ಹಿರಿಯರ ಸಂಘದಿಂದ ವ್ಯಕ್ತಿತ್ವ ವಿಕಸನ: ಬಸವರಾಜ್ ಪಾಟೀಲ್ ಸೇಡಂ

ಅನನ್ಯ ಮಹಾದೇವ ಅಭಿನಂದನಾ ಗ್ರಂಥ ಲೋಕಾರ್ಪಣೆ

ಕಲಬುರಗಿ- ಬದುಕು ಸಾರ್ಥಕವಾಗಲು ಹಿರಿಯ ವ್ಯಕ್ತಿಗಳ ಜತೆ ಕಾಲ ಕಳೆಯಬೇಕು. ಹಿರಿಯರಲ್ಲಿ ಅನುಭವದ ಬುತ್ತಿ ಇರುತ್ತದೆ. ಅವರಿಂದ ನಮ್ಮ ವ್ಯಕ್ತಿತ್ವ ಅರಳುತ್ತದೆ. ಸಜ್ಜನರ ಸಹವಾಸದಿಂದ ವ್ಯಕ್ತಿತ್ವ ವಿಕಾಸನಗೊಳ್ಳುತ್ತದೆ ಎಂದು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ ಹೇಳಿದರು.

ಭಾನುವಾರ ನಗರದ ಡಾ.ಡಾ. ಎಸ್. ಎಂ. ಪಂಡಿತ ರಂಗ ಮಂದಿರದಲ್ಲಿ ಶ್ರೀ ಮಹಾದೇವಪ್ಪ ಕಡೇಚೂರ್ ಅವರ ಅಭಿನಂದನಾ ಗ್ರಂಥ ಸಮಿತಿ ವತಿಯಿಂದ ಆಯೋಜಿಸಲಾದ ಹೈದ್ರಾಬಾದ್ ಸಂಸ್ಥಾನ ವಿಮೋಚನಾ ಹೋರಾಟಗಾರ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹಾದೇವಪ್ಪ ಕಡೇಚೂರ ಅವರ ಅಭಿನಂದನಾ ಸಮಾರಂಭ ಮತ್ತು ಅನನ್ಯ ಮಹಾದೇವ ಅಭಿನಂದನಾ ಗ್ರಂಥ ಹಾಗೂ ಹೈದ್ರಾಬಾದ್ ಸಂಸ್ಥಾನ ವಿಮೋಚನಾ ಹೋರಾಟದ ದಿಗ್ಗಜರು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಮಹಾದೇವಪ್ಪ ಕಡೇಚೂರ ಅವರು ಆದರ್ಶ ವ್ಯಕ್ತಿಯಾಗಿದ್ದರೆ. ಅವರ ಜೀವನ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದೆ. ನಮ್ಮ ಕುಟುಂಬದಲ್ಲಿಯೂ ಸ್ವಾತಂತ್ರ್ಯ ಹೋರಾಟಗಾರರು ಇದ್ದಾರೆ ಎಂಬುವುದೇ ಸಂತಸದ ವಿಚಾರವಾಗಿದೆ. – ಮಾಲಿಕಯ್ಯಾ ಗುತ್ತೇದಾರ್, ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಸಚಿವ.
ತಾಯಿ-ತಂದೆಯ ಆಶೀರ್ವಾದ, ಗುರುಗಳು ಮಾರ್ಗದರ್ಶನ ನನ್ನ ಜೀವನ ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ಇಂದಿಲ್ಲಿ ನನಗೆ ಅಭಿನಂದನೆ ಮಾಡುತ್ತಿರುವುದು ನೋಡಿದರೆ ನಾನೇ ಬಹಳ ಪುಣ್ಯವಂತ ಎಂಬ ಭಾವ ಮೂಡುತ್ತಿದೆ ಎಂದು ಮಹದೇವಪ್ಪ ಕಡೇಚೂರು ಅಭಿಮತ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಂಗಭೂಮಿ ಜೀವನದ ಪಾಠ ಕಲಿಸಿದೆ: ಮಾಲತಿಶ್ರೀ

ನಮ್ಮ ದೇಶ ಮುಂದೆ ಬರಲು ಮಹಾದೇವಪ್ಪ ಅವರಂತಹ ವ್ಯಕ್ತಿತ್ವದ ಎತ್ತರದ ವ್ಯಕ್ತಿ ಜತೆಯಲ್ಲಿ ನಮ್ಮನ್ನು ನಾವು ಸಮರ್ಪಣೆ ಮಾಡಿಕೊಳ್ಳಬೇಕು. ಇಂತಹ ಮೇರು ವ್ಯಕ್ತಿಗಳಿಂದ ನಮ್ಮ ಬದುಕು ಸಾರ್ಥಕ ವಾಗುತ್ತದೆ. ತಾಯಿ ಭಾರತಾಂಭೆ ಜಗತ್ತಿನಲ್ಲಿ ತಲೆಎತ್ತಿ ನಿಲ್ಲಲು ಸಾಧ್ಯವಾಗುತ್ತದೆ ಎಂದರು.

