ಬಿಸಿ ಬಿಸಿ ಸುದ್ದಿ

ವಿದ್ಯಾರ್ಥಿಗಳಿಗೆ ಸಭ್ಯತೆ, ಸಂಸ್ಕೃತಿ ಕಲಿಸುವಿಕೆ ಅವಶ್ಯ: ಶಿವುಕುಮಾರ್ ಸ್ವಾಮೀಜಿ

ಸೇಡಂ: ಇತ್ತೀಚಿನ ಬಹುತೇಕ ವಿದ್ಯಾರ್ಥಿಗಳಿಗೆ ಶಿಕ್ಷಣ ಜೊತೆಗೆ ಸಭ್ಯತೆ ಹಾಗೂ ನಮ್ಮ ಸಂಸ್ಕೃತಿಯನ್ನು ಕಲಿಸುವುದು ಅವಶ್ಯವಾಗಿದೆ ಎಂದು ಬೀದರ್‌ನ ಚಿದಂಬರಂ ಆಶ್ರಮದ ಶ್ರೀ ಸದ್ಗುರು ಶಿವುಕುಮಾರ್ ಸ್ವಾಮೀಜಿ ಹೇಳಿದರು.

ಪಟ್ಟಣದ ನೃಪತುಂಗ ಪದವಿ ಮಹಾವಿದ್ಯಾಲಯ ಆವರಣದಲ್ಲಿ ಶ್ರೀ ಕೊತ್ತಲ ಬಸವೇಶ್ವರ್ ಶಿಕ್ಷಣ ಸಮಿತಿ ಮತ್ತು ವಿಕಾಸ ಅಕ್ಯಾಡೆಮಿ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಕಲ್ಯಾಣ ಕರ್ನಾಟಕ ಸಮಗ್ರ ಶೈಕ್ಷಣಿಕ ಚಿಂತನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೀವನದಲ್ಲಿ ಸಂಸ್ಕೃತಿ ಇಲ್ಲದ ಸಭ್ಯತೆ ಜೀವವಿಲ್ಲದ ಶರೀರ ಅಥವಾ ಮೃತದೇಹವಿದ್ದಂತೆ, ಇದನ್ನು ಅರಿಯದ ಇಂದಿನ ಮಕ್ಕಳು ಆಧುನಿಕ ಜೀವನಶೈಲಿಯನ್ನು ಆಳವಡಿಸಿಕೊಳ್ಳುವುದರ ಮೂಲಕ ನಮ್ಮ ದೇಶದ ಪರಂಪರೆ, ಸಂಸ್ಕೃತಿಯನ್ನು ಮರೆತು ಹೋಗುತ್ತಿದ್ದಾರೆ. ಆದ್ದರಿಂದ ಶಾಲಾ ಕಾಲೇಜುಗಳಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ವಿದ್ಯಾರ್ಜನೆಯ ಜತೆಗೆ ಸಭ್ಯತೆ, ಸಂಸ್ಕೃತಿಯನ್ನು ದಾರೆ ಎರೆಯಬೇಕು ಎಂದರು.

ಶ್ರೀ ಕೊತ್ತಲ ಬಸವೇಶ್ವರ್ ಭಾರತೀಯ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಪೂಜ್ಯ ಸದಾಶಿವ್ ಸ್ವಾಮಿಗಳು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿ ಬೆಳೆಸುವುದು ಅವಶ್ಯವಾಗಿದ್ದು, ಶಿಕ್ಷಣ ಸಂಸ್ಥೆಗಳು, ಸಂಘಸಂಸ್ಥೆಗಳು, ದಾರ್ಮಿಕ ಮುಖಂಡರು ಇದಕ್ಕೆ ಪೂರಕವಾಗಿ ಶ್ರಮಿಸಬೇಕಾಗಿದೆ ಎಂದರು.

ವೇದಿಕೆ ಮೇಲೆ ಶಿವಲಿಂಗೇಶ್ವರ್ ಸ್ವಾಮೀಜಿ, ಶಂಕರಾನಂದ್ ಸ್ವಾಮೀಜಿ, ವಿಜಯಪುರದ ಚಾಣಕ್ಯ ಕರಿಯರ್ ಅಕ್ಯಾಡೆಮಿಯ ಮುಖ್ಯಸ್ಥ ಎನ್.ಎಂ. ಬಿರಾದಾರ್, ವಿಕಾಸ ಅಕ್ಯಾಡೆಮಿ ಮುಖ್ಯಸ್ಥ ಡಾ. ಬಸವರಾಜ್ ಪಾಟೀಲ್ ಸೇಡಮ್, ಸಂಪನ್ಮೂಲ ವ್ಯಕ್ತಿಗಳಾದ ಖ್ಯಾತ ಉಪನ್ಯಾಸಕಿ ಲೀಲಾ ಕಾರಟಗಿ, ಸಿ.ಆರ್. ಆನಂದ್, ಮುಕುಂದ್ ಮೈಗೂರು, ಸುರೇಶ್ ಕುಲಕರ್ಣಿ, ಯು. ಭೀಮರಾವ್, ನರೇಂದ್ರ ಬಡಶೇಷಿ, ವಿವೇಕಾನಂದ್, ಸಯಿದಾ, ಕನಕವಲ್ಲಿ, ಡಾ. ಹೇಮಲತಾ ಅವರು ಉಪಸ್ಥಿತರಿದ್ದರು. ಅನುರಾಧಾ ಪಾಟೀಲ್ ಅವರು ಸ್ವಾಗತಿಸಿದರು. ಶಿಕ್ಷಣ ಸಮಿತಿಯ ಆಡಳಿತಾಧಿಕಾರಿ ಶಿವಯ್ಯ ಮಠಪತಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಜಗದೀಶ್ ಕಡಬಗಾಂವ್ ಅವರು ಕಾರ್ಯಕ್ರಮ ನಿರೂಪಿಸಿದರು. ಬಸವರಾಜ್ ಮಾಲಿಪಾಟೀಲ್ ಅವರು ವಂದಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

14 mins ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

3 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

3 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

3 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

3 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420