’ಗುರು-ಹಿರಿಯರನ್ನು ಗೌರವಿಸುವ ಸಂಸ್ಕೃತಿ ಶ್ರೇಷ್ಟವಾದದ್ದು: ಶಿವಾನಂದ ಪಿಸ್ತಿ

ಕಲಬುರಗಿ: ಮನೆ, ಸಮಾಜಕ್ಕೆ ಹಿರಿಯರು ಭಾರವಲ್ಲ. ಅವರು ತಮ್ಮ ಕುಟುಂಬ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅಪಾರವಾಗಿ ಶ್ರಮಿಸಿರುತ್ತಾರೆ. ಇಳಿವಯಸ್ಸಿನಲ್ಲಿ ವಯೋವೃದ್ಧರು ಭಾರವೆಂದು ವೃದ್ಧಾಶ್ರಮಕ್ಕೆ ನೂಕುವ ನೀಚ ಬುದ್ಧಿ ಬೇಡ. ಅವರಿಗೆ ಗೌರವ ನೀಡಿ, ಉತ್ತಮ ಆರೈಕೆ, ಆಶ್ರಯ ನೀಡುವುದು ಮಕ್ಕಳ, ಕಿರಿಯರ ಆದ್ಯ ಕರ್ತವ್ಯ. ಪೂಜ್ಯನೀಯವಾಗಿ ಗೌರವಿಸುವ ಸಂಸ್ಕೃತಿ ಶ್ರೇಷ್ಟವಾದದ್ದಾಗಿದೆ ಎಂದು ಸಮಾಜ ಸೇವಕ, ಮಹಾನಗರ ಪಾಲಿಕೆ ಸದಸ್ಯ ಶಿವಾನಂದ ಪಿಸ್ತಿ ಹೇಳಿದರು.

ನಗರದ ಹೊರವಲಯದ ಸೈಯದ್ ಚಿಂಚೋಳಿ ಕ್ರಾಸ್ ಸಮೀಪದಲ್ಲಿರುವ ’ಮಹಾದೇವಿ ತಾಯಿ ಮಹಿಳಾ ವಿದ್ಯಾವರ್ಧಕ ಸಂಘದ ವೃದ್ಧಾಶ್ರಮ’ದಲ್ಲಿ ’ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ತಮ್ಮ ೫೧ನೇ ಜನ್ಮದಿನದ ಪ್ರಯುಕ್ತ ಬುಧವಾರ ವೃದ್ಧಾಶ್ರಮದಲ್ಲಿರುವ ಎಲ್ಲರಿಗೂ ಸತ್ಕಾರ, ಹಣ್ಣುಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು.

ಗುವಿವಿಯ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಸುನೀಲಕುಮಾರ ಎಚ್.ವಂಟಿ ಮಾತನಾಡಿ, ಪಿಸ್ತಿಯವರು ಸಮಾಜಪರ, ಅಭಿವೃದ್ಧಿಪರವಿರುವ ವ್ಯಕ್ತಿಯಾಗಿದ್ದಾರೆ. ಕಳೆದ ೨೫ ವರ್ಷಗಳಿಂದ ನಾನು ತುಂಬಾ ಹತ್ತಿರದಿಂದ ಗಮನಿಸುತ್ತಿದ್ದು, ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ. ವೃದ್ಧಾಶ್ರಮದಲ್ಲಿ ಜನ್ಮದಿನ ಆಚರಿಸಿಕೊಳ್ಳುವ ಮೂಲಕ ಮಾದರಿಯಾಗಿದ್ದಾರೆ. ಅವರಲ್ಲಿರುವ ಸಮಾಜಪರ ಕಾಳಜಿ ಶ್ಲಾಘನೀಯವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಶಿವಾನಂದ ಪಿಸ್ತಿ ಅವರು ವೈಯಕ್ತಿವಾಗಿ ವೃದ್ಧಾಶ್ರಮಕ್ಕೆ ನಗದು ಹಣ ದಾನವನ್ನಾಗಿ ನೀಡಿದರು. ಕಜಾಪ ಜಿಲ್ಲಾಧ್ಯಕ್ಷ ಎಂ.ಬಿ.ನಿಂಗಪ್ಪ ಅವರಿಂದ ಜರುಗಿದ ಭಕ್ತಿ, ಜಾನಪದ ಗೀತೆಗಳು ಮನೆಸೂರೆಗೊಳಿಸಿದವು.

ಪ್ರಮುಖರಾದ ಎಚ್.ಬಿ.ಪಾಟೀಲ, ಸಿದ್ದರಾಮ ತಳವಾರ, ಮಹಾಂತೇಶ ಬಿ.ಬಿರಾದಾರ, ಶಿವಯೋಗಪ್ಪ ಬಿರಾದಾರ, ಶಿವಪುತ್ರಪ್ಪ ಗೊಬ್ಬೂರಕರ್, ಸೋಮೇಶ ಡಿಗ್ಗಿ, ಪ್ರಭುಲಿಂಗ ಮೂಲಗೆ, ಶರಣಪ್ಪ ಮಳ್ಳಿ, ಬಾಬುರಾವ ಹೊಳ್ಳಿ, ಅಶೋಕ ಭೋಸಗಾ, ಶಿವಾನಂದ ಮಳ್ಳಿ, ವೀರೇಶ ಫುಲಾರಿ, ರಾಜೇಂದ್ರ ಮದಗುಣಕಿ, ರಾಜು ಪಿಸ್ತಿ, ಹಾವಣ್ಣ ಸುಲ್ತಾನಪೂರ್, ಶರಣು ಪಾಟೀಲ, ಸತೀಶ ಸಾವಳಗಿ, ವೃದ್ಧಾಶ್ರಮದ ಭಾಗಿರತಿ ಎ.ಚೌಲ್, ಜಲಜಾಕ್ಷಿ ಕೋರೆ, ಬಸಮ್ಮ ಕೆ.ಸ್ಥಾವರಮಠ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

13 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

13 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

13 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

13 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

14 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

14 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420