ಜಯನಗರದಲ್ಲಿ ಶ್ರಾವಣ ಮಾಸದ ಅಂಗವಾಗಿ ಅಧ್ಯಾತ್ಮಿಕ ಪ್ರವಚನ: ಲಿಂಗರಾಜ ಸಿರಗಾಪೂರ

ಕಲಬುರಗಿ:ನಗರದ ಜಯನಗರ ಶಿವ ಮಂದಿರದಲ್ಲಿ ಪ್ರತಿ ವರ್ಷದಂತೆ ಜಯನಗರ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಶ್ರಾವಣ ಮಾಸದ ನಿಮಿತ್ತ ವಿನೂತನ ರೀತಿಯಲ್ಲಿ ಒಂದು ತಿಂಗಳು “ಶರಣರ ಧರ್ಮ -ಅಧ್ಯಾತ್ಮಿಕ ಪ್ರವಚನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಬಾರಿ “ಶರಣರ ಧರ್ಮ” ಪ್ರವಚನವನ್ನು 29 ಶುಕ್ರವಾರ ರಿಂದ 28-8-2022 ರವರೆಗೆ ದಿನ ನಿತ್ಯ ಸಾಯಂಕಾಲ 7 ರಿಂದ 8 ಗಂಟೆವರೆಗೆ ಜರುಗುವುದು.ಪ್ರವಚನವನ್ನು ಖ್ಯಾತ ಪ್ರವಚನಕಾರ ಹಾಗೂ ಸಾಹಿತಿ ಪಂ.ವೇ.ಶಿವಕವಿ ಜೋಗೂರ ಅವರು ನಡೆಸಿಕೊಡುವರು.”ಶರಣರ ಧರ್ಮ” ಎಂಬ ಅಧ್ಯಾತ್ಮಿಕ ಪ್ರವಚನ ಸಾರ್ವಕಾಲಿಕಕ್ಕೂ ಶ್ರೇಷ್ಠ.ಶರಣರ ಆಧ್ಯಾತ್ಮಿಕ ಚಿಂತನೆಗಳು,ಶರಣರ ನುಡಿಗಳು ಹಾಗೂ ನಾಡಿಗೆ ನೀಡಿದ ಸಂದೇಶಗಳನ್ನು ಜನರಿಗೆ ಅರ್ಥವಾಗುವಂತೆ ತಿಳಿಸುವ ಉದ್ದೇಶದಿಂದ ಮತ್ತು ಶರಣರ ಮೌಲ್ಯಗಳನ್ನು ಜಗಕೆ ಸಾರಬೇಕೆಂಬ ಸದುದ್ದೇಶದಿಂದ ಪ್ರವಚನ ಕಾರ್ಯಕ್ರಮ ಪ್ರತಿ ವರ್ಷ ಜಯನಗರ ಶಿವಮಂದಿರದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.

ಕಳೆದ ಎರಡು ವರ್ಷಗಳಿಂದ ಕೋವಿಡ-19 ಹಾವಳಿಯಿಂದ ಪ್ರವಚನವನ್ನು ರದ್ದು ಗೊಳಿಸಿ ದಿನ ನಿತ್ಯ ಸರಳವಾಗಿ ಪೂಜೆ ಪುನಸ್ಕಾರ ಮಾಡುವುದರ ಮೂಲಕ ಶ್ರಾವಣ ಮಾಸದ ಆಚರಣೆ ಮಾಡಲಾಯಿತು.ಈ ವರ್ಷ ಕೊರೊನಾ ಇಲ್ಲದೇ ಇರುವುದರಿಂದ ಮತ್ತು ಜನರ ಆಶಯದಂತೆ ಈ ಬಾರಿ ಹಮ್ಮಿಕೊಳ್ಳಲಾಗಿದೆ.ಪ್ರವಚನದ ಜೊತೆಗೆ ಅಧ್ಯಾತ್ಮಿಕ ಚಿಂತನೆಗಳು ಹಾಗೂ ಉಪನ್ಯಾಸಗಳು ಜರುಗುವವು.ಕಲ್ಯಾಣ ಕರ್ನಾಟಕದ ಪ್ರಮುಖ ಮಠದ ಮಠಾಧೀಶರು ಮತ್ತು ಮಹಾಮನೆಯ ಶರಣರನ್ನು ಆಹ್ವಾನಿಸಲಾಗುವುದು.

ಕಾರ್ಯಕ್ರಮವನ್ನು ಜಯನಗರ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ಗೌರವಾಧ್ಯಕ್ಷರು ಆಗಿರುವ ಎಚ್ಕೆಇ ಸಂಸ್ಥೆಯ ಅಧ್ಯಕ್ಷ ಡಾ.ಭೀಮಾಶಂಕರ ಬಿಲಗುಂದಿ ಅವರು ಉದ್ಘಾಟಿಸುವರು.ಮುಖ್ಯ ಅತಿಥಿಗಳಾಗಿ ಶಾಸಕ ಹಾಗೂ ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ, ಹಿರಿಯ ಪತ್ರಕರ್ತ ಪಿ.ಎಂ.ಮಣ್ಣೂರ, ಮಹಾನಗರ ಪಾಲಿಕೆ ಸದಸ್ಯ ವೀರಣ್ಣ ಹೊನ್ನಳ್ಳಿ,ಸಾಹಿತಿ ಹಾಗೂ ಲೇಖಕ ಬಿ. ಭಾಗವಹಿಸಲಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

8 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

11 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420