಸಿಕ ಬದಲಾವಣೆಯಿಂದ ಮಾತ್ರ ಶಾಂತಿ ಮತ್ತು ನೆಮ್ಮದಿಯ ಬದುಕು ಕಾಣಲು ಸಾಧ್ಯವಾಗುತ್ತದೆ ಎಂದು ಡಾ.ಸಿ.ವಿ.ರಾಮನ್ ಪ್ರಶಸ್ತಿ ಪುರಸ್ಕೃತರೂ ಆದ ವಿಜ್ಞಾನಿ ಡಾ.ಎಂ.ಎಸ್.ಜೋಗದ ಅಭಿಪ್ರಾಯಪಟ್ಟರು.

ನಗರದ ಎ.ಕೆ.ಆರ್.ದೇವಿ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅತಿಥಿಯಾಗಿ ಆಗಮಿಸಿದ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಉನ್ನತಾಧಿಕಾರಿ ಆನಂದ ಬಂದ್ರಕಳ್ಳಿ ಮಾತನಾಡಿ, ಇಂದಿನ ಸಮಾಜದ ಪ್ರಗತಿಗೆ ಮಾರಕವಾಗಿರುವ ಮೌಢ್ಯ, ಅಂಧಶ್ರದ್ಧೆ, ಅಂಧಾನುಕರಣೆ, ಶೋಷಣೆ ವಿರುದ್ಧ ಇಂದಿನ ಯುವ ಜನತೆ ಧ್ವನಿಯೆತ್ತುವ ಮೂಲಕ ಸಮಾಜದ ಸುಧಾರಣೆಗೆ ಮುಂದಾಗಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಕಾಲ ಕಳೆಯದೆ ತಮ್ಮ ಓದಿನತ್ತ ಗಮನಹರಿಸಬೇಕು. ಜತೆಗೆ ವಿದ್ಯಾರ್ಥಿಗಳು ಸಾಧಿಸುವ ಛಲ ಹೊಂದಿರಬೇಕು. ಸತತವಾದ ಪ್ರಯತ್ನದೊಂದಿಗೆ ನಮ್ಮಲ್ಲಿರುವ ಛಲವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕೆಂದು ಮಾರ್ಮಿಕವಾಗಿ ಹೇಳಿದರು.

ಹೆಚ್.ಕೆ.ಇ. ಸಂಸ್ಥೆಯ ಡಾ.ಮಾಲಕರೆಡ್ಡಿ ಮೆಡಿಕಲ್ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ವಿಜಯಲಕ್ಷ್ಮೀ ಮರಮಕಲ್, ಕಾಲೇಜಿನ ವ್ಯವಸ್ಥಾಪಕ ಎಂ.ವಿ.ಎಸ್.ಸುಬ್ರಹ್ಮಣ್ಯಂ, ಪ್ರಮುಖರಾದ ಪರಮೇಶ್ವರ ಶಟಕಾರ, ಶಿವಾನಂದ ಮಠಪತಿ, ಸಿದ್ಧರಾಮ ಹಂಚನಾಳ, ಶ್ರೀಕಾಂತ ಪಾಟೀಲ ತಿಳಗೂಳ , ಜಗದೀಶ ಮರಪಳ್ಳಿ, ರವೀಂದ್ರಕುಮಾರ ಭಂಟನಳ್ಳಿ, ಪ್ರಭುದೇವ ಯಳವಂತಗಿ, ಎಸ್.ಎಂ.ಪಟ್ಟಣಕರ್ ಇತರರಿದ್ದರು. ಕಾಲೇಜಿನ ಆಡಳಿತಾಧಿಕಾರಿ ವಿದ್ಯಾಸಾಫರ ದೇಶಮುಖ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಉಪನ್ಯಾಸಕರಾದ ಕಿರಣ ಗೋಡಬಾಲೆ, ಡಾ.ಶಿವರಾಜ ಪಾಟೀಲ ಗೋನಾಲ, ರಾಜಶೇಖರ ಕೋರೆ, ಹೀನಾ ತಬಸ್ಸುಮ್, ವಿಕ್ರಮ ಬಾದ್ರಿ, ಸೌಮ್ಯ ನಟರಾಜ್ ಬಿ. ಇತರರಿದ್ದರು. ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದಲ್ಲಿ ರಸಾಯನ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾಗಿ ನೇಮಕಗೊಂಡ ಡಾ.ಅರುಣಕುಮಾರ ಲಗಶೆಟ್ಟಿ ಅವರನ್ನು ಇದೇ ಸಂದರ್ಭದಲ್ಲಿ ವಿಶೇಷವಾಗಿ ಗೌರವಿಸಲಾಯಿತು.

ನಂತರ ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

36 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

38 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

41 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago