ಸುರಪುರ: ಶ್ರೀ ಮಹರ್ಷಿ ಭಗೀರಥ ಉಪ್ಪಾರ ಸಮಾಜ ಸಂಘ ಸುರಪುರ ವತಿಯಿಂದ ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ಶ್ರೀ ಮಹರ್ಷಿ ಭಗೀರಥರ ಜಯಂತ್ಯೋತ್ಸವ ಹಾಗೂ ಮಹರ್ಷಿ ಭಗೀರಥ ಯಾತ್ರಾ ನಿವಾಸ ಕಾಮಗಾರಿಗೆ ಅಡಿಗಲ್ಲು ಸಮಾರಂಭ ನಡೆಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ರಾಜುಗೌಡ ಮಾತನಾಡಿ,ಹಿಂದೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ತಮ್ಮೆಲ್ಲರಿಗೆ ಮಾತು ಕೊಟ್ಟಂತೆ ಇಂದು ೨೫ ಲಕ್ಷ ರೂಪಾಯಿಗಳ ಅನುದಾನದಲ್ಲಿ ಯಾತ್ರಾ ನಿವಾಸ ನಿರ್ಮಾಣ ಮಾಡಲಾಗುತ್ತಿದ್ದು ಇನ್ನು ಕೆಲವೇ ತಿಂಗಳುಗಳಲ್ಲಿ ಕಾಮಗಾರಿ ಮುಗಿಸಲು ಪ್ರಯತ್ನ ಮಾಡಲಾಗುವುದು ಎಂದರು.ಸಮಾಜದ ಅಭಿವೃಧ್ಧಿಗೆ ಬೇಕಾದ ನೆರವು ನೀಡಲು ಸಿದ್ಧ,ತಾವು ನಿವೇಶನ ನೀಡುವುದಾದರೆ ಶಿಕ್ಷಣ ಸಂಸ್ಥೆಯನ್ನು ನೀಡುವೆನು ಅಲ್ಲದೆ ಈಗಾಗಲೇ ಉಪ್ಪಾರ ಸಮಾಜಕ್ಕೆ ನಿರಂತರವಾಗಿ ರಾಜಕೀಯ ಪ್ರಾತಿನಿಧ್ಯ ನೀಡಲಾಗುತ್ತಿದೆ ಕ್ಷೇತ್ರದಲ್ಲಿನ ಉಪ್ಪಾರ ಸಮಾಜದ ಏಳಿಗೆಗೆ ಸದಾಕಾಲ ನಿಮ್ಮ ಜೊತೆಗಿರುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದ ಸಾನಿಧ್ಯವಹಿಸಿದ್ದ ಡಾ:ಪುರುಷೋತ್ತಮಾನಂದಪುರಿ ಸ್ವಾಮೀಜಿ ಮಾತನಾಡಿ,ರಾಜ್ಯದಲ್ಲಿನ ಉಪ್ಪಾರ ಸಮಾಜದ ಏಳಿಗೆಗೆ ಸರಕಾರ ಆದ್ಯತೆ ನೀಡಬೇಕು,ಇಂದು ಶಾಸಕ ರಾಜುಗೌಡ ಅವರು ನಮ್ಮೊಂದಿಗೆ ಭಾಗವಹಿಸುವ ಜೊತೆಗೆ ಯಾತ್ರಿ ನಿವಾಸ ನಿರ್ಮಾಣಕ್ಕೆ ಅಡಿಗಲ್ಲು ನೆರವೇರಿಸಿರುವುದು ಸಂತೋಷದ ಸಂಗತಿಯಾಗಿದೆ ಇದೇರೀತಿ ತಮ್ಮ ಸಹಕಾರ ಸಮಾಜಕ್ಕೆ ನಿರಂತರವಾಗಿರಲಿ ಎಂದರು.
ಇದೇ ಸಂದರ್ಭದಲ್ಲಿ ಅನೇಕ ಮುಖಂಡರು ಮಾತನಾಡಿದರು.ಇದಕ್ಕೂ ಮುನ್ನ ನಗರದ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನ ಆವರಣದಿಂದ ಶ್ರೀ ಮಹರ್ಷಿ ಭಗೀರಥರ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು.ಮೆರವಣಿಗೆಗೆ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಚಾಲನೆ ನೀಡಿದರು.
ಶ್ರೀ ಮಹರ್ಷಿ ಭಗೀರಥರ ಭಾವಚಿತ್ರಕ್ಕೆ ರಾಜಾ ಲಕ್ಷ್ಮೀನಾರಾಯಣ ನಾಯಕ ಪುಷ್ಪಾರ್ಚನೆ ಮಾಡಿದರು.ಕಾರ್ಯಕ್ರಮದ ವೇದಿಕೆ ಮೇಲೆ ಮಾಜಿ ಜಿ.ಪಂ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ),ಮುಖಂಡರಾದ ರಾಜಾ ಮುಕುಂದ ನಾಯಕ,ನಗರಸಭೆ ಸದಸ್ಯ ವೇಣುಮಾಧವ ನಾಯಕ,ಭಗೀರಥ ಸಮಾಜದ ತಾಲೂಕು ಅಧ್ಯಕ್ಷ ಭೀಮಣ್ಣ ಕಟ್ಟಿಮನಿ ಅಧ್ಯಕ್ಷತೆ ವಹಿಸಿದ್ದರು.
ನಗರಸಭೆ ಉಪಾಧ್ಯಕ್ಷ ಮಹೇಶ ಪಾಟೀಲ್,ಎಸ್.ಹೆಚ್.ಅಮ್ಮಾಪುರ,ಮೇಲಪ್ಪ ಗುಳಗಿ,ಬಿ.ಎನ್ ಪೊಲೀಸ್ ಪಾಟೀಲ್ ಬೂದಿಹಾಳ,ಡಾ:ಮುಕುಂದ ಯಾನಗುಂಟಿ,ಗೋವಿಂದರಾಜ ಶಹಾಪುರಕರ್,ಜೀವನಕುಮಾರ ಕಟ್ಟಿಮನಿ,ಪ್ರಕಾಶ ಸಜ್ಜನ್,ಗೋಪಣ್ಣ ದೊಡ್ಮನಿ,ಮಲ್ಲು ದಂಡಿನ್,ವೆಂಕನಗೌಡ ಹೆಬ್ಬಾಳ ಸೇರಿದಂತೆ ನೂರಾರು ಜನ ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…