ಬಿಸಿ ಬಿಸಿ ಸುದ್ದಿ

ರಾಷ್ಟ್ರೀಯ ಲಾಂಛನ ವಿರೂಪ- ಶಿವಾನಂದ ಆರ್ ಕಿಳ್ಳಿ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ದೇಶದ ರಾಷ್ಟ್ರ ಲಾಂಛನವನ್ನು ವಿರೂಪಗೊಳಿಸಿದೆ ಎಂದು ಕಲಬುರ್ಗಿ ಯುವ ಕಾಂಗ್ರೆಸ್‌ ಸಂಯೋಜಕ ಶಿವಾನಂದ ಆರ್ ಕಿಳ್ಳಿ ಆರೋಪಿಸಿದ್ದಾರೆ.

ಸುಂದರ ಮತ್ತು ವಿಶ್ವಾಸದ ಮುಖದಿಂದ ಕೂಡಿರುವ ಅಶೋಕನ ಸಿಂಹದ ಬದಲಿಗೆ ಭಯಾನಕ ಹಾಗೂ ಆಕ್ರಮಣಕಾರಿ ಭಂಗಿ ಹೊಂದಿರುವ ಸಿಂಹಗಳ ರೀತಿಯಲ್ಲಿ ಲಾಂಛನವನ್ನು ಬದಲಾಯಿಸಲಾಗಿದೆ. ಈ ಹಿಂದೆ ಈಶ್ವರಪ್ಪನವರು ರಾಷ್ಟ್ರ ಧ್ವಜ ಬದಲಾವಣೆ ಹೇಳಿಕೆ ಕೊಟ್ಟು ಧ್ವಜ ಕ್ಕೆ ಅವಮಾನ ಮಾಡಿದರು. ಈಗ ರಾಷ್ಟ್ರ ಲಾಂಛನಕ್ಕೆ ಅವಮಾನ ಮಾಡಿ ಸಂವಿಧಾನ ಉಲ್ಲಂಘನೆ ಮಾಡಲಾಗುತ್ತಿದೆ ಎಂದು ಒಕ್ಕೂಟ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಂಹದ ಮುಖವನ್ನೊಮ್ಮೆ ಸರಿಯಾಗಿ ಗಮನಿಸಿ. ಇದು ಪ್ರಸಿದ್ಧ ಸಾರಾನಾಥದಲ್ಲಿದ್ದ ಸಿಂಹದ ಲಾಂಛನಗಳೇ ಅಥವಾ ಗಿರ್‌ ಸಿಂಹದ ವಿಕೃತ ಆವೃತ್ತಿಯೇ? ಇದನ್ನು ಮತ್ತೊಮ್ಮೆ ಪರಿಶೀಲಿಸಿ, ಅಗತ್ಯವಿದ್ದಲ್ಲಿ ಸರಿಪಡಿಸಿ ಎಂದು ಮನವಿ ಮಾಡಿ, ನಮ್ಮ ರಾಷ್ಟ್ರೀಯ ಚಿಹ್ನೆ, ಭವ್ಯ ಅಶೋಕನ ಸಿಂಹಗಳಿಗೆ ಅವಮಾನವಾಗಿದೆ. ಮೂಲ ಸಾರಾನಾಥದ ಸಿಂಹದ ಚಿತ್ರ ಎಡಭಾಗದಲ್ಲಿದೆ, ಆಕರ್ಷಕವಾಗಿದೆ, ಪ್ರಾಮಾಣಿಕವಾಗಿ ಆತ್ಮವಿಶ್ವಾಸವಿದೆ. ಬಲಭಾಗದಲ್ಲಿದ್ದು ಮೋದಿಯವರ ಆವೃತ್ತಿಯಾಗಿದೆ, ಹೊಸ ಸಂಸತ್ತಿನ ಕಟ್ಟಡದ ಮೇಲೆ ಇರಿಸಲಾಗಿದೆ . ಗರ್ಜನೆ ಮಾಡುತ್ತಿರುವ, ಅನಗತ್ಯವಾಗಿ ಆಕ್ರಮಣಕಾರಿಯಾಗಿ ಅಸಮಂಜಸವಾಗಿರುವ ನಾಚಿಕೆಗೇಡಿನ ಆವೃತ್ತಿ ಇದಾಗಿದೆ. ಇದನ್ನು ತಕ್ಷಣವೇ ಬದಲಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

emedialine

Recent Posts

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

3 mins ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

7 mins ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

11 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

14 mins ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

21 mins ago

ಸಮಸ್ತ ಲಿಂಗಾಯತರ ಪ್ರಗತಿಗೆ ಲಿಂಗಾಯತ ಸ್ವತಂತ್ರ ಧರ್ಮ ಅಗತ್ಯ: ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…

1 hour ago