ಎಸ್‌ಆರ್‌ಜಿ ಶಾಲೆ ಮಕ್ಕಳಿಂದ ಕಾರ್ಗಿಲ್ ವಿಜಯೋತ್ಸವಆಚರಣೆ

0
53

ಆಳಂದ: ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದಎಸ್‌ಆರ್‌ಜಿಆಂಗ್ಲ್ ಮಾಧ್ಯಮ ಶಾಲೆಯಿಂದ ನಗರದ ಪ್ರಮುಖ ಸ್ಥಳಗಳಲ್ಲಿ ಕಾರ್ಗಿಲ್ ವಿಜಯೋತ್ಸವ ದಿನ ಆಚರಣೆ ಮಾಡುವುದರ ಮೂಲಕ ವೀರಯೋಧರಿಗೆಗೌರವ ಸಲ್ಲಿಸಲಾಯಿತು.

ಆಳಂದ ಪಟ್ಟಣದ ಶ್ರೀರಾಮ ಮಾರುಕಟ್ಟೆಆವರಣ ಹಾಗೂ ಹಳೆಯ ತಹಸೀಲ ಕಚೇರಿಯ ಮುಂದೆ ಸೇರಿದ ನೂರಾರು ಸಂಖ್ಯೆಯ ವಿದ್ಯಾರ್ಥಿಗಳು ದೇಶಭಕ್ತಿಯ ಗೀತೆಗಳಿಗೆ ನೃತ್ಯ ಮಾಡುವುದರ ಮೂಲಕ ಯೋಧರಿಗೆಗೌರವ ಸಲ್ಲಿಸಿ ಕಾರ್ಗಿಲ್ ವಿಜಯೋತ್ಸವ ದಿನ ಆಚರಿಸಿದರು.

Contact Your\'s Advertisement; 9902492681

ವೀರ ಮರಣ ಹೊಂದಿದಯೋಧರ ಭಾವಚಿತ್ರಗಳು ಹಾಗೂ ದೇಶ ಪ್ರೇಮದ ಭಿತ್ತಿ ಪತ್ರಗಳು ಸಾರ್ವಜನಿಕರ ಗಮನ ಸೆಳೆದವು.ಜಿಟಿಜಿಟಿ ಮಳೆಯಲ್ಲೂ ಉತ್ಸಾಹದಿಂದ ನೃತ್ಯ ಮಾಡಿದ ವಿದ್ಯಾರ್ಥಿಗಳನ್ನು ಕಂಡು ಸಾರ್ವಜನಿಕರು ಪ್ರಶಂಸೆಯ ಸುರಿಮಳೆಗೈದರು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಲಾಡಮುಗಳಿಯ ಅಭಿನವ ಬಸವಲಿಂಗ ಸ್ವಾಮೀಜಿ, ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಲ್ಲಿ ದೇಶಪ್ರೇಮ ಬೆಳಸಿದರೆ ಮುಂದೆ ಮಕ್ಕಳು ದೇಶ ಸೇವೆಯಲ್ಲಿಅಭಿಮಾನದಿಂದ ಪಾಲ್ಗೊಳ್ಳುತ್ತಾರೆ ಎಂದುಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹಾಯಕ ಆಡಳಿತಾಧಿಕಾರಿ ಹಾಗೂ ಕಸಾಪ ಅಧ್ಯಕ್ಷ ಹಣಮಂತ ಶೇರಿ, ಶಾಲೆಯ ಪ್ರಾಚಾರ್ಯೆಜ್ಯೋತಿ ವಿಶಾಕ್ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here