ಜುಲೈ 26ಕ್ಕೆ ಜೇವರ್ಗಿಯಲ್ಲಿ ಕಾರ್ಗಿಲ್ ವಿಜಯ ದಿವಸ
ಕಲಬುರಗಿ: ಭಾರತ ದೇಶದ ಹೆಮ್ಮೆಯ ವೀರಯೋಧರ ಅಪ್ರತಿಮ ಹೋರಾಟ, ತ್ಯಾಗ, ಬಲಿದಾನದಿಂದ ಭಾರತದೇಶವು ೨೬ ಜುಲೈ, ೧೯೯೯ ರಂದು ಪಾಕಿಸ್ತಾನದ ವಿರುದ್ಧ ನಡೆದ ಕಾರ್ಗಿಲ್ ಯುದ್ಧದಲ್ಲಿ ವಿಜಯಸಾಧಿಸಿದ ಪ್ರತಿಕವಾಗಿ ಪ್ರತಿ ವರ್ಷ ದೇಶದಲ್ಲಿ ಕಾರ್ಗಿಲ್ ವಿಜಯೋತ್ಸವವನ್ನು ದೇಶ ಬಾಂಧವರು ಹೆಮ್ಮೆಯಿಂದ ಆಚರಿಸುತ್ತಾ ಬಂದಿದ್ದು ಈ ಬಾರಿ ಸಮಿತಿಯೂ ೨೩ ನೇ ವರ್ಷದ ಕಾರ್ಗಿಲ್ ವಿಜಯ ದಿವಸವನ್ನು ಜುಲೈ ೨೬ ರಂದು ಬೆಳ್ಳಿಗೆ ೧೦.೩೦ ಕ್ಕೆ ಜೇವರ್ಗಿ ಪಟ್ಟಣದ ಆಚರಿಸಲಿದ್ದಾರೆ.
ಬಸ್ ನಿಲ್ದಾಣದಿಂದ ಭೂತಪೂರ ಕಲ್ಯಾಣ ಮಂಟಪದ ವರೆಗೆ ವೀರಯೋಧರ ಭಾವಚಿತ್ರಗಳ ಮೆರವಣಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಭವ್ಯ ಮೆರವಣಿಗೆಯನ್ನು ಜೈ ಭಾರತ ಮಾತಾ ಸೇವಾ ಸಮಿತಿ (ರಿ) ನವ ದೆಹಲಿಯ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷರಾದ ಪರಮ ಪೂಜ್ಯ ಶ್ರೀ ಹವಾ ಮಲ್ಲಿನಾಥ ಮಹಾರಾಜ ನಿರಗುಡಿ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.
ನಂತರ ಜೇವರ್ಗಿ ಪಟ್ಟಣದ ಹೊರವಲಯದಲ್ಲಿರುವ ಭೂತಪೂರ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ ೧೧.೩೦ ಕ್ಕೆ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಭಾರತ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ಸೇವೆ ಸಲ್ಲಿಸಿ ನಿವೃತ್ತರಾದ ಯೋಧರಿಗೆ ಗೌರವ ಸನ್ಮಾನ ಹಮ್ಮಿಕೊಳ್ಳಲಾಗಿದೆ.
ಶಾಲಾ ಮಕ್ಕಳಿಂದ ದೇಶಭಕ್ತಿಯ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ, ಈ ವಿಜಯೋತ್ಸವ ಕುರಿತು ಭಾರತ ದೇಶದ ಹೆಮ್ಮೆಯ ವೀರಯೋಧರ ಅಪ್ರತಿಮ ಹೋರಾಟ, ತ್ಯಾಗ, ಬಲಿದಾನದ ಬಗ್ಗೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಅನೇಕ ವಾಗ್ಮಿಗಳು ಮಾತನಾಡಲಿದ್ದಾರೆ ಹಾಗೂ ಖ್ಯಾತ ಸಂಗೀತಗಾರಿಂದ ದೇಶಭಕ್ತಿ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದು. ಸಮಸ್ತ ದೇಶ ಬಾಂಧವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಜೈ ಭಾರತ ಮಾತಾ ಸೇವಾ ಸಮಿತಿ ವಕ್ತಾರ ವೈಜನಾಥ ಎಸ್.ಝಳಕಿ ಪ್ರಕಟಣೆ ಮೂಲಕ ಕೋರಿದ್ದಾರೆ.
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…
ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…