ಆನೇಕಲ್: ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರ ಮತ್ತು ಆನೇಕಲ್ ಅರಣ್ಯ ಇಲಾಖೆಯ ವತಿಯಿಂದ ಇಂದು ಇಲಾಖೆಯ ಕಚೇರಿಯಲ್ಲಿ ಪರಿಸರ ಕಾನೂನುಗಳ ಬಗ್ಗೆ ಅರಿವಿನ ಕಾರ್ಯಾಗಾರ ನಡೆಸಲಾಯಿತು.
ಈ ವೇಳೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ನ್ಯಾ. ಸಂದೀಪ್ ಮಾತನಾಡಿ, ರಾಜ್ಯದಲ್ಲಿ ಫಾರೆಸ್ಟ್ ಕನ್ಜರ್ ವೇಷನ್ ಕಾಯ್ದೆ ಇದ್ರೂ ಕಾಡಿನಲ್ಲಿ ಕಲ್ಲಿನ ಕ್ವಾರಿಗಳಿಗೆ ಪರವಾನಿಗೆ ನೀಡುವುದು ನಡೆಯುತ್ತಿದೆ. ಇಂತಹ ದೃಷ್ಕೃತ್ಯಗಳು ಕೂಡಲೇ ನಿಲ್ಲಬೇಕೆಂದು ತಿಳಿಸಿದರು.
ಅನಧಿಕೃತ ಗಣಿಗಾರಿಕೆ ಕುರಿತು ಮಾನ್ಯ ನ್ಯಾಯಾಧೀಶರಾದ ಜಸ್ಟಿಸ್ ಎನ್ ಕುಮಾರ್, ಪ್ರಕರಣವೊಂದರ ಹೇಳಿಕೆಯಲ್ಲಿ ಗಣಿಗಾರಿಕೆಯ ಅಪಾಯಗಳ ಕುರಿತು ವಿವರಿಸಿದ್ದಾರೆ. ಹಾಗೂ ಪರಿಸರ ಸಂರಕ್ಷಣೆಯ ಕುರಿತು ಕಾನೂನುಗಳನ್ನು ರೂಪಿಸಿದ್ದಾರೆ. ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾದ ಕರ್ತವ್ಯ ನಮ್ಮೆಲ್ಲರದೆಂದು ಅವರು ಹೇಳಿದ್ದಾರೆ.
ಅರಣ್ಯ ವಲಯ ಉಪ ಅಧಿಕಾರಿ ಬಾಲರಾಜ್ ಮಾತನಾಡಿ, ನ್ಯಾಯಾಲಯ ಪರಿಸರವನ್ನು ಕಾಪಾಡಲು ಆನೇಕ ಆದೇಶಗಳು ಬರುತ್ತಿವೆ. ಅವೆಲ್ಲ ಆದೇಶಗಳನ್ನು ಪಾಲಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆಂದು ತಿಳಿಸಿದರು.
ವಕೀಲರಾದ ಎಂ.ಎ.ಶಿವಾರಾಜ್ ಮಾತನಾಡಿ, ಪರಿಸರದ ರಕ್ಷಣೆ ನಮ್ಮ ಜವಾಬ್ದಾರಿ. ಇದನ್ನು ಸಂವಿಧಾನದ ಮೂಲಭೂತ ಕರ್ತವ್ಯದಲ್ಲಿ ಸೇರಿಸಲಾಗಿದೆ. ಅದನ್ನು ಸ್ವಯಂ ಪ್ರೇರಿತವಾಗಿ ಪ್ರತಿಯೊಬ್ಬರು ಪಾಲಿಸಬೇಕೆಂದು ತಿಳಿಸಿದರು.
ವಕೀಲ ದುಶ್ಯಂತ ಆರಾಧ್ಯ ಮಾತನಾಡಿ, ಕಾನೂನುಗಳು ಎಷ್ಟೇ ಇದ್ದರೂ ಮನುಷ್ಯರು ಚಿಂತನೆಗಳು ಬದಲಾಗದೆ ಏನನ್ನು ಮಾಡಲು ಸಾಧ್ಯವಿಲ್ಲವೆಂದರು.
ಈ ವೇಳೆ ಸುಶೀಲ, ಹಿನ್ನಕ್ಕಿ ಮುನಿರಾಜು, ನೀಲಮ್ಮ, ಅರಣ್ಯವಲಯದ ಅಧಿಕಾರಿಗಳು ಭಾಗವಹಿಸಿದರು,
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…