ಕಲಬುರಗಿ: ಬರವಣಿಗೆಗೆ ಸಮಾಜದ ಜವಾಬ್ದಾರಿ ಇರುತ್ತದೆ. ಸಮಾಜ ಬದಲಾವಣೆಗೆ ಕಾರಣವಾಗಿರುವಂತಹ ಸಾಹಿತ್ಯ, ನಾಟಕಗಳಿರಬೇಕು. ಕಲೆಗೆ ಕೊನೆ ಎಂಬುದಿಲ್ಲ ಎಂದು ಖ್ಯಾತ ಕಲಾವಿದೆ ಮಾಲತಿಶ್ರೀ ಮೈಸೂರು ಅಭಿಪ್ರಾಯಪಟ್ಟರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಕನ್ನಡ ಭವನದಲ್ಲಿ ಭಾನುವಾರ ಆಯೋಜಿಸಿದ್ದ ರಂಗಾಂತರಂಗ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿ: ಜಗತ್ತಿನಲ್ಲಿಯೇ ಪುರಾತನ, ಶ್ರೇಷ್ಠವಾದ ಭಾಷೆ ಕನ್ನಡ ಭಾಷೆ: ಸಿದ್ದಲಿಂಗ ದೇವರು
ರಂಗಭೂಮಿಯಿಂದಾಗಿ ಇಡೀ ನಾಡಿಗೆ ಪರಿಚಿತಳಾದ ನಾನು ೧೯೬೨ರಲ್ಲಿ ಬಣ್ಣ ಹಚ್ಷಿದವಳು. ಇಂದಿಗೂ ನಾಟಕದ ಗೀಳಿದೆ. ರಂಗಭೂಮಿಯ ಅನುಭವ ಬದುಕಿನ ಪಾಠ ಕಲಿಸಿಕೊಡುತ್ತದೆ ಎಂದರು. ನಾವು ಬೇಕಾದಷ್ಟು ಆಸ್ತಿ ಗಳಿಸಬಹುದು. ಆದರೆ ಜನರ ಪ್ರೀತಿ ಗಳಿಸುವುದು ಮುಖ್ಯ ಎಂದು ತಮ್ಮ ಮನದಾಳದ ಮಾತುಗಳನ್ನು ಹೊರ ಹಾಕಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಗುಲ್ಬರ್ಗ ವಿವಿ ರಿಜಿಸ್ಟ್ರಾರ್ ಪ್ರೊ. ವಿ.ಟಿ. ಕಾಂಬ್ಳೆ, ಕಥೆಗಾರ ಮಹಾಂತೇಶ ನವಲಕಲ್ ಮಾತನಾಡಿದರು. ದಿಶಾ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಶಿವಾನಂದ ಖಜೂರ್ಗಿ ವೇದಿಕೆಯಲ್ಲಿದ್ದರು. ಇದೇ ವೇಳೆಯಲ್ಲಿ ಕಲಾವಿದರಾದ ಗಂಗಾಧರ ಬಡಿಗೇರ, ಆಶಾ ಕಂಠಿ, ಶಾಂತಲಿಂಗಯ್ಯ ಮಠಪತಿ, ಅಶೋಕ ಕಾಳೆ, ಮಲ್ಲಿಕಾರ್ಜುನ ದೊಡ್ಡಮನಿ, ಮಾಣಿಕ ನಾಡಗುಂದ ಅವರನ್ನು ಸನ್ಮಾನಿಸಲಾಯಿತು.
ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಪ್ರಾಸ್ತಾವಿಕ ಮಾತನಾಡಿದರು. ಶಿವರಾಜ ಅಂಡಗಿ ನಿರೂಪಿಸಿದರು. ಸಿ.ಎಸ್. ಆನಂದ ಸ್ವಾಗತಿಸಿದರು. ರವೀಂದ್ರ ಭಂಟನಳ್ಳಿ ವಂದಿಸಿದರು.
ಇದನ್ನೂ ಓದಿ: ಎಸ್ಯುಸಿಐ (ಕಮ್ಯುನಿಸ್ಟ್) ಪ್ರತಿಭಟನೆ: ಜಿಎಸ್ಟಿ ತಿಗಣೆ ವಿರುದ್ಧ ಕಾಮ್ರೇಡರ ಆಕ್ರೋಶ
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…