ಸರಕಾರಿ ನೌಕರರ ಪ್ರಗತಿಗೆ ಸಂಘ ಶ್ರಮಿಸಲಿ: ಸೋನಾರೆ

0
78

ಸುರಪುರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಸುರಪುರ ತಾಲೂಕಾ ನೂತನವಾಗಿ ಜವಬ್ದಾರಿ ವಹಿಸಿಕೊಂಡಿರುವ ಪದಾಧಿಕಾರಿಗಳು ನೌಕರರ ಪ್ರಗತಿಗೆ ಪೂರಕವಾಗಿ ಕಾರ್ಯನಿರ್ವಹಿಸಬೆಕೆಂದು ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ ಹೇಳಿದರು.

ರಂಗಂಪೇಟೆಯ ಬಸವೇಶ್ವರ ಕಾಲೇಜಿನಲ್ಲಿ ಬಸವಪ್ರಭು ವಿದ್ಯಾವರ್ಧಕ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ನೂತನ ತಾಲೂಕಾ ನೌಕರರ ಸಂಘದ ಪದಾಧಿಕಾರಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ನೌಕರರ ಕಲ್ಯಾಣ ಅಭಿವೃದ್ಧಿ ಜೊತೆಗೆ ನೌಕರರ ಸರ್ವತೊಮುಖ ಬೆಳವಣಿಗೆ ನಿಮ್ಮ ಅವಧಿಯಲ್ಲಿಯಾಗಲಿ ಎಂದ ಅವರು ಸುರಪುರ ಘಟಕ ಅವಿರೋಧವಾಗಿ ಆಯ್ಕೆ ಆಗುವ ಮೂಲಕ ಇಡಿ ಜಿಲ್ಲೆಗೆ ಮಾದರಿಯಾಗಿದೆ ಎಂದು ಹೇಳಿದರು.

Contact Your\'s Advertisement; 9902492681

ತಾಲೂಕಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶರಣಗೌಡ ಪಾಟೀಲ್, ಕಾಲೇಜಿನ ಪ್ರಾಚಾರ್ಯ ವಿರೇಶ ಹಳಿಮನಿ, ಶಾಂತುನಾಯಕ ಮಾತನಾಡಿದರು. ನೂತನ ತಾಲೂಕ ಅಧ್ಯಕ್ಷರಾದ ಸಂಜಿವ ಕುಮಾರ ದರಬಾರಿ, ಪ್ರಧಾನ ಕಾರ್ಯದರ್ಶಿ ಶರಣಬಸವ ಗಚ್ಚಿನಮನಿ, ಕ್ರೀಡಾ ಕಾರ್ಯದರ್ಶಿ ಸಿದ್ದಪ್ಪ ಸಾಲಿ ಇವರುಗಳನ್ನು ಸನ್ಮಾನಿಸಿ ಅಭಿನಂದಿ ಸಲಾಯಿತು,ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಪ್ರಕಾಶ ಅಂಗಡಿ ಕನ್ನೆಳ್ಳಿ ಮಾತನಾಡಿ, ನೌಕರರ ಕ್ಷೇಮಾಭಿವೃದ್ಧಿ ಜೊತೆಗೆ ನಮ್ಮ ತಾಲೂಕಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಫಲಿತಾಂಶದ ಕಡೆ ನೌಕರರ ಸಂಘ ಗಮನಹರಿಸಬೇಕು, ನೌಕರಿಗಾಗಿ ಹಾಗು ವಿದ್ಯಾರ್ಥಿಗಳಿಗೆ ಹೆಚ್ಚಿನ ತರಬೆತಿ ಕಾರ್ಯಾಗಾರ ಕಮ್ಮಟಗಳು ತಮ್ಮ ಅವಧಿಯಲ್ಲಿ ನಡೆಯಲಿ ಎಂದು ಹೇಳಿದರು. ಕಾರ್ಯಕ್ರಮವನ್ನು ಬಿರೇಶ ಕುಮಾರ ದೆವತ್ಕಲ್ ನಿರೂಪಿಸಿದರು, ಬಲಭೀಮ ಪಾಟೀಲ್ ಸ್ವಾಗತಿಸಿದರು ಶ್ರೀಕಾಂತ ರತ್ತಾಳ ಪ್ರಾರ್ಥಿಸಿದರು, ರುದ್ರಪ್ಪ ಕೆಂಭಾವಿ ವಂಧಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here