ಗುಲ್ಬರ್ಗ ವಿವಿ ಕುಲಪತಿ ಪ್ರೊ. ದಯಾನಂದ ಅಗಸರ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಸ್ವಾತಂತ್ರ ಹೋರಾಟದಲ್ಲಿ ಅನೇಕರು ತಮ್ಮ ಜೀವದ ಹಂಗು ತೊರೆದು ಹೋರಾಟ ಮಾಡಿದ್ದಾರೆ ಅಂತಹ ಮಹಾನ್ ಹೋರಾಟಗಾರರಲ್ಲಿ ಮಹದೇವಪ್ಪ ಕಡೇಚೂರ್ ಕೂಡ ಒಬ್ಬರಾಗಿದ್ದರೆ ಅವರ ಬದುಕಿನ ಸಾಧನೆ ಮುಂದಿನ ಪೀಳಿಗೆಗೆ ಆದರ್ಶವಾಗಲಿ. ಇವರ ಜೀವನದ ಈ ಗ್ರಂಥ ರಾಜ್ಯದ ವಿವಿಧ ವಿಶ್ವ ವಿದ್ಯಾಲಯಗಳಲ್ಲಿ ಹಾಗೂ ಶಾಲಾ ಪಠ್ಯ ಪುಸ್ತಕದಲ್ಲಿ ಸೇರಿಸಬೇಕು ಎಂದು ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಿಗೆ ಮನವಿ ಮಾಡಿದರು.

ಇದನ್ನೂ ಓದಿ: ಎಸ್‌ಯುಸಿಐ (ಕಮ್ಯುನಿಸ್ಟ್) ಪ್ರತಿಭಟನೆ: ಜಿಎಸ್‌ಟಿ ತಿಗಣೆ ವಿರುದ್ಧ ಕಾಮ್ರೇಡರ ಆಕ್ರೋಶ

ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ. ಸತೀಶ್ ಕುಮಾರ ಹೊಸಮನಿ ಅವರು ಅನನ್ಯ ಮಹದೇವ ಅಭಿನಂದನಾ ಗ್ರಂಥ ಬಿಡುಗಡೆ ಮಾಡಿ ಮಾತನಾಡಿ, ಅನನ್ಯ ಮಹದೇವ ಗ್ರಂಥ ಅತ್ಯುತ್ತಮ ಗ್ರಂಥವಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಈ ಗ್ರಂಥವನ್ನು ಸಿಗುವಂತೆ ಗ್ರಂಥಾಲಯ ಇಲಾಖೆ ವತಿಯಿಂದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ, ಆರ್.ಎಸ್.ಎಸ್ ನ ಉತ್ತರ ಪ್ರಾಂತ ಸಂಚಾಲಕ ಖಗೇಶನ್ ಪಟ್ಟಣಶೆಟ್ಟಿ ಅವರು ಮಾತನಾಡಿದರು. ಡಾ. ಕಲ್ಯಾಣರಾವ ಪಾಟೀಲ ಅವರು ಗ್ರಂಥ ಹಾಗೂ ಕೃತಿಗಳನ್ನು ಪರಿಚಯಿಸಿದರು.

ಇದನ್ನೂ ಓದಿ: ಪ್ರಾಮಾಣಿಕತೆಯ ಸೇವೆಯಿಂದ ಸಾರ್ಥಕತೆ ಸಾಧ್ಯ: ನಿವೃತ್ತ ನ್ಯಾಯಾಧೀಶ ಜಿ.ಕೆ.ಗೋಖಲೆ

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶರಣಕುಮಾರ ಮೋದಿ, ಶರಣಪ್ಪ ತಳವಾರ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ್ ತೆಗಲತಿಪ್ಪಿ, ರಮೇಶ್ ತಿಪನೂರ, ಸುರೇಶ್ ಹೇರೂರ್, ವೆಂಕಟೇಶ್ ಕಡೇಚೂರ್, ಸುನಿಲ್ ವಂಟಿ, ಭೀಮಣ್ಣ ಬೊನಾಳ್, ಮಹಾದೇವಯ್ಯ ಕರದಳ್ಳಿ ಸೇರಿದಂತೆ ಮತ್ತಿತರು ಇದ್ದರು. ಗ್ರಂಥ ಸಂಪಾದಕರಾದ ಡಾ. ಚಿ.ಸಿ. ಲಿಂಗಣ್ಣ ಅವರು ಸ್ವಾಗತಿಸಿದರು. ಡಾ. ಸದಾನಂದ ಪೆರ್ಲ ಅವರು ನಿರೂಪಿಸಿದರು.

ಇದನ್ನೂ ಓದಿ: ಪಿ.ಡಿ.ಎ ಇಂಜೀನಿಯರಿಂಗ್ ಕಾಲೇಜಿನ ಆಂಟಿ ರ‍್ಯಾಗಿಂಗ್ ಕಮೀಟಿಗೆ ನೇಮಕ

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

3 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

5 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

5 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

5 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420