ಸ್ಲಂ ಜನಾಂದೋಲನ ಮುಖಂಡರಿಂದ ಜಿಲ್ಲಾಡಳಿತಕ್ಕೆ ಮನವಿ

ಕಲಬುರಗಿ: ನಗರದ ಮಹಾನಗರ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ೧೪೪೭ ಮನೆಗಳ ಪೈಕಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಒಟ್ಟು ೧೧೯೬ ಫಲಾನುಭವಿಗಳಿಗೆ ಎಸ್‌ಎಫ್‌ಸಿ ಮುಕ್ತ ನಿಧಿ ಅನುದಾನದಲ್ಲಿ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆ ಅಡಿಯಲ್ಲಿ ವಂತಿಕೆ ಹಣ ಮೀಸಲಿಡಬೇಕು ಎಂದು ಒತ್ತಾಯಿಸಿ ಸ್ಲಂ ಜನಾಂದೋಲನ ಜಿಲ್ಲಾ ಘಟಕದ ಮುಖಂಡರು ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆ ದಲಿತರಿಗೆ ಸರಕಾರ ಜಾರಿಗೆ ತಂದಿದೆ. ಈ ಭಾಗದಲ್ಲಿ ಅತಿ ದಲಿತ, ಅಲ್ಪಸಂಖ್ಯಾತ, ಹಿಂದುಳಿದ ಜನಾಂಗದವರು ಹೆಚ್ಚು ವಾಸವಾಗಿದ್ದಾರೆ. ಇವರಿಗೆ ಕೋವಿಡ್‌ನಿಂದ ತತ್ತರಿಸಿ ದುಡಿಯುವ ಕೈಗಳಿಗೆ ಕೆಲಸವಿಲ್ಲದೆ ಎರಡು ವರ್ಷ ಮನೆಯಲ್ಲಿ ಕುಳಿತ್ತಿದ್ದಾರೆ. ಒಂದು ದಿನ ಕೆಲಸ ಮಾಡಿದರೆ ಒಪ್ಪತ್ತಿನ ಉಪಜೀವನ ಸಾಗುತ್ತದೆ. ಇವರ ಮಕ್ಕಳ ವಿದ್ಯಾಭ್ಯಾಸ ಆರೋಗ್ಯ ಕಷ್ಟಕರವಾಗಿದೆ.

ಇಂತಹ ಸಂದರ್ಭದಲ್ಲಿ ಪ್ರಧಾನಮಂತ್ರಿ ಆವಾಸ್ ಮಂಜೂರಾಗಿವುದರಿಂದ ಆರ್ಥಿಕವಾಗಿ ಹಿಂದುಳಿದ ಪಜಾ ಮನೆಗಳ ವಂತಿಕೆ ಹಣ ಕಟ್ಟುವುದು ಜೊತೆಗೆ ಮನೆ ಸಾಲ ಕಟ್ಟಿಕೊಳ್ಳುವುದು ಕಷ್ಟಕರವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮಧ್ಯವರ್ತಿಗಳು ಜನಪ್ರತಿನಿಧಿಗಳು ಸೇರಿ ಸ್ಲಂ ನಲ್ಲಿ ವಾಸಿಸುವ ಪಜಾ, ಪಪಂದ ಜನರ ಹತ್ತಿರ ಸರಕಾರ ನಿಗದಿಪಡಿಸಿದ ವಂತಿಕೆ ಹಣಕ್ಕಿಂತ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಮನವಿಯಲ್ಲಿ ದೂರಿದ್ದಾರೆ.

ಸರಕಾರದ ಆದೇಶದ ಪ್ರಕಾರ ಎಸ್‌ಎಫ್‌ಸಿ ಮುಕ್ತನಿಧಿ ಅನುದಾನದಲ್ಲಿ ಎಸ್‌ಸಿಪಿ, ಟಿಎಸ್ಸಿ ಯೋಜನೆಯಲ್ಲಿ ಕೂಡಲೇ ಕ್ರಿಯಾ ಯೋಜನೆ ರೂಪಿಸಿ ಸ್ಲಂ ನಿವಾಸಿಗಳಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮೊದಲು ಆದ್ಯತೆ ನೀಡಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಸ್ಲಂ ಜನಾಂದೋಲನ ಜಿಲ್ಲಾ ಘಟಕದ ಅಧ್ಯಕ್ಷೆ ಸುನೀತಾ ಕೊಳ್ಳೂರ, ಸಂಚಾಲಕಿ ರೇಣುಕಾ ಸರಡಗಿ, ಸ್ಲಂ ಮುಖಂಡರಾದ ಗೌರಮ್ಯಾ ಮಾಕಾ, ಶ್ರೀದೇವಿ ಸೂರ್ಯವಂತಿ ಇತರರಿದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

2 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

2 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

2 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

2 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

2 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420