ಹುಣಸಗಿ-ನಾರಾಯಣಪುರ ಹೆಚ್ಚು ಬಸ್‌ಗಳ ಓಡಿಸಿ: ರಾಜಾ ವೇಣುಗೋಪಾಲ ನಾಯಕ

0
10

ಸುರಪುರ: ಹುಣಸಗಿ ಪಟ್ಟಣ ದಿಂದ ನಾರಾಯಣಪುರಕ್ಕೆ ಹೆಚ್ಚು ಬಸ್‌ಗಳ ಓಡಿಸುವಂತೆ ಕಾಂಗ್ರೆಸ್ ಯುವ ಮುಖಂಡ ರಾಜಾ ವೇಣುಗೋಪಾಲ ನಾಯಕ ಆಗ್ರಹಿಸಿದ್ದಾರೆ.

ಈ ಕುರಿತು ನಗರದ ಸಾರಿಗೆ ಘಟಕ ವ್ಯವಸ್ಥಾಪಕರಿಗೆ ಪತ್ರ ಬರೆದಿರುವ ಅವರು,ಹುಣಸಗಿಯಿಂದ ನಾರಾಯಣಪುರಕ್ಕೆ ಹೆಚ್ಚು ಬಸ್‌ಗಳಿಲ್ಲದ ಕಾರಣ ವಿದ್ಯಾರ್ಥಿಗಳು ತುಂಬಾ ತೊಂದರೆ ಪಡುವಂತಾಗಿದೆ.ಮುಂಜಾನೆ ೮ ರಿಂದ ೯:೩೦ರ ವರೆಗೆ ಬಸ್‌ಗಳಿಲ್ಲದ ಕಾರಣ ಶಾಲಾ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯುಂಟಾಗುತ್ತಿದೆ,ಇದೆ ಕಾರಣಕ್ಕೆ ಮಾರನಾಳ ಗ್ರಾಮದ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆಯನ್ನೂ ನಡೆಸಿದ್ದಾರೆ.

Contact Your\'s Advertisement; 9902492681

ಆದ್ದರಿಂದ ಕೂಡಲೇ ಹುಣಸಗಿಯಿಂದ ನಾರಾಯಣಪುರಕ್ಕೆ ಹೆಚ್ಚು ಬಸ್‌ಗಳ ಓಡಿಸಲು ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ವಿದ್ಯಾರ್ಥಿಗಳೊಂದಿಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here