ಬಿಚ್ಚಿದ ಜೋಳಿಗೆ ಪುಸ್ತಕ ಲೋಕಾರ್ಪಣೆ: ಜೋಳಿಗೆ ಬಿಚಿದ ಜನಾನುರಾಗಿ ವೈದ್ಯ ನಾಗಲೋಟಿಮಠ

ಕಲಬುರಗಿ: ಅತ್ಯಂತ ಬಡತನದ ಕುಟುಂಬದಲ್ಲಿ ಜನಿಸಿ, ಕಷ್ಟ ಕಾರ್ಪಣ್ಯಗಳಿಯೇ ಬೆಳೆದು ಜನಪ್ರಿಯ ವೈದ್ಯರಾಗಿ, ಉತ್ತಮ ಆಡಳಿತಗಾರಾಗಿ, ಹಲವು ಮೆಡಿಕಲ್ ಕಾಲೇಜುಗಳ ಉನ್ನತಿಗೆ ಶ್ರಮಿಸಿ, ನೂರಾರು ವೈದ್ಯರನ್ನು ರೂಪಿಸಿದ ಸಜನಾ ಎಂದೇ ಜನಪ್ರಿಯರಾದ ಡಾ. ಎಸ್.ಜಿ. ನಾಗಲೋಟಿಮಠ ಅವರ ಆತ್ಮಕಥೆ ಅಪರೂಪದ್ದು ಎಂದು ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ ಹೇಳಿದರು.

ಇಲ್ಲಿನ ಜ್ಞಾನ ಸಿಂಚನ ಪಿಯು ಕಾಲೇಜಿನಲ್ಲಿ ಡಾ. ಸ.ಜ. ನಾಗಲೋಟಿಮಠ ಇಂಟರ್‌ನ್ಯಾಷನಲ್ ಫೌಂಡೇಷನ್ ಹಾಗೂ ಷಡಕ್ಷರಿ ಸ್ವಾಮಿ ದಿಗ್ಗಾಂವಕರ್ ಟ್ರಸ್ಟ್ ಆಶ್ರಯದಲ್ಲಿ ಬುಧವಾರ ನಡೆದ ಸಜನಾ ೮೧ ಸ್ಮರಣೋತ್ಸವ ಅಂಗವಾಗಿ ಬಿಚ್ಚಿದ ಜೋಳಿಗೆ ಪುಸ್ತಕ ಲೋಕಾರ್ಪಣೆ ಹಾಗೂ ಅಮೃತ ಭಾರತಿಗೆ ಕನ್ನಡಾದರತಿ ಕುರಿತು ವಿಶೇಷ ಉಪನ್ಯಾಸ ಹಾಗೂ ಗ್ರಂಥ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಸಮಾಜದಿಂದ ಪಡೆದ ಸಹಾಯವನ್ನು ತನ್ನ ಜೋಳಿಗೆಯಲ್ಲಿ ಹಾಕಿಕೊಂಡು, ಗುರಿ ತಲುಪಿದ ಮೇಲೆ ಅದನ್ನು ಬಿಚ್ಚಿ ಬಯಲಾಗಿಸಿದ ಮಹಾನ್ ಮಾನವತಾವಾದಿಯಾಗಿದ್ದರು ಎಂದು ಸ್ಮರಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಜಿ.ಎಂ. ವಿಜಯಕುಮಾರ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಚಾರ್ಯ ಎಚ್.ಸಿ. ಪಾಟೀಲ್ ಅಧ್ಯಕ್ಷತೆವಹಿಸಿ ಮಾತನಾಡಿದರು.

ದೀಪಾ ಪ್ರಾರ್ಥಿಸಿದರು. ಮಹಾನಂದಾ ಹಿರೇಮಠ ಸ್ವಾಗತಿಸಿದರು. ಚೇತನಾ ನಾಯ್ಕ್ ನಿರೂಪಿಸಿದರು. ವಿಜಯಲಕ್ಷ್ಮೀ ಪಾಟೀಲ್ ವಂದಿಸಿದರು. ಉಪನ್ಯಾಸಕರಾದ ಮಧುಮತಿ ಗುಡ್ಡಾ, ಭಾಗೋಡಿ, ಬಸವರಾಜ್ ಪುರಾಣೆ, ಭಾಗ್ಯಲಕ್ಷ್ಮೀ, ಶರಣಮ್ಮ ಸೇರಿದಂತೆ ಬೋಧಕ ಬೋಧಕೇತರ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

11 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

11 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

11 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

12 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

12 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420