ಬಿಸಿ ಬಿಸಿ ಸುದ್ದಿ

ಸುರಪುರ: ಭಾರತೀಯ ವೈದ್ಯಕೀಯ ಸಂಘ ಅಧ್ಯಕ್ಷರಾಗಿ ಡಾ.ಸುವರ್ಣಾ ನಾಯಕ ಆಯ್ಕೆ

ಸುರಪುರ: ಭಾರತೀಯ ವೈದ್ಯಕೀಯ ಸಂಘವು ಭಾರತದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಶಾಖೆಗಳನ್ನು ಹೊಂದಿದ್ದು ಇದು ವೈದ್ಯರ ರಾಷ್ಟ್ರೀಯ ಸ್ವಯಂ ಸೇವಾ ಸಂಸ್ಥೆಯಾಗಿದ್ದು ದೇಶದಲ್ಲಿಯೇ ವೈದ್ಯರ ದೊಡ್ಡ ಸಂಘವಾಗಿದ್ದು ಸಾರ್ವಜನಿಕ ಆರೋಗ್ಯ, ಆರೋಗ್ಯ ಶಿಕ್ಷಣ, ಮುಂದುವರಿದ ವೈದ್ಯಕೀಯ ಸೇವೆ ಮತ್ತು ಶಿಕ್ಷಣ ಹಾಗೂ ಸಮುದಾಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಸಲಹೆ ನೀಡುವುದು ಸಂಘದ ಪ್ರಮುಖ ಉದ್ದೇಶ ಎಂದು ಸಂಘದ ವಲಯ ಸಮನ್ವಯಾಧಿಕಾರಿ ಡಾ.ಪ್ರಸನ್ನ ಪಾಟೀಲ ಹೇಳಿದರು.

ನಗರದ ಅದಿತಿ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ದ ಭಾರತೀಯ ವೈದ್ಯಕೀಯ ಸಂಘದ(ಐಎಮ್‌ಎ) ತಾಲೂಕು ಶಾಖೆಯ ಉದ್ಘಾಟಿಸಿ ಅವರು ಮಾತನಾಡಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ರಾಜ್ಯದಲ್ಲಿ ೧೯೨೮ರಲ್ಲಿ ಆರಂಭಗೊಂಡ ಈ ಸಂಸ್ಥೆಯು ವೈದ್ಯಕೀಯ ಹಾಗೂ ವೈದ್ಯಕೀಯಕ್ಕೆ ಸಂಬಂಧಪಟ್ಟ ವಿಜ್ಞಾನಗಳ ಎಲ್ಲಾ ಶಾಖೆಗಳಲ್ಲಿ ಉತ್ತೇಜನ ಹಾಗೂ ಪ್ರಗತಿ ಸಾಧಿಸುವುದು ಮತ್ತು ವೈದ್ಯರುಗಳಲ್ಲಿ ಪರಸ್ಪರ ಸೌಹಾರ್ದವನ್ನು ಬೆಳೆಸುತ್ತದೆ ಎಂದು ಹೇಳಿದರು.

ತಾಲೂಕು ಶಾಖೆಯ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ನಗರದ ಪ್ರಸಿದ್ಧ ಸ್ತ್ರೀ ರೋಗ ತಜ್ಞೆ ಡಾ.ಸುವರ್ಣಾ ನಾಯಕ ಮಾತನಾಡಿ ಸಾರ್ವಜನಿಕರಿಗೆ ವಿವಿಧ ರೀತಿಯ ಶಿಬಿರಗಳಲ್ಲಿ ಸರಕಾರದಿಂದ ದೊರೆಯುವ ಉಚಿತ ಸೌಲಭ್ಯಗಳನ್ನು ಒದಗಿಸುವುದು ಹಾಗೂ ವೈದ್ಯಕೀಯ ಸೇವೆಯಲ್ಲಿ ಆಗುವಂತಹ ವಿವಿಧ ರೀತಿಯ ತೊಂದರೆಗಳ ನಿರ್ವಹಣೆ ಮಾಡುವುದು ನೂತನವಾಗಿ ಅಸ್ತಿತ್ವಕ್ಕೆ ತರಲಾಗಿರುವ ಭಾರತೀಯ ವೈದ್ಯಕೀಯ ಸಂಘದ ತಾಲೂಕು ಶಾಖೆಯ ಪ್ರಮುಖ ಉದ್ದೇಶ ಎಂದು ತಿಳಿಸಿದರು.

ಹಿರಿಯ ವೈದ್ಯರಾದ ಡಾ.ಸತ್ಯನಾರಾಯಣ ಆಲದಾರ್ತಿ, ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ ಉಪಸ್ಥಿತರಿದ್ದರು, ಸಂಘದ ಅಧ್ಯಕ್ಷರಾಗಿ ಸ್ತ್ರೀರೋಗ ತಜ್ಞೆ ಡಾ.ಸುವರ್ಣಾ ನಾಯಕ, ಪ್ರಧಾನ ಕಾರ್ಯದರ್ಶಿಯಾಗಿ ಅರವಳಿಕೆ ತಜ್ಞೆ ಡಾ.ಅರ್ಶಿ ಅಂಜುಮ್ ಹಾಗೂ ಖಜಾಂಚಿಯಾಗಿ ರೇಡಿಯೋಲಾಜಿಸ್ಟ್ ಡಾ.ಶಫೀ ಉಜ್ಜುಮಾ ಅವರನ್ನು ಆಯ್ಕೆಗೊಳಿಸಲಾಯಿತು, ಕಾರ್ಯಕ್ರಮದಲ್ಲಿ ಸುರಪುರ ಮತ್ತು ಹುಣಸಗಿ ತಾಲೂಕುಗಳ ೨೦ಜನ ಎಂಬಿಬಿಎಸ್ ಮತ್ತು ತಜ್ಞ ವೈದ್ಯರುಗಳು ಭಾಗವಹಿಸಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

1 hour ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

1 hour ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago