ಗಾಂಜಾ ಮಾರಾಟ ಜಾಲ ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸಿ: ಆಯುಕ್ತ ಶೇಖ ತನ್ವೀರ ಆಸೀಫ್

ಕಲಬುರಗಿ: ಗಾಂಜಾ ಬೆಳೆಯುವ, ಸಾಗಾಟ ಮತ್ತು ಮಾರಾಟ ಜಾಲವನ್ನು ಪತ್ತೆಹಚ್ಚಿ ಎನ್.ಡಿ.ಪಿ.ಎಸ್. ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಕಠಿಣ ಶಿಕ್ಷೆಗೊಳಪಡಿಸಲು ಕ್ರಮ ಕೈಗೊಳ್ಳಬೇಕೆಂದು ಬೆಂಗಳೂರಿನ (ಕೇಂದ್ರಸ್ಥಾನ ಮತ್ತು ತಪಾಸಣೆ) ಅಪರ ಅಬಕಾರಿ ಆಯುಕ್ತರಾದ ಶೇಖ್ ತನ್ವಿರ್ ಆಸೀಫ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದನ್ನೂ ಓದಿ: ಶಹಬಾದ್ ಕಾಂಗ್ರೆಸ್ ಮುಂಡನ ಕೊಲೆ ಪ್ರಕರಣ: ಆರೋಪಿ ಮೇಲೆ ಪೊಲೀಸರಿಂದ ಪೈರಿಂಗ್

ಕಲಬುರಗಿ ಅಬಕಾರಿ ಭವನ ಸಭಾಂಗಣದಲ್ಲಿ ಶುಕ್ರವಾರ ವಿಭಾಗದ ಅಬಕಾರಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು ಕಲಬುರಗಿ, ಬೀದರ, ರಾಯಚೂರು, ಯಾದಗಿರಿ ಜಿಲ್ಲೆಗಳು ರಾಜ್ಯದ ಗಡಿಗೆ ಹೊಂದಿಕೊಂಡಿದ್ದು, ನೆರೆ ರಾಜ್ಯಗಳಿಂದ ಅಕ್ರಮ ಸಾಗಣಿಯಾಗುತ್ತಿರುವ ಮದ್ಯ, ಸೇಂದಿ ಮತ್ತು ಗಾಂಜಾ ತಡೆಗಟ್ಟಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: ಬಾಹ್ಯಾಕಾಶದವರೆಗೂ ಗ್ರಾಫ್ ಸಿದ್ಧಾಂತ ಅನ್ವಯ: ಡಾ. ಮೇಘಾ ಖಂಡೇಲ್ವಾಲ

ಅಕ್ರಮ ಮದ್ಯ ಮತ್ತು ಇತರ ಅಬಕಾರಿ ಪದಾರ್ಥಗಳು ಈ ವಿಭಾಗದ ಜಿಲ್ಲೆಗಳಲ್ಲಿ ಬಳಕೆಯಾದಲ್ಲಿ ಆರ್ಥಿಕ ಗುರಿ ಸಾಧನೆಗೆ ತೊಂದರೆಯಾಗಲಿದೆ. ಅದೇ ರೀತಿ ಯುವ ಪೀಳಿಗೆ ಗಾಂಜಾ ವ್ಯಾಸನಕ್ಕೋಳಗಾಗಿ ಚಿಕ್ಕ ವಯಸ್ಸಿನಲ್ಲಿ ವಿವಿಧ ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಮೊದಲನೇ ತ್ರೈಮಾಸಿಕ ಅವಧಿಯಲ್ಲಿ ದಾಖಲಾದ ಘೋರ ಪ್ರಕರಣಗಳ ಬಗ್ಗೆ ಪರಿಶೀಲಿಸಿ, ಮುಂದಿನ ದಿನಗಳಲ್ಲಿ ಜಾರಿ ಮತ್ತು ತನಿಖಾ ಕಾರ್ಯ ಪರಿಣಾಮಕಾರಿಯಾಗಿ ನಿರ್ವಹಿಸಿ, ಅಕ್ರಮಗಳನ್ನು ಪತ್ತೆ ಹಚ್ಚಿ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕೆಂದು ಸೂಚಿಸಿದರು.
ಸಭೆಯಲ್ಲಿ ಅಬಕಾರಿ ಜಂಟಿ ಆಯುಕ್ತರು, ನಾಲ್ಕು ಜಿಲ್ಲೆಗಳ ಅಬಕಾರಿ ಉಪ ಆಯುಕ್ತರು ಹಾಗೂ ಅಧೀನ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಚಿಂಚೋಳಿ- ದ್ವಿ ಚಕ್ರ ವಾಹನ ಮುಖಾಮುಖಿ ಡಿಕ್ಕಿ: ಮೂವರ ಸಾವು

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420