ಆಳಂದ: ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದಎಸ್ಆರ್ಜಿಆಂಗ್ಲ್ ಮಾಧ್ಯಮ ಶಾಲೆಯಿಂದ ನಗರದ ಪ್ರಮುಖ ಸ್ಥಳಗಳಲ್ಲಿ ಕಾರ್ಗಿಲ್ ವಿಜಯೋತ್ಸವ ದಿನ ಆಚರಣೆ ಮಾಡುವುದರ ಮೂಲಕ ವೀರಯೋಧರಿಗೆಗೌರವ ಸಲ್ಲಿಸಲಾಯಿತು.
ಆಳಂದ ಪಟ್ಟಣದ ಶ್ರೀರಾಮ ಮಾರುಕಟ್ಟೆಆವರಣ ಹಾಗೂ ಹಳೆಯ ತಹಸೀಲ ಕಚೇರಿಯ ಮುಂದೆ ಸೇರಿದ ನೂರಾರು ಸಂಖ್ಯೆಯ ವಿದ್ಯಾರ್ಥಿಗಳು ದೇಶಭಕ್ತಿಯ ಗೀತೆಗಳಿಗೆ ನೃತ್ಯ ಮಾಡುವುದರ ಮೂಲಕ ಯೋಧರಿಗೆಗೌರವ ಸಲ್ಲಿಸಿ ಕಾರ್ಗಿಲ್ ವಿಜಯೋತ್ಸವ ದಿನ ಆಚರಿಸಿದರು.
ವೀರ ಮರಣ ಹೊಂದಿದಯೋಧರ ಭಾವಚಿತ್ರಗಳು ಹಾಗೂ ದೇಶ ಪ್ರೇಮದ ಭಿತ್ತಿ ಪತ್ರಗಳು ಸಾರ್ವಜನಿಕರ ಗಮನ ಸೆಳೆದವು.ಜಿಟಿಜಿಟಿ ಮಳೆಯಲ್ಲೂ ಉತ್ಸಾಹದಿಂದ ನೃತ್ಯ ಮಾಡಿದ ವಿದ್ಯಾರ್ಥಿಗಳನ್ನು ಕಂಡು ಸಾರ್ವಜನಿಕರು ಪ್ರಶಂಸೆಯ ಸುರಿಮಳೆಗೈದರು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಲಾಡಮುಗಳಿಯ ಅಭಿನವ ಬಸವಲಿಂಗ ಸ್ವಾಮೀಜಿ, ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಲ್ಲಿ ದೇಶಪ್ರೇಮ ಬೆಳಸಿದರೆ ಮುಂದೆ ಮಕ್ಕಳು ದೇಶ ಸೇವೆಯಲ್ಲಿಅಭಿಮಾನದಿಂದ ಪಾಲ್ಗೊಳ್ಳುತ್ತಾರೆ ಎಂದುಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹಾಯಕ ಆಡಳಿತಾಧಿಕಾರಿ ಹಾಗೂ ಕಸಾಪ ಅಧ್ಯಕ್ಷ ಹಣಮಂತ ಶೇರಿ, ಶಾಲೆಯ ಪ್ರಾಚಾರ್ಯೆಜ್ಯೋತಿ ವಿಶಾಕ್ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…