ಆನೇಕಲ್: ಆನೇಕಲ್ ವಕೀಲರ ಸಂಘದ ಚುನಾವಣೆಯಲ್ಲಿ ಕಾರ್ಯಕಾರಿ ಸದಸ್ಯ ಸ್ಥಾನಕ್ಕೆ ವಕೀಲ ಪುರುಷೋತ್ತಮ್ ನಾಮಪತ್ರ ಸಲ್ಲಿಸಿದ್ದಾರೆ. ಜುಲೈ 24 ರ ಭಾನುವಾರ ಚುನಾಚಣೆ ನಡೆಯಲಿದೆ.
ನಾಮಪತ್ರ ಸಲ್ಲಿಸಿ ಮಾತನಾಡಿದ ವಕೀಲ ಪುರುಷೋತ್ತಮ್, ಟೆಲಿ ಲಾ ಮೂಲಕ ಈಗಾಗಲೇ ಸಾರ್ವಜನಿಕರಿಗೆ ಉಚಿತ ಕಾನೂನು ಸೇವೆಯನ್ನು ಒದಗಿಸುತ್ತಾ ಬಂದಿದ್ದೇನೆ. ಇದರ ಮುಂದುವರೆದ ಭಾಗವಾಗಿ ನ್ಯಾಯಾಂಗ ವ್ಯವಸ್ಥೆಗೆ ನಾನು ಒಂದು ಅಳಿಲಿ ಸೇವೆ ಮಾಡುವ ಉದ್ದೇಶದಿಂದ ಚುನಾಚಣೆಗೆ ಸ್ಪರ್ಧಿಸಿದ್ದೇನೆಂದು ತಿಳಿಸಿದರು.
ಕಾರ್ಯಕಾರಿ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿರುವ ನನಗೆ ಆನೇಕಲ್ ನ ಹಿರಿಯ ಹಾಗೂ ಕಿರಿಯ ವಕೀಲರು ಹೀಗಾಗಲೆ ಬೆಂಬಲವನ್ನು ನೀಡಿದ್ದು, ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಆನೇಕಲ್ ವಕೀಲರ ಸಂಘದ ಚುನಾವಣೆ ಪಾರದರ್ಶಕವಾಗಿ ನಡೆಯುತ್ತಿದ್ದು, ಯಾರೇ ಗೆದ್ದರು ಅಣ್ಣತಮ್ಮರಂತೆ ಇರುತ್ತೇವೆಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ನಾಮಪತ್ರ ಸಲ್ಲಿಸುವಾಗ ಹಿರಿಯ ವಕೀಲರಾದ ಆರ್ ವಿ ವಿ ಮೂರ್ತಿ, ಎ.ಜಿ ರಾಜು, ಶ್ರೀಕಂಠಾಚಾರಿ, ಚೂಡಸಂದ್ರ ವೇಣು, ಲಕ್ಮೀಸಂಪತ್, ಮುತ್ತನಲ್ಲೂರು ಮಹೇಶ್, ಸಂಘರ್ಷ, ಶ್ರೀನಿವಾಸ್, ನಾಗರಾಜ್ ತ್ಯಾವಕನಹಳ್ಳಿ ರೂಪ, ಶಶಿಕುಮಾರ್ ಅನುರಾಧಾ ಆರ್, ಸುಜೀಂದ್ರ, ಕಿರಣ್, ರಾಘವೇಂದ್ರ, ಇನ್ನೂ ಅನೇಕ ವಕೀಲರು ಉಪಸ್ಥಿತರಿದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…