ಭಾಲ್ಕಿ: ಶರಣ ಕುಂಬಾರ ಗುಂಡಯ್ಯ ಜಯಂತಿ

ಭಾಲ್ಕಿ: ಬಸವಾದಿ ಶರಣರ ಸಮಕಾಲೀನ ಕುಂಬಾರ ಗುಂಡಯ್ಯ ಕಾಯಕ ನಿಷ್ಠರಾಗಿದ್ದರು. ಅವರು ಕಾರ್ಯಕ್ಷೇತ್ರ ಭಾಲ್ಕಿ ಆಗಿದೆ. ಅವರಿಂದ ಈ ಪಟ್ಟಣ ಐತಿಹಾಸಿಕ ಮಹತ್ವ ಪಡೆದಿದೆ. ಕೈಲಾಸ ಬೇಡ ಕಾಯಕವೇ ಇರಲಿ ಎಂಬುದು ಅವರ ದಿವ್ಯ ಸಂದೇಶವಾಗಿದೆ. ಇವರ ಪತ್ನಿ ಕೇತಲದೇವಿ ಅನಾಚಾರಿಗಳ ಸಂಗ ನರಕಕ್ಕೆ ಮೂಲ ಎಂದು ತಮ್ಮ ವಚನದಲ್ಲಿ ಬೋಧಿಸಿದ್ದಾರೆ ಎಂದು ಪೂಜ್ಯ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ನುಡಿದರು. ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮದಲ್ಲಿ ಏರ್ಪಡಿಸಿದ ೨೭೯ ನೇ ಮಾಸಿಕ ಶರಣ ಸಂಗಮ ಮತ್ತು ಕುಂಬಾರ ಗುಂಡಯ್ಯ ಜಯಂತಿ ಕಾರ್ಯಕ್ರಮದ ದಿವ್ಯಸನ್ನಿಧಾನ ವಹಿಸಿ ಪೂಜ್ಯ ಶ್ರೀಗಳು ಆಶೀರ್ವಚನಗೈದರು.

ಕರ್ನಾಟಕ ಜಾನಪದ ಪರಿಷತ್ತು ಭಾಲ್ಕಿ ಘಟಕದ ಅಧ್ಯಕ್ಷ ವಸಂತ ಹುಣಸನಾಳೆ ಅಧ್ಯಕ್ಷತೆ ವಹಿಸಿದ್ದರು. ತಮ್ಮ ಸೇವೆಯಿಂದ ನಿವೃತ್ತರಾದ ಕ್ರಾಂತಿವೀರ ಸಿರ್ಸೆ, ಬಸವರಾಜ ಬಿರಾದಾರ, ವೈ.ಆರ್.ಇಂಗಳೆ ಅವರಿಗೆ ಸನ್ಮಾನಿಸಲಾಯಿತು. ನಾಟಿವೈದ್ಯ ರವಿದಾಸ ಮೆಂಗಾ ಮುಖ್ಯ ಅತಿಥಿಗಳಾಗಿದ್ದರು.

ಭಾಲ್ಕಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸವಂತರಾಯ ಜಿಡ್ಡೆ ಅವರ ಹುಟ್ಟುಹಬ್ಬ ನಿಮಿತ್ಯ ಪೂಜ್ಯರಿಂದ ಆಶೀರ್ವಾದ ಪಡೆದರು. ಡೋಣಗಾಪೂರದ ಪೂಜ್ಯ ದೇವಮ್ಮತಾಯಿ, ಶಾಂತಮ್ಮ ವಾಡೆ, ಸಹದೇವ ಉಪಸ್ಥಿತರಿದ್ದರು.

ನಿರ್ಮಲಾ ಪ್ರಭುರಾವ ದೇವಣೆ ಭಕ್ತಿದಾಸೋಹ ವಹಿಸಿಕೊಂಡಿದ್ದರು. ಕುಂಬಾರ ಸಮಾಜದ ಅಧ್ಯಕ್ಷ ಜಯಪ್ರಕಾಶ ಕುಂಬಾರ ಅವರು ಬಸವಗುರುಪೂಜೆ ನೆರವೇರಿಸಿದರು. ರಾಜು ಜುಬರೆ ಸಾಮೂಹಿಕ ಪ್ರಾರ್ಥನೆ ನಡೆಸಿಕೊಟ್ಟರು.

ಯಲ್ಲನಗೌಡ ಬಾಗಲಕೋಟ, ಚನ್ನಬಸವ ವಡಗಾಂವ ಅವರಿಂದ ವಚನ ಗಾಯನ ನಡೆಯಿತು. ವೀರಣ್ಣ ಕುಂಬಾರ ಸ್ವಾಗತಿಸಿ ನಿರೂಪಿಸಿದರು. ಶಾಂತಯ್ಯ ಸ್ವಾಮಿ ವಂದಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420