ಬಿಸಿ ಬಿಸಿ ಸುದ್ದಿ

ಬಿಜೆಪಿ ಸರಕಾರದ ವಿರುದ್ಧ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬಾಗಲಕೋಟೆ : ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಜಿಲ್ಲಾ ಅಧ್ಯಕ್ಷರಾದ ಎಸ್ ಜಿ ನಂಜಯ್ಯನಮಠ ಇವರ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರಿಗೆ ದುರುದ್ದೇಶ ಪೂರ್ವಕಾಗಿ ಬಿಜೆಪಿ ಸರ್ಕಾರದಿಂದ ಇ.ಡಿ ದುರ್ಬಳಕೆ ಮಾಡಿ ಕಿರುಕುಳ ನೀಡುತ್ತಿರುವುದರ ವಿರುದ್ಧ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವ ಎಚ್ ವೈ ಮೇಟಿ ಮಾತನಾಡಿ ಈಗಿನ ಕೇಂದ್ರದ ಬಿಜೆಪಿ ಸರ್ಕಾರವು ಉದ್ದೇಶಪೂರ್ವಕವಾಗಿ ಗಾಂಧಿ ಪರಿವಾರದ ಷಡ್ಯಂತರವನ್ನು ರಚಿಸಿ ಗಾಂಧಿ ಪರಿವಾರದ ಆತ್ಮ ಬಲವನ್ನು ಕುಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸರ್ಕಾರವು ಇ. ಡಿ ಬಳಸಿಕೊಂಡು ಕಾಂಗ್ರೆಸ್ ಪಕ್ಷದ ಆತ್ಮ ಬಲವನ್ನು ಕುಗ್ಗಿಸುವ ಹಾಗೂ ದೇಶವನ್ನು ಕಟ್ಟಿದ ಕಾಂಗ್ರೆಸ್ ಪಕ್ಷದ ತೇಜೋವಧೆಗೆ ಬಿಜೆಪಿ ಸರ್ಕಾರವು ಪ್ರಯತ್ನಿಸುತಿದೆ ಎಂದು ಹೇಳಿದರು.

ಈ ಪ್ರತಿಭಟನೆಯಲ್ಲಿ ಭಾಗಿಯಾದ , ಮಾಜಿ ಸಚಿವ ಶಿವಾನಂದ ಪಾಟೀಲ,ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ,ಮಾಜಿ ಸಚಿವ ಅಜಯ ಕುಮಾರ ಸರನಾಯಕ ಮಾಜಿ ಶಾಸಕ ಜೆ ಟಿ ಪಾಟೀಲ, ನಿಂಗನಗೌಡ ಪಾಟೀಲ, ಸತೀಶ ಬಂಡಿವಡ್ಡ, ರಾಜು ಮನಿಕೇರಿ ಪೀರಪ್ಪ ಮ್ಯಾಗೇರಿ ,ರಫೀಕಸಾಬ ಬಾರಿ ಗಡ್ಡಿ ಮುನ್ನಾ ಸತಾರ್ಕರ ಶಬ್ಬೀರ ನದಾಫ,ಎಮ ಎಚ ಚಲವಾದಿ , ಆನಂದ ಶಿಲ್ಪಿ, ಅಬ್ದುಲ ರಜಾಕ ಬೆನೂರ, ಎಸ್ ಎನ್ ರಾಂಪುರ,ಸುನಿಲ ಕೊಡಬಾಗಿ ಮಲ್ಲು ಲಮಾಣಿ, ವಿಜಯಕುಮಾರ ನಾಯಕ್, ಹನುಮಂತ ರಾಕುಂಪಿ, ಶಶಿಕಾಂತ್ ಪೂಜಾರಿ, ಬಸ್ಸು ರಾಜ ಹೂವಿನಹಳ್ಳಿ, ರಸುಲ ಮುಜಾರ, ಶರೀಫ್ ಮುಲ್ಲಾ, ಸಂತೋಷ ಬಗಲಿದೇಸಾಯಿ, ಗಿರೀಶ್ ಅಂಕಲಗಿ, , ಶಶಿಕಾಂತ್ ಪೂಜೇರಿ, ರಾಹುಲ್ ಕಲುತಿ, ಬಾಬು ಇಟಗಿ, ಸಾಧಿಕ ಸೈಯದ ಅಲಿ, ಅಭಿಷೇಕ ತಳ್ಳಿಕೆರಿ, ಹನುಮಂತ ಭಜಂತ್ರಿ ಇನ್ನು ಮುಖಂಡರು ವಿವಿಧ ಘಟಕಗಳ ಅಧ್ಯಕ್ಷರರು ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

1 hour ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

1 hour ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago