ಸಮಾಜಸೇವಾ ರತ್ನ ಪ್ರಶಸ್ತಿಗೆ ದೊರೆ ಆಯ್ಕೆ

0
84

ವಾಡಿ: ಬೆಂಗಳೂರಿನ ಪ್ರತಿಷ್ಠಿತ ಕಲಾಬಂಧು ಫೌಂಡೇಷನ್ ವತಿಯಿಂದ ಪ್ರತಿವರ್ಷ ಕೊಡಮಾಡುವ ರಾಜ್ಯಮಟ್ಟದ “ಸಮಾಜಸೇವಾ ರತ್ನ-2022” ಪ್ರಶಸ್ತಿಗೆ ಈ ಬಾರಿ ಮಹರ್ಷಿ ವಾಲ್ಮೀಕಿ ಸಮಾಜದ ಚಿತ್ತಾಪುರ ತಾಲೂಕು ಅಧ್ಯಕ್ಷ ಭೀಮರಾವ ದೊರೆ ಅವರನ್ನು ಆಯ್ಕೆ ಮಾಡಲಾಗಿದೆ.

ರಾಜಕೀಯ ಹಾಗೂ ಸಾಮಾಜಿಕ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಜು.17 ರಂದು ಸಂಜೆ 4:00 ಗಂಟೆಗೆ ಬೆಂಗಳೂರಿನಲ್ಲಿ ಕಲಾಬಂಧು ಫೌಂಡೇಷನ್ ಮತ್ತು ಕಲಾಬಂಧು ಕನ್ನಡ ದಿನಪತ್ರಿಕೆ ಜಂಟಿಯಾಗಿ ಆಯೋಜಿಸಿರುವ ಯುವ ಕಲಾ ಪ್ರತಿಭೋತ್ಸವ ಸಮಾರಂಭದಲ್ಲಿ ನಾಡಿನ ಹೆಸರಾಂತ ಸಾಹಿತಿಗಳ ಸಮ್ಮುಖದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ ಎಂದು ಕಲಾಬಂಧು ಫೌಂಡೇಷನ್ ಅಧ್ಯಕ್ಷ ನರಸಿಂಹರಾಜು ಎಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here