ಬಸ್ ಸೌಲಭ್ಯಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

0
19

ಕಲಬುರಗಿ: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಸ್ಸಿನ ಸೌಲಭ್ಯ ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಕಾಳಗಿ ತಾಲ್ಲೂಕಿನ ಕೊಡ್ಲಿ ಕ್ರಾಸ್ ಬಳಿ ಸಾರಿಗೆ ಬಸ್ ತಡೆದು ಪ್ರತಿಭಟನೆ ನಡೆಯಿತು.

ರಟಕಲ್,  ಹುಲುಸಗುಡ, ಕಂಚನಾಳ, ಸುಂಠಾಣ ಕೊಡ್ಲಿ ಕ್ರಾಸ್ ಮಾರ್ಗವಾಗಿ ಕಾಳಗಿಗೆ ಶಾಲಾ ಕಾಲೆಜುಗಳಿಗೆ ಹೊಗಲು ಬಸ್ಸಿನ ಸೌಕರ್ಯ ವಿಲ್ಲದೆ ವಿಧ್ಯಾರ್ಥಿಗಳು ಪರದಾಡುತ್ತಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳ ಕ್ಲಾಸ್ ಗಳು ತಪ್ಪುತ್ತಿವೆ ಹೀಗಾಗಿ  ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಬರೆ ಎಳೆದಂತಾಗುತ್ತಿದೆ ಎಂದು ಮಮಶೇಟ್ಟಿ ಅವರು ಸಾರಿಗೆ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Contact Your\'s Advertisement; 9902492681

ಸಾರಿಗೆ ವ್ಯವಸ್ಥೆ ಇಲ್ಲದೇ ಹಳ್ಳಿಯ ಮಕ್ಕಳು ತುಂಬಾ ಸಂಕಷ್ಟದಲ್ಲಿದ್ದಾರೆ. ಬಸ್ಸಿಗೆ ಜೊತು ಬಿದ್ದು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ತಾಲ್ಲೂಕಿನಲ್ಲಿ ಬಸ್ ಸೌಕರ್ಯ ವ್ಯವಸ್ಥೆಯನ್ನು ತಕ್ಷಣವೇ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸೇರಿದಂತೆ ಹಲವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here