ಎಡಿಜಿಪಿ ಅಲೋಕ ಕುಮಾರರಿಗೆ ಬೀದಿಬದಿ ವ್ಯಾಪಾರಿಗಳಿಂದ ಮನವಿ

ಕಲಬುರಗಿ: ಬೀದಿಬದಿ ವ್ಯಾಪಾರಿಗಳಿಗಾಗಿ ಮಹಾನಗರ ಪಾಲಿಕೆ ಗುರುತಿಸಿರುವ ಸುಪರ ಮಾರುಕಟ್ಟೆಹಳೆಜೈಲು ಚೌಪಾಟಿಯಲ್ಲಿ ತಮ್ಮ ವ್ಯಾಪಾರ ನಡೆಸುವಂತೆ ಹಾಗೂ ಇಲ್ಲಿ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡುವಂತೆ ಅಖಿಲ ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಜಗನ್ನಾಥ ಎಸ್.ಸೂರ್ಯವಂಶಿ ಅವರು ಎಡಿಜಿಪಿ ಅಲೋಕ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಮೊದಲಬಾರಿಗೆ ಕಲಬುರಗಿ ನಗರಕ್ಕೆ ಆಗಮಿಸಿದ ಅಲೋಕ ಕುಮಾರ್ ಅವರು, ಇಲ್ಲಿನ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಸರ್ಕಾರದ ಆದೇಶದಂತೆ ಬೀದಿಬದಿ ವ್ಯಾಪಾರಿಗಳ ಜೀವನೋಪಾಯ ಸಂರಕ್ಷಣೆ ಮತ್ತು ವ್ಯಾಪಾರ ನಿಯಂತ್ರಣ ಅಧಿನಿಯಮದಡಿ ಇಲ್ಲಿನ ಬೀದಿಬದಿ ವ್ಯಾಪಾರಿಗಳಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಮಹಾನಗರ ಪಾಲಿಕೆಗೆ ಸೂಚಿಸುವಂತೆ ಸಂಘದ ಅಧ್ಯಕ್ಷ ಸೂರ್ಯವಂಶಿ ಅವರು ಸಲ್ಲಿಸಿರುವ ಮನವಿಯಲ್ಲಿ ವಿನಂತಿಸಿದ್ದಾರೆ.

ಮಹಾನಗರದ ೨೫೦ ಜನಬೀದಿಬದಿ ವ್ಯಾಪಾರಿಗಳಿಗೆ ಚೌಪಾಟಿಯಲ್ಲಿ ೪ ಮತ್ತು ೬ ಅಡಿ ಅಳತೆಯ ಸ್ಥಳವನ್ನು ಹಂಚಿಕೆ ಮಾಡಲಾಗಿದೆ. ಆದರೆ ಇಲ್ಲಿ ಮೂಲ ಸೌಕರ್ಯ ಕಲ್ಪಿಸಿಲ್ಲ. ಈ ಹಿನ್ನಲೆಯಲ್ಲಿ ಇಲ್ಲಿನ ಬೀದಿಬದಿ ವ್ಯಾಪಾರಿಗಳು, ಸುಪರ್ ಮಾರುಕಟ್ಟೆಯ ಜನತಾ ಬಜಾರದಿಂದ ಸಿಟಿಬಸ್ ನಿಲ್ದಾಣ, ಹಳೆ ಮಾರ್ಕೀಟದಿಂದ ಚಪಲ ಬಜಾರ್ ಕ್ರಾಸ್, ಚೌಕ್ ಪೊಲೀಸ ಠಾಣೆಯಿಂದ ಕ್ಲಾಥಬಜಾರ್ ಮತ್ತು ಫೋಟ್ ರಸ್ತೆ, ಭಾಂಡೆ ಬಜಾರ ಈ ಪ್ರದೇಶಗಳಲ್ಲಿ ಬೀದಿಬದಿಯ ವ್ಯಾಪಾರಗಳನ್ನು ನಡೆಸುತ್ತಿದ್ದಾರೆ. ಇದರಿಂದ ರಸ್ತೆ ಸಂಚಾರ ಸೇರಿದಂತೆ ಪಾದಾಚಾರಿ ಮಾರ್ಗ ಗುರುತಿಸಲು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಇವರೆಲ್ಲರನ್ನು ಚೌಪಾಟಿಯಲ್ಲಿ ವ್ಯಾಪಾರ ನಡೆಸಲು ಅಲ್ಲಿ ಅಗತ್ಯ ಮೂಲ ಸೌಕರ್ಯ ಕಲ್ಪಿಸುವುದು ಅಗತ್ಯವಾಗಿದೆ ಎಂದು ತಮ್ಮ ಮನವಿಯಲ್ಲಿ ಅವರು ತಿಳಿಸಿದ್ದಾರೆ.

ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಗೂ ಮುನ್ನ ಎಡಿಜಿಪಿ ಅಲೋಕ ಕುಮಾರ್ ಅವರನ್ನು ಮಹಾನಗರದ ವಿಮಾನನಿಲ್ದಾಣದಲ್ಲಿ ಬೀದಿಬದಿ ವ್ಯಾಪಾರಿಗಳ ಸಂಘದ ವತಿಯಿಂದ ಅವರನ್ನು ಸನ್ಮಾನಿಸಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಗುರುರಾಜ ತಿಳಗೋಳ, ಡಾ.ಎಂ.ವೇದರ್ಮೂತಿ, ಬಾಬು ಪರಿಟ್, ದತ್ತು ಎಚ್. ಭಾಸಗಿ, ವೆಂಕಟೇಶ ಕಾಂಬಳೆ, ಸವಿತಾ ಜಿಂಗಾಡೆ, ಸುಭಾಷ ಡರಬಿ, ಮಾಣಿಕ್ ಪವಾರ, ನವೀನ್ ತೇಲ್ಕೂರ, ವಿಷ್ಣುಕಾಂತ ಹಂಚಾಟೆ ಇದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

9 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

9 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

9 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

9 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

10 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420